September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಯುವವಾಹಿನಿ ಅಂತರ್ ಘಟಕ ಸಾಂಸ್ಕೃತಿಕ ಸ್ಪರ್ಧೆ ಬೆಳ್ತಂಗಡಿ ಘಟಕ ತೃತೀಯ ಸ್ಥಾನ

ಬೆಳ್ತಂಗಡಿ: ಯುವ ವಾಹಿನಿ ಕೇಂದ್ರ ಸಮಿತಿ ಆಶ್ರಯದಲ್ಲಿ ಪುತ್ತೂರು ಘಟಕದ ಆತಿಥ್ಯದಲ್ಲಿ ಪುತ್ತೂರಿನಲ್ಲಿ ನಡೆದ ಡೆನ್ನಾನ ಡೆನ್ನಾನ 2025 ಅಂತರ ಘಟಕ ಸಾಂಸ್ಕೃತಿಕ ಸ್ಪರ್ಧೆಯಲ್ಲಿ ಬೆಳ್ತಂಗಡಿ ಘಟಕ ಭಾಗವಹಿಸಿದ್ದು ಅತ್ಯುತ್ತಮ ಪ್ರದರ್ಶನದೊಂದಿಗೆ ನೋಡುಗರ ಹಾಗೂ ತೀರ್ಪುಗಾರರ ಮನ ಗೆದ್ದು ತೃತೀಯ ಸ್ಥಾನವನ್ನು ಪಡೆದಿರುತ್ತದೆ ಹಾಗೂ ಅತ್ಯುತ್ತಮ ಸಂದೇಶವನ್ನು ಸಾರುವ ಕಥೆ ಈ ಪ್ರಶಸ್ತಿಯನ್ನು ಕೂಡ ಬೆಳ್ತಂಗಡಿ ಘಟಕ ಪಡೆದಿರುತ್ತದೆ.


ಘಟಕದ ಅಧ್ಯಕ್ಷ ಗುರುರಾಜ್ ಗುರಿಪಳ್ಳ ನೇತೃತ್ವದಲ್ಲಿ ಭಾಗವಹಿಸಿದ ಈ ತಂಡವು ನಿರ್ದೇಶಕರಾದ ಸ್ಮಿತೇಶ್ ಎಸ್ ಬಾರ್ಯ ಹಾಗೂ ಅನೀಶ್ ಅಮೀನ್ ವೇಣೂರು ಇವರ ಅತ್ಯುತ್ತಮ ಕಥೆ ಹಾಗೂ ನಿರ್ದೇಶನದೊಂದಿಗೆ ಪ್ರಸ್ತುತಿಗೊಂಡಿತು. ತಂಡದಲ್ಲಿ ಒಟ್ಟು 40 ಜನ ಸ್ಪರ್ಧಾರ್ಥಿಗಳು ಭಾಗವಹಿಸಿದ್ದರು.

ಘಟಕದ ಮಾಜಿ ಅಧ್ಯಕ್ಷರಾದ ಪ್ರಶಾಂತ್ ಮಚ್ಚಿನ, ರಾಕೇಶ್ ಮೂಡಿಕೋಡಿ, ಎಂ ಕೆ ಪ್ರಸಾದ್, ಅಶ್ವತ್ ಕುಮಾರ್, ಸದಾಶಿವ ಪೂಜಾರಿ ಊರ ಹಾಗೂ ಗೌರವ ಸಲಹೆಗಾರರಾದ ರಮಾನಂದ ಸಾಲಿಯಾನ್ ಮುಂಡೂರು, ಕಾರ್ಯದರ್ಶಿ ಮಧುರ ರಾಘವ, ಕೋಶಾಧಿಕಾರಿ ನಾಗೇಶ್ ಆದೇಲು, ಮಹಿಳಾ ಸಂಚಾಲನ ಸಮಿತಿ ಸಂಚಾಲಕರಾದ ಲೀಲಾವತಿ ಪಣಕಜೆ ಹಾಗು ಘಟಕದ ಪದಾಧಿಕಾರಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

Related posts

ವಾಣಿ ಶಿಕ್ಷಣ ಸಂಸ್ಥೆ: ಸ್ಕೌಟ್ ಮತ್ತು ಗೈಡ್ಸ್- ಬೇಸಿಗೆ ಶಿಬಿರ

Suddi Udaya

ಎ.ಆರ್.ಎಂ ಮೋಟಾರ್ಸ್ ನಲ್ಲಿ ಕಿಯಾ ಕಂಪನಿಯ ‘ನ್ಯೂ ಸೆಲ್ಟೋಸ್’ ಕಾರು ಬಿಡುಗಡೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ. ಸಿ. ಟ್ರಸ್ಟ್ ಗುರುವಾಯನಕೆರೆ – ‘ಮಹಿಳಾ ಜ್ಞಾನವಿಕಾಸ ಕಾರ್ಯಕ್ರಮ ತಾಲೂಕು ಮಟ್ಟದ ಮಹಿಳಾ ವಿಚಾರಗೋಷ್ಠಿ-

Suddi Udaya

ಕೊಯ್ಯೂರು ಶ್ರೀ ಕೃಷ್ಣ ಭಜನಾ ಮಂಡಳಿಯ ಸದಸ್ಯರುಗಳಿಗೆ ಅಭಿನಂದನ ಕಾರ್ಯಕ್ರಮ

Suddi Udaya

ಪುಂಜಾಲಕಟ್ಟೆ: ಪ್ರವೀಣ್ ಕುಮಾರ್ ದೋಟ ಸೇವಾ ನಿವೃತ್ತಿ

Suddi Udaya

ಅರಸಿನಮಕ್ಕಿ ಕಾಪು ಉಪ್ಪರಡ್ಕ ದೈವಸ್ಥಾನದಲ್ಲಿ ದೈವಗಳ ವಾರ್ಷಿಕ ಜಾತ್ರೆ

Suddi Udaya
error: Content is protected !!