25.3 C
ಪುತ್ತೂರು, ಬೆಳ್ತಂಗಡಿ
May 24, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ವಾಯುಭಾರ ಕುಸಿತ: ತಾಲೂಕಿನದ್ಯಾಂತ ವ್ಯಾಪಕ ಮಳೆ-ರೆಡ್ ಅಲರ್ಟ್; ಮುಂಡಾಜೆಯಲ್ಲಿ103 ಮಿ.ಮೀ.ಮಳೆ

ಬೆಳ್ತಂಗಡಿ: ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತದಿಂದ ಕರಾವಳಿಯಲ್ಲಿ ಚಂಡ ಮಾರುತದ ಭೀತಿ ಎದುರಾಗಿದೆ. ತೀವ್ರ ವಾಯುಭಾರ ಕುಸಿತ ಉಂಟಾಗಿದ್ದು, ವ್ಯಾಪಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಈ ಮಳೆ ವರ್ಷಧಾರೆಯ ಆರಂಭಕ್ಕೆ ಮುನ್ನಡಿ ದೊರೆತಂತೆ ಆಗಿದೆ. ಬೆಳ್ತಂಗಡಿ ತಾಲೂಕಿನದ್ಯಾಂತ ಭಾರೀ ಮಳೆಯಾಗುತ್ತಿದ್ದು ಮೇ 28 ವರೆಗೆ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ.

ಬೆಳ್ತಂಗಡಿ ತಾಲೂಕಿನಲ್ಲಿ ಕಳೆದ ರಾತ್ರಿಯಿಂದ ಭಾರೀ ಮಳೆ ಸುರಿಯುತ್ತಿದ್ದು ನದಿಗಳಲ್ಲಿ ನೀರಿನ ಹರಿವು ಹೆಚ್ಚಳವಾಗಿದೆ. ತಾಲೂಕಿನ ಮುಂಡಾಜೆ ಗ್ರಾಮದಲ್ಲಿ ಕಳೆದ 24 ಗಂಟೆಗಳಲ್ಲಿ 103 ಮಿ.ಮೀ. ಮಳೆ ಸುರಿದಿದೆ. ಗ್ರಾಮೀಣ ಭಾಗದಲ್ಲಿ ತೋಡು, ಹಳ್ಳಗಳಲ್ಲಿ ನೀರಿನ ಹರಿವು ಹೆಚ್ಚಾಗಿದೆ. ತಾಲೂಕಿನ ರಸ್ತೆಗಳು ಚರಂಡಿ ವ್ಯವಸ್ಥೆ ಇಲ್ಲದೆ ಹೊಳೆಯಂತಾಗಿದೆ. ಮಳೆ ನೀರು ರಸ್ತೆಯಲ್ಲಿ ಹರಿಯುತ್ತಿದ್ದು ಸವಾರರು ಹರಸಾಹಸ ಪಡುವಂತಾಗಿದೆ.ಇಂದು ಕೂಡ ಭಾರೀ ಮಳೆಯಾಗುವ ಸಂಭವ ಇರುವುದರಿಂದ ಮುನ್ನೆಚ್ಚರಿಕೆ ವಹಿಸುವಂತೆ ತಾಲೂಕು ಮಟ್ಟದ ಅಧಿಕಾರಿಗಳಿಗೆ ಜಿಲ್ಲಾಡಳಿತ ಸೂಚನೆ ನೀಡಿದೆ.

ಬೆಳ್ತಂಗಡಿ ಮಳೆ ಪ್ರಮಾಣ:
ಬೆಳ್ತಂಗಡಿ: 87.4, ಧರ್ಮಸ್ಥಳ: 67.0, ಕೊಕ್ಕಡ :56.6, ನಾರಾವಿ: 82.6, ವೇಣೂರು: 48.6, ಸುಲ್ಕೇರಿ: 145.0, ಕುಕ್ಕಳ: 140.0,
ಒಟ್ಟು: 627.2, ಸರಾಸರಿ: 89.6 ಪ್ರಮಾಣ ಮಳೆಯಾಗಿದೆ.

Related posts

ಉಜಿರೆ ಎಸ್‌ಡಿಎಂ ಕಾಲೇಜಿನಲ್ಲಿ ವಿಶ್ವ ಮಾನವ ದಿನಾಚರಣೆ

Suddi Udaya

ಬೆಳಾಲು ಪ್ರೌಢಶಾಲಾ ಮಕ್ಕಳಿಂದ ಬಳಂಜ ಫಾರ್ಮ್ ಭೇಟಿ

Suddi Udaya

ಉಜಿರೆ ಶ್ರೀ ಧ.ಮಂ. ಎಜ್ಯುಕೇಶನಲ್ ಸೊಸೈಟಿಯಿಂದ 33 ಮಂದಿ ನಿವೃತ್ತ ಸಿಬ್ಬಂದಿಗಳಿಗೆ ಸನ್ಮಾನ ಮತ್ತು ಶಿಕ್ಷಕರಿಗೆ ತರಬೇತಿ ಕಾರ್ಯಕ್ರಮ

Suddi Udaya

ಇಂದಬೆಟ್ಟು ಗ್ರಾ.ಪಂ.ನಲ್ಲಿ ಆರೋಗ್ಯ ಕಾರ್ಯಪಡೆಯ ಸದಸ್ಯರಿಗೆ ತರಬೇತಿ ಕಾರ್ಯಾಗಾರ ಹಾಗೂ ಸ್ವಚ್ಛತಾ ಹಿ ಸೇವಾ ಆಂದೋಲನ

Suddi Udaya

ಕುವೆಟ್ಟು ಗ್ರಾ.ಪಂ. ವ್ಯಾಪ್ತಿಯಲ್ಲಿ ಮಹಾತ್ಮ ಗಾಂಧಿ ನರೇಗಾ ಯೋಜನೆ ಮತ್ತು 15 ಹಣಕಾಸು ಯೋಜನೆಯ ಸಾಮಾಜಿಕ ಪರಿಶೋಧನೆ

Suddi Udaya

ಬಂದಾರು: ಬಟ್ಲಡ್ಕ, ಬೀಬಿ ಮಜಲು ಪರಿಸರದಲ್ಲಿ ಮತ್ತೆ ಕಾಣಿಸಿಕೊಂಡ ಕಾಡಾನೆ

Suddi Udaya
error: Content is protected !!