25.5 C
ಪುತ್ತೂರು, ಬೆಳ್ತಂಗಡಿ
June 8, 2026
Uncategorized

ಗುರುವಾಯನಕೆರೆ ಶಿವಂ ಟೆಕ್ಸ್ ಟೈಲ್ಸ್ ಮಾಲೀಕ ಶರ್ವಣ್ ಹೃದಯಾಘಾತದಿಂದ ನಿಧನ

ಗುರುವಾಯನಕೆರೆ: ಶಿವಂ ಟೆಕ್ಸ್‌ಟೈಲ್ ಮಾಲೀಕ ಶರ್ವಣ್ (32ವ) ಮೇ.26ರಂದು ಹೃದಯಾಘಾತದಿಂದ ನಿಧನರಾಗಿದ್ದಾರೆ.

ಮೂಲತಃ ರಾಜಸ್ಥಾನದವರಾಗಿದ್ದ ಶರ್ವಣ್ ಅವರು ಗುರುವಾಯನಕೆರೆಯ ಹವ್ಯಕ ಭವನದ ಹತ್ತಿರ ಬಾಡಿಗೆಗಿದ್ದ ಮನೆಯಲ್ಲಿ ತಲೆ ತಿರುಗುತ್ತಿದೆ ಎಂದು ಹೇಳಿ ಮಲಗಿದವರು ಎದ್ದೇಳದೆ ಇದ್ದಾಗ ಗಾಬರಿಗೊಂಡ ಮನೆಯವರು ಶರ್ವಣರನ್ನು ತಕ್ಷಣ ಅಭಯ ಆಸ್ಪತ್ರೆಗೆ ದಾಖಲು ಮಾಡಿದರು.

ಪರಿಶೀಲಿಸಿದ ವೈದ್ಯರು ಶರ್ವಣ್ ಹೃದಯಾಘಾತದಿಂದ ಮೃತಪಟ್ಟಿರುವುದನ್ನು ದೃಢಪಡಿಸಿದ್ದು, ಇದೀಗ ಮೃತದೇಹವನ್ನು ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ. ಪೋಸ್ಟ್ ಮಾರ್ಟಂ ನಂತರ ಶರ್ವಣ್ ರ ಮೃತಶರೀರವನ್ನು ಅವರ ಊರಾದ ರಾಜಸ್ಥಾನಕ್ಕೆ ತೆಗೆದುಕೊಂಡು ಹೋಗಲಾಗುವುದು ಎಂದು ಮನೆ ಮಂದಿ ತಿಳಿಸಿದ್ದಾರೆ.

ಶರ್ವಣ್ ಅವರಿಗೆ ನವೆಂಬರ್‌ನಲ್ಲಿ ಮದುವೆ ಗೊತ್ತು ಮಾಡಲಾಗಿತ್ತು. ಮನೆಮಂದಿಯ ಆಕ್ರಂದನ ಮುಗಿಲು ಮುಟ್ಟಿದ್ದು ಅಪಾರ ಬಂಧು ಮಿತ್ರರನ್ನು ಅಗಲಿದ್ದಾರೆ.

Related posts

ನಾವೂರು: ಅಬೂಬಕ್ಕರ್ ರವರ ಮನೆ ಬಳಿ ಧರೆ ಕುಸಿತ

Suddi Udaya

ಲಾಯಿಲ 36ನೇ ವರ್ಷದ ಸಾರ್ವಜನಿಕ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಮುಂಡೂರು ಪಾವನನಡೆ ಪ್ರತಿಷ್ಠಾನ ಪಾಪಿನಡೆ ಗುತ್ತು : ನಾಲ್ಕು ಗುತ್ತು, ಬರ್ಕೆ, ಗ್ರಾಮಗಳ ಜುಮ್ರ ಜುಮಾದಿ ದೈವಸ್ಥಾನಕ್ಕೆ ಶಿಲಾನ್ಯಾಸ

Suddi Udaya

ಅಂಡಿಂಜೆ ಗ್ರಾ.ಪಂ. ದ್ವಿತೀಯ ಸುತ್ತಿನ ಗ್ರಾಮಸಭೆ: ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಖಾಯಂ ವೈದ್ಯರ ನೇಮಕಕ್ಕೆ ಗ್ರಾಮಸ್ಥರ ಆಗ್ರಹ

Suddi Udaya

ಸುದ್ದಿ ಉದಯ ವರದಿಯ ಫಲಶ್ರುತಿ: ಬಾರ್ಯ ಸರಳಿಕಟ್ಟೆ ಮೇಗಿನ ಪುಯಿಲದಲ್ಲಿ ತುಂಡಾಗಿ ಬೀಳುತ್ತಿರುವ ವಿದ್ಯುತ್ ತಂತಿಗಳು ವರದಿ ಬೆನ್ನಲ್ಲೇ ಮೆಸ್ಕಾಂ ಇಲಾಖೆಯಿಂದ ದುರಸ್ತಿ ಕಾರ್ಯ

Suddi Udaya

ಪಟ್ರಮೆ: ಬಲ್ಲಿದಡ್ಡ ನಿವಾಸಿ ಸುರೇಶ್ ಗೌಡ ಆತ್ಮಹತ್ಯೆ ಶಂಕೆ

Suddi Udaya
error: Content is protected !!