July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಕಣ್ಣಿನ ತಪಾಸಣಾ ಶಿಬಿರ

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಪೂಜ್ಯ ಹೆಗ್ಗಡೆಯವರ ಹಾಗೂ ಮಾತೃಶ್ರೀ ಹೇಮಾವತಿ ವಿ. ಹೆಗ್ಗಡೆಯವರ ಆದೇಶದಂತೆ, ಡಿ. ಹರ್ಷೇಂದ್ರ ಕುಮಾರ್ ಮತ್ತು ಸುಪ್ರಿಯಾ ಹರ್ಷೇಂದ್ರ ಕುಮಾರ್ ಇವರ ಮಾರ್ಗದರ್ಶನದಲ್ಲಿ ಮೇ 25 ರಂದು ಕಣ್ಣಿನ ತಪಾಸಣಾ ಶಿಬಿರ ನಡೆಯಿತು.


ಕಣ್ಣಿನ ತಜ್ಞರಾದ ಡಾ| ಸುಭಾಶ್ಚಂದ್ರ ಶಿಬಿರ ಉದ್ಘಾಟಿಸಿ, ಕಣ್ಣಿನ ಆರೋಗ್ಯ ಕಾಪಾಡುವ ವಿಧಾನ ಮತ್ತು ಕಣ್ಣಿನ ರಕ್ಷಣೆಯ ವಿಷಯದಲ್ಲಿ ಜನರಿಗೆ ಇರುವ ಗೊಂದಲಗಳ ಬಗ್ಗೆ ವಿವರಿಸಿದರು. ಕಣ್ಣಿನ ಪೊರೆಗೆ ಚಿಕಿತ್ಸೆ ಮತ್ತು ಲೆನ್ಸ್ ಅಳವಡಿಕೆ, ದೃಷ್ಟಿದೋಷ ನಿವಾರಣೆ, ಕಂಪ್ಯೂಟರೈಸ್ಡ್ ಕಣ್ಣಿನ ಚಿಕಿತ್ಸೆ, ಕಾರ್ನಿಯಾ ರೆಟಿನಾ ಸ್ಕಿçÃನಿಂಗ್, ಕಣ್ಣಿನ ದುರ್ಮಾಂಸ ಚಿಕಿತ್ಸೆ, ಮೆಳ್ಳೆಗಣ್ಣು ಚಿಕಿತ್ಸೆ, ಕಾಂಟಾಕ್ಟ್ಲೆನ್ಸ್ ಕ್ಲಿನಿಕ್, ಡಯಾಬಿಟಿಕ್ ಕಣ್ಣಿನ ಚಿಕಿತ್ಸೆ, ಮುಂತಾದ ಸೇವೆಗಳು ಈ ಆಸ್ಪತ್ರೆಯಲ್ಲಿ ಲಭ್ಯವಿದೆ ಎಂದು ತಿಳಿಸಿದರು. ಆಸ್ಪತ್ರೆಯ ಮುಖ್ಯ ವೈದ್ಯಾಧಿಕಾರಿ ಡಾ| ಸಾತ್ವಿಕ್ ಜೈನ್ ಆಸ್ಪತ್ರೆಯಲ್ಲಿ ದೊರೆಯುವ ವಿಶೇಷ ವೈದ್ಯಕೀಯ ಸೇವೆಗಳನ್ನು ತಿಳಿಸಿಕೊಟ್ಟರು.


ಈ ಶಿಬಿರದಲ್ಲಿ ವೈದ್ಯರ ಸಮಾಲೋಚನೆ ಉಚಿತವಾಗಿತ್ತು, 10% ರಿಯಾಯಿತಿ ದರದಲ್ಲಿ ಔಷಧ, ಒಳರೋಗಿ ವಿಭಾಗದ ಶುಲ್ಕದಲ್ಲಿ 10% ರಿಯಾಯಿತಿ, ಲ್ಯಾಬ್ ಹಾಗೂ ರೇಡಿಯಾಲಜಿ ಪರೀಕ್ಷೆಯಲ್ಲಿ 20% ರಿಯಾಯಿತಿ, 25% ರಿಯಾಯಿತಿ ದರದಲ್ಲಿ ಉತ್ತಮ ಗುಣಮಟ್ಟದ ಕನ್ನಡಕ ನೀಡಲಾಯಿತು. 162 ಮಂದಿ ಶಿಬಿರದ ಪ್ರಯೋಜನ ಪಡೆದುಕೊಂಡರು.
ಸಂಪರ್ಕಾಧಿಕಾರಿ ಚಿದಾನಂದ ಕಾರ್ಯಕ್ರಮ ನಡೆಸಿಕೊಟ್ಟರು. ಮಾರ್ಕೆಟಿಂಗ್ ಎಕ್ಷ್ ಕ್ಯೂಟಿವ್ ಸುಮಂತ್ ರೈ ಸಹಕರಿಸಿದರು.

Related posts

ಮುಂಡಾಜೆ ಸೋಮಂತಡ್ಕದಲ್ಲಿ ಕಾಂಗ್ರೆಸ್ ಪ್ರಚಾರ ಸಭೆ

Suddi Udaya

ಧರ್ಮಸ್ಥಳ: ಶ್ರೀ ಮಂ.ಅ. ಪ್ರೌ. ಶಾಲೆಯಲ್ಲಿ ವಿವಿಧ ಸಂಘಗಳ ಉದ್ಘಾಟನೆ ಮತ್ತು ನಿವೃತ್ತ ಮುಖ್ಯ ಶಿಕ್ಷಕರ ಬೀಳ್ಕೊಡುಗೆ ಸಮಾರಂಭ

Suddi Udaya

ಮುಂಡೂರು ದುರ್ಗಾನಗರ ಹಾಲು ಉತ್ಪಾದಕರ ಸಹಕಾರ ಸಂಘದ ವಾರ್ಷಿಕ ಸಾಮಾನ್ಯ ಸಭೆ

Suddi Udaya

ಕಿಟ್ ಹಂಚುವ ವಿಚಾರದಲ್ಲಿ ಹೊಡೆದಾಟ: ಎರಡು ತಂಡಗಳಿಂದ ಪೊಲೀಸರಿಗೆ ದೂರು

Suddi Udaya

ಬಡಗಕಾರಂದೂರು ಗ್ರಾಮದಲ್ಲಿ ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ವಾರ್ಷಿಕ ಜಾತ್ರಾ ಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ನಾವೂರು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ಅಧ್ಯಕ್ಷರಾಗಿ ಪೂವಪ್ಪ ಗೌಡ, ಕಾರ್ಯದರ್ಶಿಯಾಗಿ ದಿನೇಶ್ ಗೌಡ ಆಯ್ಕೆ

Suddi Udaya
error: Content is protected !!