July 23, 2026
ಕೃಷಿಗ್ರಾಮಾಂತರ ಸುದ್ದಿಚಿತ್ರ ವರದಿ

ಅಳದಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ರೈತರಿಗೆ ಸಬ್ಸಿಡಿ ದರದಲ್ಲಿ ಮೈಲುತುತ್ತು ವಿತರಣೆ – ಸಬ್ಸಿಡಿ ಬೆಲೆ ಪ್ರತಿ ಕಿಲೋ ರೂ. 280 ಆಗಿದ್ದು,ರೈತರ ಇದರ ಪ್ರಯೋಜನ ಪಡೆಯಿರಿ: ಅಧ್ಯಕ್ಷ ರಾಕೇಶ್ ಹೆಗ್ಡೆ – ರೈತರಿಗೆ ರಸಗೊಬ್ಬರ ಹಾಗೂ ಕೀಟನಾಶಕಗಳ ಖರೀದಿಗೆ ರೂ.20 ಸಾವಿರದಂತೆ ಸಾಲ ಯೋಜನೆ

ಅಳದಂಗಡಿ: ಅಳದಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಿಂದ ರೈತರಿಗೆ ಸಬ್ಸಿಡಿ ದರದಲ್ಲಿ ಮೈಲುತುತ್ತು ವಿತರಣೆ ಮಾಡುತ್ತಿದ್ದು ಅಡಿಕೆ ಬೆಳೆಗಾರರು ಇದರ ಪ್ರಯೋಜನವನ್ನು ಪಡೆಯಬೇಕೆಂದು ಸಂಘದ ಅಧ್ಯಕ್ಷ ರಾಕೇಶ್ ಹೆಗ್ಡೆ ಬಳಂಜ ತಿಳಿಸಿರುತ್ತಾರೆ.

ಸಬ್ಸಿಡಿ ಬೆಲೆ ಪ್ರತಿ ಕಿಲೋ ರೂ. 280 ಆಗಿದ್ದು ಬೆಳೆಗಾರರಿಗೆ ಈ ಬೆಲೆಯಲ್ಲಿ ಮೈಲುತುತ್ತು ನೀಡುತ್ತಿದ್ದೇವೆ. ಕಳೆದ ಬಾರಿ ಕೊಳೆರೋಗದ ಬಾಧೆಯಿಂದ ಅಡಿಕೆ ಬೆಳಗಾರರು ತುಂಬಾ ಕಷ್ಟ ನಷ್ಟ ಗಳನ್ನು ಅನುಭವಿಸಿದ್ದು ಈ ಸಂದರ್ಭದಲ್ಲಿ ಸಂಘದಿಂದ ಕಡಿಮೆ ಬೆಲೆಯಲ್ಲಿ ಮೈಲುತುತ್ತು ನೀಡುವ ಯೋಜನೆ ಹಾಕಿಕೊಂಡಿದ್ದೇವೆ ಎಂದರು. ಜೊತೆಗೆ ರೈತರಿಗೆ ರಸಗೊಬ್ಬರ ಹಾಗೂ ಕೀಟನಾಶಕಗಳ ಖರೀದಿಗೆ ವಿಶೇಷವಾಗಿ ಪ್ರತಿ ಎಕ್ರೆಗೆ ರೂ. 20 ಸಾವಿರದಂತೆ ಓವರ್ ಡ್ರಾಫ್ಟ್, (ಓಡಿ) ಸಾಲ ನೀಡಿ ರೈತರಿಗೆ ಸದಾ ಸ್ಪಂದನೆ ನೀಡಲಾಗುವುದು. ಈ ಯೋಜನೆ ರೈತರಿಗೆ ತುಂಬಾ ಅನುಕೂಲವಾಗಲಿದೆ ಎಂದರು.

ಈಗಾಗಲೇ ಮೈಲು ತುತ್ತು ವಿತರಣೆಗೆ ಚಾಲನೆ ನೀಡಲಾಗಿದ್ದು ಶೇಖರ ಆಚಾರ್ಯ ಪಿಲ್ಯ ಹಾಗೂ ಧರ್ಣಪ್ಪ ಪೂಜಾರಿ ಬಡಗಕಾರಂದೂರು ಇವರಿಗೆ ಪ್ರಥಮವಾಗಿ ನೀಡಲಾಗಿದೆ.

ಈ ಸಂದರ್ಭದಲ್ಲಿ ಸಂಘದ ಉಪಾಧ್ಯಕ್ಷ ಜನಾರ್ಧನ ಪೂಜಾರಿ,ಸಿಇಓ ಮೀರಾ, ನಿರ್ದೇಶಕರಾದ ದಿನೇಶ್ ಪಿ‌ಕೆ,ದೇವಿಪ್ರಸಾದ್ ಶೆಟ್ಟಿ,ದೇಜಪ್ಪ ಪೂಜಾರಿ ಹಾಗೂ ಕೃಷಿಕರು ಉಪಸ್ಥಿತರಿದ್ದರು.

Related posts

ವಿಟಿಯುಗೆ 9ನೇ ರ್‍ಯಾಂಕ್ ಗಳಿಸಿದ ಎಸ್‌ಡಿಎಂ ಪಾಲಿಟೆಕ್ನಿಕ್ ಕಾಲೇಜಿನ ಹಳೇ ವಿದ್ಯಾರ್ಥಿನಿಗೆ ಸನ್ಮಾನ

Suddi Udaya

ಶ್ರೀ ಧ.ಮಂ. ಅನುದಾನಿತ ಸೆಕೆಂಡರಿ ಶಾಲೆಯಲ್ಲಿ ಕ್ರೀಡಾ ಶಿಬಿರದ ಸಮಾರೋಪ ಸಮಾರಂಭ

Suddi Udaya

ಬೆಳ್ತಂಗಡಿಯಲ್ಲಿ ಲಯನ್ಸ್ ಯಕ್ಷೋತ್ಸವ: ಧರ್ಮಸ್ಥಳ ಮೇಳದ ಹಿರಿಯ ಕಲಾವಿದರು ಮತ್ತು ಸಿಬ್ಬಂದಿಗಳಿಗೆ ಗೌರವ

Suddi Udaya

ಕೊಯ್ಯುರು:ದ.ಕ. ಜಿಲ್ಲಾ ಮಟ್ಟದ ಮಲೆಕುಡಿಯರ ಸಮಾವೇಶ

Suddi Udaya

ಕುವೆಟ್ಟು: ದಿ| ಪ್ರಭಾಕರ ಶೆಣೈರವರ ಪತ್ನಿ ವಿದ್ಯಾವತಿ ನಿಧನ

Suddi Udaya

ಅಳದಂಗಡಿ ಪಾಲಬೆ ಮನೆಯ ಭವ್ಯ ರಂಗಮಂಟಪದಲ್ಲಿ ಶ್ರೀದೇವಿ ಮಹಾತ್ಮೆ ಯಕ್ಷಗಾನ ಪ್ರದರ್ಶನ

Suddi Udaya
error: Content is protected !!