25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಯುವವಾಹಿನಿ ಅಂತರ್ ಘಟಕ ಸಾಂಸ್ಕೃತಿಕ ಸ್ಪರ್ಧೆ ಬೆಳ್ತಂಗಡಿ ಘಟಕ ತೃತೀಯ ಸ್ಥಾನ

ಬೆಳ್ತಂಗಡಿ: ಯುವ ವಾಹಿನಿ ಕೇಂದ್ರ ಸಮಿತಿ ಆಶ್ರಯದಲ್ಲಿ ಪುತ್ತೂರು ಘಟಕದ ಆತಿಥ್ಯದಲ್ಲಿ ಪುತ್ತೂರಿನಲ್ಲಿ ನಡೆದ ಡೆನ್ನಾನ ಡೆನ್ನಾನ 2025 ಅಂತರ ಘಟಕ ಸಾಂಸ್ಕೃತಿಕ ಸ್ಪರ್ಧೆಯಲ್ಲಿ ಬೆಳ್ತಂಗಡಿ ಘಟಕ ಭಾಗವಹಿಸಿದ್ದು ಅತ್ಯುತ್ತಮ ಪ್ರದರ್ಶನದೊಂದಿಗೆ ನೋಡುಗರ ಹಾಗೂ ತೀರ್ಪುಗಾರರ ಮನ ಗೆದ್ದು ತೃತೀಯ ಸ್ಥಾನವನ್ನು ಪಡೆದಿರುತ್ತದೆ ಹಾಗೂ ಅತ್ಯುತ್ತಮ ಸಂದೇಶವನ್ನು ಸಾರುವ ಕಥೆ ಈ ಪ್ರಶಸ್ತಿಯನ್ನು ಕೂಡ ಬೆಳ್ತಂಗಡಿ ಘಟಕ ಪಡೆದಿರುತ್ತದೆ.


ಘಟಕದ ಅಧ್ಯಕ್ಷ ಗುರುರಾಜ್ ಗುರಿಪಳ್ಳ ನೇತೃತ್ವದಲ್ಲಿ ಭಾಗವಹಿಸಿದ ಈ ತಂಡವು ನಿರ್ದೇಶಕರಾದ ಸ್ಮಿತೇಶ್ ಎಸ್ ಬಾರ್ಯ ಹಾಗೂ ಅನೀಶ್ ಅಮೀನ್ ವೇಣೂರು ಇವರ ಅತ್ಯುತ್ತಮ ಕಥೆ ಹಾಗೂ ನಿರ್ದೇಶನದೊಂದಿಗೆ ಪ್ರಸ್ತುತಿಗೊಂಡಿತು. ತಂಡದಲ್ಲಿ ಒಟ್ಟು 40 ಜನ ಸ್ಪರ್ಧಾರ್ಥಿಗಳು ಭಾಗವಹಿಸಿದ್ದರು.

ಘಟಕದ ಮಾಜಿ ಅಧ್ಯಕ್ಷರಾದ ಪ್ರಶಾಂತ್ ಮಚ್ಚಿನ, ರಾಕೇಶ್ ಮೂಡಿಕೋಡಿ, ಎಂ ಕೆ ಪ್ರಸಾದ್, ಅಶ್ವತ್ ಕುಮಾರ್, ಸದಾಶಿವ ಪೂಜಾರಿ ಊರ ಹಾಗೂ ಗೌರವ ಸಲಹೆಗಾರರಾದ ರಮಾನಂದ ಸಾಲಿಯಾನ್ ಮುಂಡೂರು, ಕಾರ್ಯದರ್ಶಿ ಮಧುರ ರಾಘವ, ಕೋಶಾಧಿಕಾರಿ ನಾಗೇಶ್ ಆದೇಲು, ಮಹಿಳಾ ಸಂಚಾಲನ ಸಮಿತಿ ಸಂಚಾಲಕರಾದ ಲೀಲಾವತಿ ಪಣಕಜೆ ಹಾಗು ಘಟಕದ ಪದಾಧಿಕಾರಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

Related posts

ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಆವರಣದಲ್ಲಿ ಹಣ್ಣಿನ ಗಿಡಗಳ ನಾಟಿ

Suddi Udaya

ಶಿಶಿಲ: ಭಾರಿ ಮಳೆಯಿಂದ ತುಂಬಿ ಹರಿಯುತ್ತಿರುವ ಕಪಿಲಾ ನದಿ

Suddi Udaya

ಚಾರ್ಮಾಡಿ ಘಾಟಿಯಲ್ಲಿ ಆನೆ: ಪ್ರವಾಸಿಗರ ಸೆಲ್ಫಿ ಗೀಳಿಗೆ ಆನೆ ಆಕ್ರೋಶ

Suddi Udaya

ಬೆಳ್ತಂಗಡಿ : ತೋಟಗಾರಿಕೆ ಬೆಳೆಗಳಿಗೆ ರಿಯಾಯಿತಿ ದರದಲ್ಲಿ ಔಷಧಿಗಳು ಲಭ್ಯ

Suddi Udaya

ಉಜಿರೆ ಹಳೆಪೇಟೆಯಲ್ಲಿ ಹೊಳೆಯಂತಾದ ರಸ್ತೆ: ವಾಹನ ಸವಾರರ ಪರದಾಟ

Suddi Udaya

ಕರಾವಳಿ ಪ್ರದೇಶದ ಸಮಗ್ರ ಅಭಿವೃದ್ಧಿಗೆ ಕರಾವಳಿ ಅಭಿವೃದ್ಧಿ ಮಂಡಳಿ ರಚಿಸಿ ಬಜೆಟ್‌ನಲ್ಲಿ ರೂ.500 ಕೋಟಿ ಅನುದಾನ ಮೀಸಲಿಡಿ: ಬೆಳ್ತಂಗಡಿ ಪ್ರತಿಕಾಗೋಷ್ಠಿಯಲ್ಲಿ ಎಂಎಲ್ಸಿ ಐವನ್ ಡಿ’ಸೋಜ

Suddi Udaya
error: Content is protected !!