23.3 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ವಾಯುಭಾರ ಕುಸಿತ: ತಾಲೂಕಿನದ್ಯಾಂತ ವ್ಯಾಪಕ ಮಳೆ-ರೆಡ್ ಅಲರ್ಟ್; ಮುಂಡಾಜೆಯಲ್ಲಿ103 ಮಿ.ಮೀ.ಮಳೆ

ಬೆಳ್ತಂಗಡಿ: ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತದಿಂದ ಕರಾವಳಿಯಲ್ಲಿ ಚಂಡ ಮಾರುತದ ಭೀತಿ ಎದುರಾಗಿದೆ. ತೀವ್ರ ವಾಯುಭಾರ ಕುಸಿತ ಉಂಟಾಗಿದ್ದು, ವ್ಯಾಪಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಈ ಮಳೆ ವರ್ಷಧಾರೆಯ ಆರಂಭಕ್ಕೆ ಮುನ್ನಡಿ ದೊರೆತಂತೆ ಆಗಿದೆ. ಬೆಳ್ತಂಗಡಿ ತಾಲೂಕಿನದ್ಯಾಂತ ಭಾರೀ ಮಳೆಯಾಗುತ್ತಿದ್ದು ಮೇ 28 ವರೆಗೆ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ.

ಬೆಳ್ತಂಗಡಿ ತಾಲೂಕಿನಲ್ಲಿ ಕಳೆದ ರಾತ್ರಿಯಿಂದ ಭಾರೀ ಮಳೆ ಸುರಿಯುತ್ತಿದ್ದು ನದಿಗಳಲ್ಲಿ ನೀರಿನ ಹರಿವು ಹೆಚ್ಚಳವಾಗಿದೆ. ತಾಲೂಕಿನ ಮುಂಡಾಜೆ ಗ್ರಾಮದಲ್ಲಿ ಕಳೆದ 24 ಗಂಟೆಗಳಲ್ಲಿ 103 ಮಿ.ಮೀ. ಮಳೆ ಸುರಿದಿದೆ. ಗ್ರಾಮೀಣ ಭಾಗದಲ್ಲಿ ತೋಡು, ಹಳ್ಳಗಳಲ್ಲಿ ನೀರಿನ ಹರಿವು ಹೆಚ್ಚಾಗಿದೆ. ತಾಲೂಕಿನ ರಸ್ತೆಗಳು ಚರಂಡಿ ವ್ಯವಸ್ಥೆ ಇಲ್ಲದೆ ಹೊಳೆಯಂತಾಗಿದೆ. ಮಳೆ ನೀರು ರಸ್ತೆಯಲ್ಲಿ ಹರಿಯುತ್ತಿದ್ದು ಸವಾರರು ಹರಸಾಹಸ ಪಡುವಂತಾಗಿದೆ.ಇಂದು ಕೂಡ ಭಾರೀ ಮಳೆಯಾಗುವ ಸಂಭವ ಇರುವುದರಿಂದ ಮುನ್ನೆಚ್ಚರಿಕೆ ವಹಿಸುವಂತೆ ತಾಲೂಕು ಮಟ್ಟದ ಅಧಿಕಾರಿಗಳಿಗೆ ಜಿಲ್ಲಾಡಳಿತ ಸೂಚನೆ ನೀಡಿದೆ.

ಬೆಳ್ತಂಗಡಿ ಮಳೆ ಪ್ರಮಾಣ:
ಬೆಳ್ತಂಗಡಿ: 87.4, ಧರ್ಮಸ್ಥಳ: 67.0, ಕೊಕ್ಕಡ :56.6, ನಾರಾವಿ: 82.6, ವೇಣೂರು: 48.6, ಸುಲ್ಕೇರಿ: 145.0, ಕುಕ್ಕಳ: 140.0,
ಒಟ್ಟು: 627.2, ಸರಾಸರಿ: 89.6 ಪ್ರಮಾಣ ಮಳೆಯಾಗಿದೆ.

Related posts

ಉಜಿರೆ ಎಸ್.ಡಿ.ಎಂ. ಬಿ.ಎಡ್. ಕಾಲೇಜಿನಲ್ಲಿ ಡಾ. ಬಿ. ಆರ್. ಅಂಬೇಡ್ಕರ್ ಜಯಂತಿ ಆಚರಣೆ

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್ ವತಿಯಿಂದ ಅಳದಂಗಡಿ ಸ.ಪ.ಪೂ. ಕಾಲೇಜಿಗೆ ಕಂಪ್ಯೂಟರ್ ಸ್ಮಾರ್ಟ್ ತರಗತಿ ಉದ್ಘಾಟನೆ

Suddi Udaya

ತಾಲೂಕು ತಹಶೀಲ್ದಾರರ ಭರವಸೆ: ಅಕ್ರಮ ಮರಳುಗಾರಿಕೆ ಹಾಗೂ ಕಳಪೆ ಮಟ್ಟದ ಕಾಮಗಾರಿಗಳ ತನಿಖೆಗೆ ಒತ್ತಾಯಿಸಿ ಶೇಖರ್ ಲಾಯಿಲ ನಡೆಸುತ್ತಿದ್ದ ಅಮರಣಾಂತ ಉಪವಾಸ ಸತ್ಯಾಗ್ರಹ ಅಂತ್ಯ

Suddi Udaya

ಭೂಮಿ ಬಾನೊದ ಸೊರೊ ತುಳು ಜನಪದ ವಿಡಿಯೋ ಹಾಡು ಹಾಗೂ “ವಿಸ್ಮೃತಿ – ಐತಿಹಾಸಿಕ ಸ್ಮಾರಕಗಳ ಮನನ ಕನ್ನಡ ಅಲ್ಬಂ ಹಾಡು ಲೋಕಾರ್ಪಣೆ

Suddi Udaya

ಸಾಂಸ್ಕೃತಿಕ ಸ್ಪರ್ಧೆ: ನಡ ಸರಕಾರಿ ಪ.ಪೂ. ಕಾಲೇಜಿಗೆ ರನ್ನರ್ಸ್ ಆಫ್ ಪ್ರಶಸ್ತಿ

Suddi Udaya

ಅಳದಂಗಡಿ ಬಡಗಕಾರಂದೂರು ಪ್ರಗತಿ ಬಂಧು ಎ’ಬಿ ಒಕ್ಕೂಟದ ಅಧ್ಯಕ್ಷರುಗಳಾಗಿ ಹರೀಶ್ ಸಾಲಿಯನ್, ಕೃಷ್ಣಪ್ಪ ಪೂಜಾರಿ ಹಾಗೂ ವರಮಹಾಲಕ್ಷ್ಮಿ ಪೂಜಾ ಸಮಿತಿಯ ಅಧ್ಯಕ್ಷರಾಗಿ ಆಶಾ ಹರೀಶ್ ಆಯ್ಕೆ

Suddi Udaya
error: Content is protected !!