22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ವಾಯುಭಾರ ಕುಸಿತ: ತಾಲೂಕಿನದ್ಯಾಂತ ವ್ಯಾಪಕ ಮಳೆ-ರೆಡ್ ಅಲರ್ಟ್; ಮುಂಡಾಜೆಯಲ್ಲಿ103 ಮಿ.ಮೀ.ಮಳೆ

ಬೆಳ್ತಂಗಡಿ: ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತದಿಂದ ಕರಾವಳಿಯಲ್ಲಿ ಚಂಡ ಮಾರುತದ ಭೀತಿ ಎದುರಾಗಿದೆ. ತೀವ್ರ ವಾಯುಭಾರ ಕುಸಿತ ಉಂಟಾಗಿದ್ದು, ವ್ಯಾಪಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಈ ಮಳೆ ವರ್ಷಧಾರೆಯ ಆರಂಭಕ್ಕೆ ಮುನ್ನಡಿ ದೊರೆತಂತೆ ಆಗಿದೆ. ಬೆಳ್ತಂಗಡಿ ತಾಲೂಕಿನದ್ಯಾಂತ ಭಾರೀ ಮಳೆಯಾಗುತ್ತಿದ್ದು ಮೇ 28 ವರೆಗೆ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ.

ಬೆಳ್ತಂಗಡಿ ತಾಲೂಕಿನಲ್ಲಿ ಕಳೆದ ರಾತ್ರಿಯಿಂದ ಭಾರೀ ಮಳೆ ಸುರಿಯುತ್ತಿದ್ದು ನದಿಗಳಲ್ಲಿ ನೀರಿನ ಹರಿವು ಹೆಚ್ಚಳವಾಗಿದೆ. ತಾಲೂಕಿನ ಮುಂಡಾಜೆ ಗ್ರಾಮದಲ್ಲಿ ಕಳೆದ 24 ಗಂಟೆಗಳಲ್ಲಿ 103 ಮಿ.ಮೀ. ಮಳೆ ಸುರಿದಿದೆ. ಗ್ರಾಮೀಣ ಭಾಗದಲ್ಲಿ ತೋಡು, ಹಳ್ಳಗಳಲ್ಲಿ ನೀರಿನ ಹರಿವು ಹೆಚ್ಚಾಗಿದೆ. ತಾಲೂಕಿನ ರಸ್ತೆಗಳು ಚರಂಡಿ ವ್ಯವಸ್ಥೆ ಇಲ್ಲದೆ ಹೊಳೆಯಂತಾಗಿದೆ. ಮಳೆ ನೀರು ರಸ್ತೆಯಲ್ಲಿ ಹರಿಯುತ್ತಿದ್ದು ಸವಾರರು ಹರಸಾಹಸ ಪಡುವಂತಾಗಿದೆ.ಇಂದು ಕೂಡ ಭಾರೀ ಮಳೆಯಾಗುವ ಸಂಭವ ಇರುವುದರಿಂದ ಮುನ್ನೆಚ್ಚರಿಕೆ ವಹಿಸುವಂತೆ ತಾಲೂಕು ಮಟ್ಟದ ಅಧಿಕಾರಿಗಳಿಗೆ ಜಿಲ್ಲಾಡಳಿತ ಸೂಚನೆ ನೀಡಿದೆ.

ಬೆಳ್ತಂಗಡಿ ಮಳೆ ಪ್ರಮಾಣ:
ಬೆಳ್ತಂಗಡಿ: 87.4, ಧರ್ಮಸ್ಥಳ: 67.0, ಕೊಕ್ಕಡ :56.6, ನಾರಾವಿ: 82.6, ವೇಣೂರು: 48.6, ಸುಲ್ಕೇರಿ: 145.0, ಕುಕ್ಕಳ: 140.0,
ಒಟ್ಟು: 627.2, ಸರಾಸರಿ: 89.6 ಪ್ರಮಾಣ ಮಳೆಯಾಗಿದೆ.

Related posts

ವಲಯ ಮಟ್ಟದ ವಾಲಿಬಾಲ್ ಪಂದ್ಯಾಟ: ಮನ್ ಶರ್ ಆಂ.ಮಾ. ಶಾಲೆಯ ವಿದ್ಯಾರ್ಥಿಗಳು ತಾಲೂಕು ಮಟ್ಟಕೆ ಆಯ್ಕೆ

Suddi Udaya

ಮಚ್ಚಿನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಮಹಾಸಭೆ: ರೂ.59 ಲಕ್ಷ ಲಾಭ, ಶೇ.15 ಡಿವಿಡೆಂಟ್ ಘೋಷಣೆ

Suddi Udaya

ಗುರುವಾಯನಕೆರೆ ಶ್ರೀ ಕ್ಷೇ.ಧ.ಗ್ರಾ. ಯೋ. ಬಿಸಿ ಟ್ರಸ್ಟ್ ನಿಂದ ಸ್ವ ಉದ್ಯೋಗ ಪ್ರೇರಣಾ ಶಿಬಿರ

Suddi Udaya

ಮಚ್ಚಿನ ಸ. ಪ್ರೌ.ಶಾಲೆಯ ಸಮಾಜ ವಿಜ್ಞಾನ ಶಿಕ್ಷಕ ಯೋಗಿಶ್. ಎಸ್ ರವರಿಗೆ ಬೀಳ್ಕೊಡುಗೆ

Suddi Udaya

ಕ್ಯಾನ್ಸರ್ ಪೀಡಿತರಿಗೆ ಕೇಶದಾನ ಮಾಡಿ ಮಾನವೀಯತೆ ಮೆರೆದ ಬಾಲಕಿ ಅಕ್ಷರಿ ಶೆಟ್ಟಿ

Suddi Udaya

ಬೆಳ್ತಂಗಡಿ ಲ್ಯಾಂಪ್ಸ್ ವಿವಿದೋದ್ದೇಶ ಸಹಕಾರ ಸಂಘದ ಗೋದಾಮು ಮತ್ತು ಮಾರಾಟ ಮಳಿಗೆಯ ಕಟ್ಟಡದ ಶಿಲಾನ್ಯಾಸ ಕಾರ್ಯಕ್ರಮ

Suddi Udaya
error: Content is protected !!