32.6 C
ಪುತ್ತೂರು, ಬೆಳ್ತಂಗಡಿ
June 6, 2025
Uncategorized

ಗುರುವಾಯನಕೆರೆ ಶಿವಂ ಟೆಕ್ಸ್ ಟೈಲ್ಸ್ ಮಾಲೀಕ ಶರ್ವಣ್ ಹೃದಯಾಘಾತದಿಂದ ನಿಧನ

ಗುರುವಾಯನಕೆರೆ: ಶಿವಂ ಟೆಕ್ಸ್‌ಟೈಲ್ ಮಾಲೀಕ ಶರ್ವಣ್ (32ವ) ಮೇ.26ರಂದು ಹೃದಯಾಘಾತದಿಂದ ನಿಧನರಾಗಿದ್ದಾರೆ.

ಮೂಲತಃ ರಾಜಸ್ಥಾನದವರಾಗಿದ್ದ ಶರ್ವಣ್ ಅವರು ಗುರುವಾಯನಕೆರೆಯ ಹವ್ಯಕ ಭವನದ ಹತ್ತಿರ ಬಾಡಿಗೆಗಿದ್ದ ಮನೆಯಲ್ಲಿ ತಲೆ ತಿರುಗುತ್ತಿದೆ ಎಂದು ಹೇಳಿ ಮಲಗಿದವರು ಎದ್ದೇಳದೆ ಇದ್ದಾಗ ಗಾಬರಿಗೊಂಡ ಮನೆಯವರು ಶರ್ವಣರನ್ನು ತಕ್ಷಣ ಅಭಯ ಆಸ್ಪತ್ರೆಗೆ ದಾಖಲು ಮಾಡಿದರು.

ಪರಿಶೀಲಿಸಿದ ವೈದ್ಯರು ಶರ್ವಣ್ ಹೃದಯಾಘಾತದಿಂದ ಮೃತಪಟ್ಟಿರುವುದನ್ನು ದೃಢಪಡಿಸಿದ್ದು, ಇದೀಗ ಮೃತದೇಹವನ್ನು ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ. ಪೋಸ್ಟ್ ಮಾರ್ಟಂ ನಂತರ ಶರ್ವಣ್ ರ ಮೃತಶರೀರವನ್ನು ಅವರ ಊರಾದ ರಾಜಸ್ಥಾನಕ್ಕೆ ತೆಗೆದುಕೊಂಡು ಹೋಗಲಾಗುವುದು ಎಂದು ಮನೆ ಮಂದಿ ತಿಳಿಸಿದ್ದಾರೆ.

ಶರ್ವಣ್ ಅವರಿಗೆ ನವೆಂಬರ್‌ನಲ್ಲಿ ಮದುವೆ ಗೊತ್ತು ಮಾಡಲಾಗಿತ್ತು. ಮನೆಮಂದಿಯ ಆಕ್ರಂದನ ಮುಗಿಲು ಮುಟ್ಟಿದ್ದು ಅಪಾರ ಬಂಧು ಮಿತ್ರರನ್ನು ಅಗಲಿದ್ದಾರೆ.

Related posts

ದೇಶದ ಪ್ರಧಾನಿ ನರೇಂದ್ರ ಮೋದಿಯವರಿಗೆ ಮದುವೆ ಆಮಂತ್ರಣ ಕಳುಹಿಸಿದ ವರ: ವೈವಾಹಿಕ ಬದುಕಿಗೆ ಕಾಲಿಟ್ಟ ಸುಬ್ರಹ್ಮಣ್ಯ ಆಚಾರ್ಯ – ಸವಿತಾ ದಂಪತಿಗೆ ಪ್ರಧಾನಿ ಕಾರ್ಯಲಯದಿಂದ ತಲುಪಿತು ಶುಭಾಶಯ ಪತ್ರ

Suddi Udaya

ಬೆಳ್ತಂಗಡಿ ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದಹಾಗೂ ವಾಣಿ ವಿದ್ಯಾ ಸಂಸ್ಥೆಗಳ ನೂತನ ಕಟ್ಟಡ ಹಾಗೂ ಸಭಾಭವನ ಲೋಕಾರ್ಪಣೆ ‌ -ದೀಪ ಬೆಳಗಿಸಿ ಆಶೀರ್ವಾದಿಸಿದ ಲೋಕಪಾ೯ಣೆಗೊಳಿಸಿದಶ್ರೀ ಮಜ್ಜದ್ಗುರು ಶ್ರೀ ವಿಧುಶೇಖರ ಭಾರತೀ ಸ್ವಾಮೀಜಿಯವರು ‌ ‌ -ಸಮಾಜ ಬಾಂಧವರಿಂದ ಶೃಂಗೇರಿ ಮಠಕ್ಕೆ ಶ್ರೀ ವಿಧುಶೇಖರ ಭಾರತೀ ಸ್ವಾಮೀಜಿಗಳ ಮೂಲಕ ಹುಂಡಿ ಹಣ ಸಮರ್ಪಣೆ

Suddi Udaya

ವೇಣೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಾಧನೆಗೆ ಸಾಧನಾ ಪ್ರಶಸ್ತಿಯ ಗೌರವ

Suddi Udaya

ದಕ್ಷಿಣ ಕನ್ನಡ ಹಾಗೂ ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಚುನಾವಣೆ ಉಸ್ತುವಾರಿಯಾಗಿ ಅಬ್ದುಲ್ ರಹಿಮಾನ್ ಪಡ್ಪು

Suddi Udaya

ಕಸ್ತೂರಿ ರಂಗನ್ ವರದಿ ವಿರೋಧಿಸಿ ಚಾರ್ಮಾಡಿ ಗ್ರಾ.ಪಂ. ನಲ್ಲಿ ಬೃಹತ್ ಪ್ರತಿಭಟನೆ

Suddi Udaya

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕೈಗಾರಿಕಾ ತರಬೇತಿ ಸಂಸ್ಥೆ ವೇಣೂರು ಇಲ್ಲಿನ ಹಳೆ ವಿದ್ಯಾರ್ಥಿ ಸಂಘ ಪ್ರತಿ ವರ್ಷದಂತೆ ದೀಪಾವಳಿಯ ನರಕ ಚತುರ್ದಶಿಯಂದು ಆಯೋಜಿಸಿರುವ ವಾರ್ಷಿಕ ಕ್ರೀಡಾಕೂಟ ಹಾಗೂ ವಿದ್ಯಾರ್ಥಿ ವೇತನ ವಿತರಣಾ ಸಮಾರಂಭ

Suddi Udaya
error: Content is protected !!