25.7 C
ಪುತ್ತೂರು, ಬೆಳ್ತಂಗಡಿ
March 7, 2026
ತಾಲೂಕು ಸುದ್ದಿಬೆಳ್ತಂಗಡಿವರದಿ

ಮಿತ್ತಬಾಗಿಲು: ಮಕ್ಕಳ ಬೇಸಿಗೆ ಶಿಬಿರದ ಸಮಾರೋಪ ಸಮಾರಂಭ

ಮಿತ್ತಬಾಗಿಲು ಗ್ರಾಮ ಪಂಚಾಯತ್ ಅರಿವು ಮತ್ತು ಮಾಹಿತಿ ಕೇಂದ್ರದಲ್ಲಿ ಮಕ್ಕಳ ಬೇಸಿಗೆ ಶಿಬಿರದ ಸಮಾರೋಪ ಸಮಾರಂಭ ಗ್ರಾಮ ಪಂಚಾಯತ ಕಛೇರಿ ಸಭಾಂಗಣದಲ್ಲಿ ಮೇ 05 ರಿಂದ 19 ರವರೆಗೆ ಆಯೋಜಿಸಲಾದ ಬೇಸಿಗೆ ಶಿಬಿರದ ಸಮರೋಪ ಸಮಾರಂಭವು ಪಂಚಾಯತ್‌ ಅಧ್ಯಕ್ಷ ವಿನಯಚಂದ್ರ ಅಧ್ಯಕ್ಷತೆಯಲ್ಲಿ ಮೇ 23 ರಂದು ನಡೆಯಿತು.

ವೇದಿಕೆಯಲ್ಲಿ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಮೋಹನ ಬಂಗೇರ ಕೆ, ಉಪಾಧ್ಯಕ್ಷೆ ಶ್ರೀಮತಿ ವಿಜಯ ರಾಮಣ್ಣ, ಸದಸ್ಯ ಚಂದ್ರ ಶೇಖರ ಗೌಡ, ಸುಜ್ಞಾನ ಸಂಜೀವಿನಿ ಒಕ್ಕೂಟದ ಅಧ್ಯಕ್ಷೆ ಶ್ರೀಮತಿ ವತ್ಸಲಾ, ಗ್ರಂಥಾಲಯ ಮೇಲ್ವಿಚಾರಕಿ ಶ್ರೀಮತಿ ಸುಜಾತ ಜಿ ಉಪಸ್ಥಿತರಿದ್ದರು.

ಶಿಬಿರಾರ್ಥಿಗಳಾದ ಕು. ಹಂಶಿಕಾ ಮತ್ತು ವರ್ಷಿಣಿ ಪ್ರಾರ್ಥಿಸಿ, ಗ್ರಂಥಾಲಯ ಮೇಲ್ವಿಚಾರಕಿ ಸುಜಾತ ಜಿ ಸ್ವಾಗತಿಸಿದರು. ಶಿಬಿರಾರ್ಥಿಗಳಿಗೆ ಪ್ರಮಾಣ ಪತ್ರ ಹಾಗೂ ಸ್ಮರಣಿಕೆಯನ್ನು ನೀಡಲಾಯಿತು. ಸುಜ್ಞಾನ ಸಂಜೀವಿನಿ ಮಹಿಳಾ ಒಕ್ಕೂಟದ ಎಂ.ಬಿ.ಕೆ,ಎಲ್ ಸಿ ಆ‌ರ್ ಪಿ, ಕೃಷಿ ಸಖಿ, ಪಶು ಸಖಿ ಮತ್ತು ಸದಸ್ಯರು ಹಾಜರಿದ್ದರು. ಗ್ರಾಮ ಪಂಚಾಯತ್ ಸಿಬ್ಬಂದಿಗಳು ಸಹಕರಿಸಿದರು. ಕು| ಚಾರ್ವಿ ಮೋಹನ್ ಕಾರ್ಯಕ್ರಮ ನಿರೂಪಿಸಿ, ಶ್ರೀಮತಿ ತುಳಸಿ ದಿನೇಶ ಧನ್ಯವಾದವಿತ್ತರು.

Related posts

ವೇಣೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವ ಪ್ರಾರಂಭ

Suddi Udaya

ಬೆಳಾಲು: ಕೊಲ್ಪಡಿ ಶ್ರೀ ಸುಭ್ರಮಣ್ಯೇಶ್ವರ ಭಜನಾ ಮಂಡಳಿ ನೂತನ ಪದಾಧಿಕಾರಿಗಳ ಅಧಿಕಾರ ಹಸ್ತಾಂತರ

Suddi Udaya

ಸಾಂಸ್ಕೃತಿಕ ಸ್ಪರ್ಧೆ: ವಾಣಿ ಕಾಲೇಜಿಗೆ ಸಮಗ್ರ ಪ್ರಶಸ್ತಿ

Suddi Udaya

ಉಜಿರೆ ಮಹಿಳಾ ವಿವಿದ್ದೋದೇಶ ಸಹಕಾರ ಸಂಘದ ಅಧ್ಯಕ್ಷರಾಗಿ ಶಶಿಕಲಾ ಡಿ ಗೌಡ , ಉಪಾಧ್ಯಕ್ಷರಾಗಿ ಪ್ರಮೀಳಾ

Suddi Udaya

ಜಿಲ್ಲಾಧಿಕಾರಿಗಳ ಆದೇಶ: ತುರ್ತು ಪಾಲನೆ ನೋಟೀಸು ಜಾರಿ

Suddi Udaya

ಪಕ್ಷೇತರ ಅಭ್ಯರ್ಥಿಯಾಗಿ ಸುಬ್ರಹ್ಮಣ್ಯ ಭಟ್ ನಾಮಪತ್ರ ಸಲ್ಲಿಕೆ

Suddi Udaya
error: Content is protected !!