September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ: ಡಿ.ಕೆ.ಆರ್.ಡಿ.ಎಸ್ ನಿಂದ ಸಾಮರ್ಥ್ಯ ವರ್ಧನಾ ತರಬೇತಿ

ಬೆಳ್ತಂಗಡಿ: ಮಿಸೇರಿಯೋರ್ ಪ್ರಾಯೋಜಕತ್ವದಲ್ಲಿ ಕ್ರಾಸ್ ಸಂಸ್ಥೆ ನೇತೃತ್ವದಲ್ಲಿ ಡಿ.ಕೆ.ಆರ್.ಡಿ.ಎಸ್ ಸಂಸ್ಥೆಯ ಸಹಕಾರದಿಂದ ನಡೆಸುತ್ತಿರುವ ಮಹಿಳಾ ಸಬಲೀಕರಣ ಯೋಜನೆಯ ಒಕ್ಕೂಟಗಳ ಸದಸ್ಯರಿಗೆ ಸಾಮರ್ಥ್ಯ ವರ್ಧನಾ ತರಬೇತಿಯನ್ನು ಸಾನ್ ಟವರ್ ಬೆಳ್ತಂಗಡಿ ಇಲ್ಲಿ ಮೇ 23 ರಂದು ಆಯೋಜಿಸಲಾಗಿತ್ತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸ್ನೇಹಕಿರಣ್ ಜಿಲ್ಲಾಒಕ್ಕೂಟದ ಅಧ್ಯಕ್ಷೆ ಶ್ರೀಮತಿ ಎಲಿಯಮ್ಮ ತೋಮಸ್ ವಹಿಸಿದ್ದರು. ಸಂಪನ್ಮೂಲ ವ್ಯಕ್ತಿಯಾಗಿ ಡಾ. ಧನೇಶ್ವರಿ ಪ್ರಾಧ್ಯಾಪಕರು, ಸಮಾಜ ಕಾರ್ಯ ವಿಭಾಗ, ಎಸ್.ಡಿ.ಎಮ್. ಕಾಲೇಜು ಉಜಿರೆ ಇವರು ಒಕ್ಕೂಟಗಳ ಸದಸ್ಯರು ನಾಯಕತ್ವ ವಹಿಸಿ ಸಂಘಟನೆಗಳನ್ನು ಉತ್ತಮ ರೀತಿಯಲ್ಲಿ ಮುನ್ನಡೆಸುವ ಬಗ್ಗೆ ತರಬೇತಿ ನೀಡಿದರು.

ಡಿ.ಕೆ.ಆರ್.ಢಿ.ಎಸ್ ಸಂಸ್ಥೆಯ ನಿರ್ದೇಶಕರಾದ ವಂ.ಫಾ.ಬಿನೋಯಿ ಎ.ಜೆ ಪ್ರಾಸ್ತಾವಿಕವಾಗಿ ಮಾತನಾಡಿದರು. ಸ್ನೇಹ ಜ್ಯೋತಿ ಒಕ್ಕೂಟದ ಉಪಾಧ್ಯಕ್ಷೆ ಶ್ರೀಮತಿ ಜಿನ್ಸಿ ರಾಜೇಶ್ ಸ್ವಾಗತಿಸಿದರು. ಕಿರಣ್ ತಾಲೂಕು ಒಕ್ಕೂಟದ ಜೊತೆ ಕಾರ್ಯದರ್ಶಿ ಶ್ರೀಮತಿ ನಿಶಾ ವಂದಿಸಿದರು. ಸ್ನೇಹಕಿರಣ್ ಜಿಲ್ಲಾ ಒಕ್ಕೂಟದ ಕೋಶಾಧಿಕಾರಿ ಶ್ರೀಮತಿ ಮಂಜುಳಾ ಜೋನ್ ಕಾರ್ಯಕ್ರಮ ನಿರೂಪಿಸಿದರು. ಕಾರ್ಯಕ್ರಮದಲ್ಲಿ ತಾಲೂಕು ಒಕ್ಕೂಟಗಳ ಪದಾಧಿಕಾರಿಗಳು ಹಾಗೂ ಸಂಘಗಳಿಂದ ಆಯ್ಕೆ ಮಾಡಿರುವ ವಿವಿಧ ಕ್ರಿಯಾಶೀಲ ನಾಯಕರುಗಳು ಪಾಲ್ಗೊಂಡರು.

Related posts

ಬೆಂಗಳೂರಿನ ಕನ್ಸೇರೋ ಕಂಪೆನಿಯ ಉದ್ಯೋಗಿಗಳಿಂದ ಪರಶುರಾಮ ವನದಲ್ಲಿ ವನಮಹೋತ್ಸವ

Suddi Udaya

ವೇಣೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಿಂದ 80ನೇ ಸ್ವಾತಂತ್ರ್ಯ ದಿನಾಚರಣೆ

Suddi Udaya

ಜೂ.21: ಧರ್ಮಸ್ಥಳ ಪ್ರಾ.ಕೃ.ಪ.ಸ. ಸಂಘದ ನೂತನ ವಾಣಿಜ್ಯ ಕಟ್ಟಡ ‘ಉನ್ನತಿ’ ಉದ್ಘಾಟನೆ

Suddi Udaya

ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲದ ಮಹಿಳಾಮೋರ್ಚಾದ ವತಿಯಿಂದ ವಿಶ್ವ ಮಹಿಳಾ ದಿನಾಚರಣೆ

Suddi Udaya

ರಾಜ್ಯಮಟ್ಟದ ಎನ್ ಎಂ ಎಂ ಎಸ್ ಪರೀಕ್ಷೆಯಲ್ಲಿ ಬಡಗಕಾರಂದೂರು ಶಾಲೆಯ ವಿದ್ಯಾರ್ಥಿನಿ ರಮ್ಯಶ್ರೀ ವಿದ್ಯಾರ್ಥಿ ವೇತನಕ್ಕೆ ಆಯ್ಕೆ

Suddi Udaya

ರಾಜ್ಯ ನಾರಾಯಣಗುರು ಅಭಿವೃದ್ಧಿ ನಿಗಮದ ಕಚೇರಿ ಉದ್ಘಾಟನೆ

Suddi Udaya
error: Content is protected !!