22.9 C
ಪುತ್ತೂರು, ಬೆಳ್ತಂಗಡಿ
June 1, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಯುವವಾಹಿನಿ ಅಂತರ್ ಘಟಕ ಸಾಂಸ್ಕೃತಿಕ ಸ್ಪರ್ಧೆ ಬೆಳ್ತಂಗಡಿ ಘಟಕ ತೃತೀಯ ಸ್ಥಾನ

ಬೆಳ್ತಂಗಡಿ: ಯುವ ವಾಹಿನಿ ಕೇಂದ್ರ ಸಮಿತಿ ಆಶ್ರಯದಲ್ಲಿ ಪುತ್ತೂರು ಘಟಕದ ಆತಿಥ್ಯದಲ್ಲಿ ಪುತ್ತೂರಿನಲ್ಲಿ ನಡೆದ ಡೆನ್ನಾನ ಡೆನ್ನಾನ 2025 ಅಂತರ ಘಟಕ ಸಾಂಸ್ಕೃತಿಕ ಸ್ಪರ್ಧೆಯಲ್ಲಿ ಬೆಳ್ತಂಗಡಿ ಘಟಕ ಭಾಗವಹಿಸಿದ್ದು ಅತ್ಯುತ್ತಮ ಪ್ರದರ್ಶನದೊಂದಿಗೆ ನೋಡುಗರ ಹಾಗೂ ತೀರ್ಪುಗಾರರ ಮನ ಗೆದ್ದು ತೃತೀಯ ಸ್ಥಾನವನ್ನು ಪಡೆದಿರುತ್ತದೆ ಹಾಗೂ ಅತ್ಯುತ್ತಮ ಸಂದೇಶವನ್ನು ಸಾರುವ ಕಥೆ ಈ ಪ್ರಶಸ್ತಿಯನ್ನು ಕೂಡ ಬೆಳ್ತಂಗಡಿ ಘಟಕ ಪಡೆದಿರುತ್ತದೆ.


ಘಟಕದ ಅಧ್ಯಕ್ಷ ಗುರುರಾಜ್ ಗುರಿಪಳ್ಳ ನೇತೃತ್ವದಲ್ಲಿ ಭಾಗವಹಿಸಿದ ಈ ತಂಡವು ನಿರ್ದೇಶಕರಾದ ಸ್ಮಿತೇಶ್ ಎಸ್ ಬಾರ್ಯ ಹಾಗೂ ಅನೀಶ್ ಅಮೀನ್ ವೇಣೂರು ಇವರ ಅತ್ಯುತ್ತಮ ಕಥೆ ಹಾಗೂ ನಿರ್ದೇಶನದೊಂದಿಗೆ ಪ್ರಸ್ತುತಿಗೊಂಡಿತು. ತಂಡದಲ್ಲಿ ಒಟ್ಟು 40 ಜನ ಸ್ಪರ್ಧಾರ್ಥಿಗಳು ಭಾಗವಹಿಸಿದ್ದರು.

ಘಟಕದ ಮಾಜಿ ಅಧ್ಯಕ್ಷರಾದ ಪ್ರಶಾಂತ್ ಮಚ್ಚಿನ, ರಾಕೇಶ್ ಮೂಡಿಕೋಡಿ, ಎಂ ಕೆ ಪ್ರಸಾದ್, ಅಶ್ವತ್ ಕುಮಾರ್, ಸದಾಶಿವ ಪೂಜಾರಿ ಊರ ಹಾಗೂ ಗೌರವ ಸಲಹೆಗಾರರಾದ ರಮಾನಂದ ಸಾಲಿಯಾನ್ ಮುಂಡೂರು, ಕಾರ್ಯದರ್ಶಿ ಮಧುರ ರಾಘವ, ಕೋಶಾಧಿಕಾರಿ ನಾಗೇಶ್ ಆದೇಲು, ಮಹಿಳಾ ಸಂಚಾಲನ ಸಮಿತಿ ಸಂಚಾಲಕರಾದ ಲೀಲಾವತಿ ಪಣಕಜೆ ಹಾಗು ಘಟಕದ ಪದಾಧಿಕಾರಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

Related posts

ಚಾರ್ಮಾಡಿ ಘಾಟಿಯಲ್ಲಿ ಕೆ.ಎಸ್.ಆರ್.ಟಿ.ಸಿ ಬಸ್ಸಿಗೆ ಅಡ್ಡ ಬಂದ ಒಂಟಿ ಸಲಗ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯ ಹಿರಿಯ ವೈದ್ಯರಿಗೆ ಬೀಳ್ಕೊಡುಗೆ

Suddi Udaya

ಬೆಂಗಳೂರಿನಲ್ಲಿ ಅದ್ದೂರಿಯಾಗಿ ನಡೆದ ಕಂಬಳ: ದಿಡುಪೆ ಪರಂಬೇರಿನ ನಾರಾಯಣ ಮಲೆಕುಡಿಯರ ಕೋಣಗಳು, ನೇಗಿಲು ಹಿರಿಯ ವಿಭಾಗದಲ್ಲಿ ಪ್ರಥಮ, ಒಂದು ಲಕ್ಷ ನಗದು, 16 ಗ್ರಾಂ ಚಿನ್ನ ಮತ್ತು ಟ್ರೋಫಿ

Suddi Udaya

ನಾರಾವಿ ಸಿಎ ಬ್ಯಾಂಕ್ ಮತ್ತೊಮ್ಮೆ ಬಿಜೆಪಿ ತೆಕ್ಕೆಗೆ, ಬಿಜೆಪಿ ಕಾರ್ಯಕರ್ತರಿಂದ ಹರ್ಷೋದ್ಗಾರ, ಅಭಿನಂದನೆ ಸಲ್ಲಿಕೆ

Suddi Udaya

ಬಿಜೆಪಿ ಕಳೆಂಜ ಬೂತ್ ಸಮಿತಿಯ ಅಧ್ಯಕ್ಷ ಹಾಗೂ ಕಾರ್ಯದರ್ಶಿಗಳ ಆಯ್ಕೆ

Suddi Udaya

ವೇಣೂರಿನ ವಿದ್ಯೋದಯ ಇಂಗ್ಲೀಷ್ ಮೀಡಿಯಂ ಶಾಲೆಯಲ್ಲಿ ಯಕ್ಷಗಾನ ತಾಳಮದ್ದಳೆ

Suddi Udaya
error: Content is protected !!