38.6 C
ಪುತ್ತೂರು, ಬೆಳ್ತಂಗಡಿ
March 6, 2026
ಕೃಷಿಗ್ರಾಮಾಂತರ ಸುದ್ದಿಚಿತ್ರ ವರದಿ

ಅಳದಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ರೈತರಿಗೆ ಸಬ್ಸಿಡಿ ದರದಲ್ಲಿ ಮೈಲುತುತ್ತು ವಿತರಣೆ – ಸಬ್ಸಿಡಿ ಬೆಲೆ ಪ್ರತಿ ಕಿಲೋ ರೂ. 280 ಆಗಿದ್ದು,ರೈತರ ಇದರ ಪ್ರಯೋಜನ ಪಡೆಯಿರಿ: ಅಧ್ಯಕ್ಷ ರಾಕೇಶ್ ಹೆಗ್ಡೆ – ರೈತರಿಗೆ ರಸಗೊಬ್ಬರ ಹಾಗೂ ಕೀಟನಾಶಕಗಳ ಖರೀದಿಗೆ ರೂ.20 ಸಾವಿರದಂತೆ ಸಾಲ ಯೋಜನೆ

ಅಳದಂಗಡಿ: ಅಳದಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಿಂದ ರೈತರಿಗೆ ಸಬ್ಸಿಡಿ ದರದಲ್ಲಿ ಮೈಲುತುತ್ತು ವಿತರಣೆ ಮಾಡುತ್ತಿದ್ದು ಅಡಿಕೆ ಬೆಳೆಗಾರರು ಇದರ ಪ್ರಯೋಜನವನ್ನು ಪಡೆಯಬೇಕೆಂದು ಸಂಘದ ಅಧ್ಯಕ್ಷ ರಾಕೇಶ್ ಹೆಗ್ಡೆ ಬಳಂಜ ತಿಳಿಸಿರುತ್ತಾರೆ.

ಸಬ್ಸಿಡಿ ಬೆಲೆ ಪ್ರತಿ ಕಿಲೋ ರೂ. 280 ಆಗಿದ್ದು ಬೆಳೆಗಾರರಿಗೆ ಈ ಬೆಲೆಯಲ್ಲಿ ಮೈಲುತುತ್ತು ನೀಡುತ್ತಿದ್ದೇವೆ. ಕಳೆದ ಬಾರಿ ಕೊಳೆರೋಗದ ಬಾಧೆಯಿಂದ ಅಡಿಕೆ ಬೆಳಗಾರರು ತುಂಬಾ ಕಷ್ಟ ನಷ್ಟ ಗಳನ್ನು ಅನುಭವಿಸಿದ್ದು ಈ ಸಂದರ್ಭದಲ್ಲಿ ಸಂಘದಿಂದ ಕಡಿಮೆ ಬೆಲೆಯಲ್ಲಿ ಮೈಲುತುತ್ತು ನೀಡುವ ಯೋಜನೆ ಹಾಕಿಕೊಂಡಿದ್ದೇವೆ ಎಂದರು. ಜೊತೆಗೆ ರೈತರಿಗೆ ರಸಗೊಬ್ಬರ ಹಾಗೂ ಕೀಟನಾಶಕಗಳ ಖರೀದಿಗೆ ವಿಶೇಷವಾಗಿ ಪ್ರತಿ ಎಕ್ರೆಗೆ ರೂ. 20 ಸಾವಿರದಂತೆ ಓವರ್ ಡ್ರಾಫ್ಟ್, (ಓಡಿ) ಸಾಲ ನೀಡಿ ರೈತರಿಗೆ ಸದಾ ಸ್ಪಂದನೆ ನೀಡಲಾಗುವುದು. ಈ ಯೋಜನೆ ರೈತರಿಗೆ ತುಂಬಾ ಅನುಕೂಲವಾಗಲಿದೆ ಎಂದರು.

ಈಗಾಗಲೇ ಮೈಲು ತುತ್ತು ವಿತರಣೆಗೆ ಚಾಲನೆ ನೀಡಲಾಗಿದ್ದು ಶೇಖರ ಆಚಾರ್ಯ ಪಿಲ್ಯ ಹಾಗೂ ಧರ್ಣಪ್ಪ ಪೂಜಾರಿ ಬಡಗಕಾರಂದೂರು ಇವರಿಗೆ ಪ್ರಥಮವಾಗಿ ನೀಡಲಾಗಿದೆ.

ಈ ಸಂದರ್ಭದಲ್ಲಿ ಸಂಘದ ಉಪಾಧ್ಯಕ್ಷ ಜನಾರ್ಧನ ಪೂಜಾರಿ,ಸಿಇಓ ಮೀರಾ, ನಿರ್ದೇಶಕರಾದ ದಿನೇಶ್ ಪಿ‌ಕೆ,ದೇವಿಪ್ರಸಾದ್ ಶೆಟ್ಟಿ,ದೇಜಪ್ಪ ಪೂಜಾರಿ ಹಾಗೂ ಕೃಷಿಕರು ಉಪಸ್ಥಿತರಿದ್ದರು.

Related posts

ಪುದುವೆಟ್ಟು: ಶ್ರೀ ಧ.ಮಂ.ಅ.ಹಿ.ಪ್ರಾ. ಶಾಲೆಯಲ್ಲಿ ಕ್ರೀಡಾಕೂಟದ ಉದ್ಘಾಟನಾ ಕಾರ್ಯಕ್ರಮ

Suddi Udaya

ನಿಡ್ಲೆ: ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸ್ವಚ್ಚತಾ ಕಾರ್ಯಕ್ರಮ

Suddi Udaya

ಕುತ್ಲೂರು ಯುವ ಬಿಲ್ಲವ ವೇದಿಕೆಯ ಅಧ್ಯಕ್ಷರಾಗಿ ಪ್ರಜ್ಞೇಶ್ ಆಯ್ಕೆ

Suddi Udaya

ಓಡಿಲ್ನಾಳ: ಶಕ್ತಿ ಯುವಕ ಮಂಡಲ ರೇಷ್ಮೆ ರೋಡ್ ಇದರ ವಾರ್ಷಿಕ ಮಹಾಸಭೆ: ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಕನ್ಯಾಡಿ ಗ್ರಾಮದ ಪಾರ್ನಡ್ಕ ದಲ್ಲಿ ದಿ| ರಾಜೇಂದ್ರ ಎಸ್ ಸುರಕ್ಕ್ಯೆಗುತ್ತು ಇವರ ಸ್ಮರಣಾರ್ಥ ಬಸ್ ತಂಗುದಾಣ ಉದ್ಘಾಟನೆ

Suddi Udaya

ಬೆಳ್ತಂಗಡಿ ತಾಲೂಕು ಕಬ್ಬಡಿ ಅಸೋಸಿಯೇಷನ್ ತೀರ್ಪುಗಾರರ ಮಂಡಳಿಯ ಪದಾಧಿಕಾರಿಯ ಆಯ್ಕೆ: ಅಧ್ಯಕ್ಷರಾಗಿ ಪ್ರಭಾಕರ್ ನಾರಾವಿ

Suddi Udaya
error: Content is protected !!