July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬಾಜಾರು – ಜೋಡುಕಟ್ಟೆ ರಸ್ತೆ ಕೆಸರುಮಯ ಓಡಾಟ ಶೋಚನೀಯ ! : ಹಲವು ವರ್ಷಗಳಿಂದ ದೊರೆಯದ ಕಾಯಕಲ್ಪ

ಬೆಳ್ತಂಗಡಿ: ತಾಲೂಕಿನ ತೆಕ್ಕಾರು ಗ್ರಾಮ ಪಂಚಾಯತ್ ವ್ಯಾಪ್ತಿಯ ಬಾಜಾರು – ಜೋಡುಕಟ್ಟೆ ಸಂಪರ್ಕಿಸುವ ರಸ್ತೆ ಸಂಪೂರ್ಣ ಕೆಸರುಮಯವಾಗಿದ್ದು ಜನರು, ಸವಾರರು ಓಡಾಟ ಶೋಚನೀಯ ವಾಗಿದೆ. ರಸ್ತೆ ಅಭಿವೃದ್ಧಿ ಕುರಿತು ಹಲವು ವರ್ಷಗಳಿಂದ ಮನವಿ ಸಲ್ಲಿಸಿದರು ಯಾವುದೇ ಕಾಯಕಲ್ಪ ದೊರೆಯದೆ ನಾಗರೀಕರ ಬದುಕು ದುಸ್ತರವಾಗಿದೆ.

ಸುಮಾರು 700 ಮೀಟರ್ ಉದ್ದವಿರುವ ಜಿಲ್ಲಾ ಪಂಚಾಯತ್ ರಸ್ತೆ ಇದಾಗಿದ್ದು ಡಾಮರು ಜಲ್ಲಿಕಲ್ಲುಗಳು ಎದ್ದು ಹೋಗಿ ಮಣ್ಣಿನ ಮಾರ್ಗ ನಿರ್ಮಾಣವಾಗಿದ್ದು ಎಡೆಬಿಡದೆ ಸುರಿದ ಮಳೆಗೆ ರಸ್ತೆ ಸಂಪೂರ್ಣ ಕೆಸರುಮಯಗೊಂಡಿದ್ದು ಓಡಾಡಲು ಅಸಾಧ್ಯವಾದ ರೀತಿಯಲ್ಲಿದೆ.

ಶೋಚನೀಯ ಸ್ಥಿತಿಯಲ್ಲಿ ಇರುವ ಈ ರಸ್ತೆ ಅಭಿವೃದ್ಧಿ ಕುರಿತು ಸತತ ಏಳು ವರ್ಷಗಳಿಂದ ಹಲವಾರು ಬಾರಿ ಮನವಿ ಸಲ್ಲಿಸಿದರು ಜನಪ್ರತಿನಿಧಿಗಳ ಭರವಸೆ ನೀಡುತ್ತಾರೆ ಹೊರತು ಕಾಯಕಲ್ಪ ಹಾದಿ ಇನ್ನೂ ಕಂಡಿಲ್ಲ‌.

ತೆಕ್ಕಾರು ಪ್ಯಾಕ್ಸ್, ನ್ಯಾಯ ಬೆಲೆ, ಶಾಲೆಗೆ ಹೋಗುವ ಪ್ರಮುಖ ರಸ್ತೆಯಾಗಿದೆ. ಬಸ್. ಸಂಚಾರವೂ ಇದ್ದು ಇದೀಗ ರಸ್ತೆ ಸಂಪೂರ್ಣ ಹದಗೆಟ್ಟಿದ್ದು, ಜನರು ನಡೆದುಕೊಂಡು ಹೋಗಲು ಅಸಾಧ್ಯಗೊಂಡಿರುವ ಸ್ಥಿತಿಯಲ್ಲಿದೆ. ಸಂಬಂಧಪಟ್ಟ ಇಲಾಖೆ ಗಮನಹರಿಸಿ ಸೂಕ್ತ ರೀತಿಯಲ್ಲಿ ರಸ್ತೆಗೆ ಕಾಯಕಲ್ಪ ನೀಡಬೇಕೆಂದು ಸಾರ್ವಜನಿಕರು ಆಗ್ರಹ.
ವರದಿ :ಮನೀಷ್ ವಿ.ಅಂಚನ್ ಕುಕ್ಕಿನಡ್ಡ

Related posts

ರೆಖ್ಯ : ಮಳೆಯಿಂದ ಹಾನಿಗೊಳಗಾದ ಸ್ಥಳಕ್ಕೆ ಬಿಜೆಪಿ ಬೆಳ್ತಂಗಡಿ ಮಂಡಲದ ವತಿಯಿಂದ ಭೇಟಿ

Suddi Udaya

ತೆಂಕಕಾರಂದೂರು ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ಸಂಭ್ರಮದ ಜಾತ್ರೋತ್ಸವ

Suddi Udaya

ಅಳದಂಗಡಿ ಮಹಾಗಣಪತಿ ದೇವಸ್ಥಾನದ ಆಡಳಿತಾಧಿಕಾರಿಯಾಗಿ ಡಾ. ರಮೇಶ್ ನೇಮಕ

Suddi Udaya

ಗೇರುಕಟ್ಟೆ ಕೀರ್ತಿ ಶೇಷ ನರಸಿಂಹ ಮೂರ್ತಿ ಹಾಗೂ ಕೀರ್ತಿ ಶೇಷ ಸುರೇಶ್ ಪೈಯವರಿಗೆ ನುಡಿನಮನ ಹಾಗೂ ಸಂಸ್ಮರಣೆ ಯಕ್ಷಗಾನ ತಾಳಮದ್ದಳೆ 

Suddi Udaya

ಕರಾಯ ಕಲ್ಲೇರಿಯಲ್ಲಿ ಸಾರ್ವಜನಿಕ ಸ್ಥಳದಲ್ಲಿ ಇಸ್ಪೀಟ್ ಆಟ : ಉಪ್ಪಿನಂಗಡಿ ಪೊಲೀಸರ ದಾಳಿ‌ ನಗದು ಸಹಿತ ಐವರು ವಶಕ್ಕೆ

Suddi Udaya

ಆಕಸ್ಮಿಕವಾಗಿ ಬಾವಿಗೆ ಜಾರಿ ಬಿದ್ದು ವೃದ್ಧೆ ಸಾವು

Suddi Udaya
error: Content is protected !!