23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ಮುಳಿಯ ಗೋಲ್ಡ್ & ಡೈಮಂಡ್ ವತಿಯಿಂದ ತಾಲ್ಲೂಕು ಮಟ್ಟದ ಹಗ್ಗಜಗ್ಗಾಟ ಸ್ಪರ್ಧೆ: ಎಸ್.ಎಸ್.ಎಲ್.ಸಿ ಹಾಗೂ ಪಿಯುಸಿ ಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನ

ಬೆಳ್ತಂಗಡಿ: ಮುಳಿಯ ಗೋಲ್ಡ್ & ಡೈಮಂಡ್ಸ್ ಬೆಳ್ತಂಗಡಿ ಶೋರೂಮ್ ನ ನೂತನ ನವೀಕೃತ ವಿಸ್ತೃತ ಆಭರಣ ಮಳಿಗೆಯ ಅನಾವರಣ ಪ್ರಯುಕ್ತ, ತಾಲೂಕು ಮಟ್ಟದ ಗ್ರಾಮ ಸೀಮಿತ ಪುರುಷರ ಹಾಗೂ ಮಹಿಳೆಯರ ಹಗ್ಗಜಗ್ಗಾಟ ಸ್ಪರ್ಧೆ ಹಾಗೂ ಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನ ಕಾರ್ಯಕ್ರಮವು ಮೇ 25 ರಂದು ಬೆಳ್ತಂಗಡಿ ಮುಳಿಯದ ಹಿಂಭಾಗದ ಮೈದಾನದಲ್ಲಿ ನಡೆಯಿತು.

ಮುಖ್ಯ ಅತಿಥಿಗಳಾಗಿ ಉಜಿರೆ ಲಕ್ಷ್ಮೀ ಇಂಡಸ್ಟ್ರೀಸ್ ಕನಸಿನ ಮನೆ ಮಾಲಕ ಕೆ. ಮೋಹನ್ ಕುಮಾರ್, ಎಕ್ಸೆಲ್ ಕಾಲೇಜಿನ ಅಧ್ಯಕ್ಷ ಸುಮಂತ್ ಕುಮಾರ್ ಜೈನ್, ಬೆಳ್ತಂಗಡಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಸುರೇಶ್ ವಿಟ್ಲ, ದೈಹಿಕ ಶಿಕ್ಷಕ ರಾಜೇಶ್ ಉಪಸ್ಥಿತರಿದ್ದರು.

ಈ ವೇಳೆ ಎಸ್.ಎಸ್.ಎಲ್.ಸಿಯಲ್ಲಿ ಅತ್ಯಧಿಕ ಅಂಕ ಗಳಿಸಿದ ತನ್ವಿ ಭಟ್, ಶರೋನ್ ಡಿಸೋಜ, ಮನಶ್ರೀ, ಸುಪ್ರಿಯಾ,ಅಂಶಿತಾ ಜೋಸೆಫ್, ಹಾಗೂ ಪಿಯುಸಿ ಯಲ್ಲಿ ಅತ್ಯಧಿಕ ಅಂಕ ಗಳಿಸಿದ ತುಷಾರ ಬಿ ಎಸ್, ಸಿಂಚನಾ, ಜೋಶನ್ ರಾಫೆಲ್,
ದೀಕ್ಷಾ ರವರನ್ನು ಸನ್ಮಾನಿಸಿ, ಗೌರವಿಸಲಾಯಿತು.

ಮುಳಿಯ ಬೆಳ್ತಂಗಡಿ ಶಾಖಾ ವ್ಯವಸ್ಥಾಪಕ ಲೋಹಿತ್ ಕುಮಾರ್ ಸ್ವಾಗತಿಸಿದರು. ದೀಪಕ್ ನೆಲ್ಯಾಡಿ ಕಾರ್ಯಕ್ರಮ‌ ನಿರೂಪಿಸಿದರು. ಸುರೇಶ್ ಪಡಿಪಂಡ ಹಗ್ಗಜಗ್ಗಾಟದ ವೀಕ್ಷಕ ವೇಳೆ ವಿವರಣೆ ಮಾಡಿದರು.
ಮುಳಿಯ ಸಿಬ್ಬಂದಿ ವರ್ಗ ಸಹಕರಿಸಿದರು.

ಹಗ್ಗಜಗ್ಗಾಟ ಫಲಿತಾಂಶ: ಪುರುಷರ ವಿಭಾಗದ ಹಗ್ಗಜಗ್ಗಾಟ
ಪ್ರಥಮ – ಬ್ರಹ್ಮಲಿಂಗೇಶ್ವರ ಮರೋಡಿ
ದ್ವಿತೀಯ – ಮಣಿಕಂಠ ಫ್ರೆಂಡ್ಸ್ ಬೆಳಾಲು
ತೃತೀಯ- ಫ್ರೆಂಡ್ಸ್ ಮಲ್ಲಿಪ್ಪಾಡಿ
ಚತುರ್ಥ- ವೀರ ಕಲ್ಕುಡ ಪದ್ಮುಂಜ

ಮಹಿಳೆಯರ ವಿಭಾಗದ ಹಗ್ಗಜಗ್ಗಾಟ ಫಲಿತಾಂಶ
ಪ್ರಥಮ- ತೃಪ್ತಿ ಫ್ರೆಂಡ್ಸ್ ಮೊಗ್ರು ಬಂದಾರು
ದ್ವಿತೀಯ- ವನದುರ್ಗಾ ಬರೆಂಗಾಯ
ತೃತೀಯ- ದುರ್ಗಾಂಬ ಇಳಂತಿಲ

Related posts

ಮುಂಡಾಜೆ : ಕುರುಡ್ಯ ಎಂಬಲ್ಲಿ ಗುಡ್ಡಕ್ಕೆ ಬೆಂಕಿ

Suddi Udaya

ಬಂಗಾಡಿ ಶಾಲೆಯ ಶಿಕ್ಷಕ ಅಮಿತಾನಂದ ಹೆಗ್ಡೆ ರವರಿಗೆ ರಾಷ್ಟ್ರಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ

Suddi Udaya

ಎ.6: ಬೆಂಗಳೂರು ಶ್ರೀ‌ ಪ್ರಸನ್ನ ಕಾರ್ಯಸಿದ್ದಿ ಬೈಲಾಂಜನೇಯ ದೇವಾಲಯದಲ್ಲಿ ರಾಮನವಮಿ ಪ್ರಯುಕ್ತ ನಡೆಯುವ ಭಜನಾ ಕಾರ್ಯಕ್ರಮದಲ್ಲಿ ಪೆರ್ಮುಡ ಶ್ರೀ ಜಗದೀಶ್ವರ ಭಜನಾ ಮಂಡಳಿ ಹಾಗೂ ಸವಣಾಲು ಪಲ್ಗುಣಿ ಭಜನಾ ತಂಡ

Suddi Udaya

ಧರ್ಮಸ್ಥಳ: ಶಾಂತಿವನ ಯೋಗ ಮತ್ತು ಪ್ರಕೃತಿ ಚಿಕಿತ್ಸಾಲಯದಲ್ಲಿ ಗಣರಾಜ್ಯೋತ್ಸವ ಆಚರಣೆ – ಭಾರತ ವಿಶ್ವಗುರುವಾಗಬೇಕು : ಎಚ್.ಎನ್. ಚಂದ್ರಶೇಖರ್

Suddi Udaya

ಎಸ್.ಎಸ್.ಎಲ್.ಸಿ ಫಲಿತಾಂಶ: ಸೈಂಟ್ ಫ್ರಾನ್ಸಿಸ್ ಆಂ.ಮಾ. ಶಾಲೆಗೆ ಶೇ.100 ಫಲಿತಾಂಶ

Suddi Udaya

ನಾರಾವಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಾಧನೆಗೆ ಸಾಧನಾ ಪ್ರಶಸ್ತಿಯ ಗೌರವ

Suddi Udaya
error: Content is protected !!