25.5 C
ಪುತ್ತೂರು, ಬೆಳ್ತಂಗಡಿ
April 24, 2026
ಕೃಷಿಗ್ರಾಮಾಂತರ ಸುದ್ದಿಚಿತ್ರ ವರದಿ

ಅಳದಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ರೈತರಿಗೆ ಸಬ್ಸಿಡಿ ದರದಲ್ಲಿ ಮೈಲುತುತ್ತು ವಿತರಣೆ – ಸಬ್ಸಿಡಿ ಬೆಲೆ ಪ್ರತಿ ಕಿಲೋ ರೂ. 280 ಆಗಿದ್ದು,ರೈತರ ಇದರ ಪ್ರಯೋಜನ ಪಡೆಯಿರಿ: ಅಧ್ಯಕ್ಷ ರಾಕೇಶ್ ಹೆಗ್ಡೆ – ರೈತರಿಗೆ ರಸಗೊಬ್ಬರ ಹಾಗೂ ಕೀಟನಾಶಕಗಳ ಖರೀದಿಗೆ ರೂ.20 ಸಾವಿರದಂತೆ ಸಾಲ ಯೋಜನೆ

ಅಳದಂಗಡಿ: ಅಳದಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಿಂದ ರೈತರಿಗೆ ಸಬ್ಸಿಡಿ ದರದಲ್ಲಿ ಮೈಲುತುತ್ತು ವಿತರಣೆ ಮಾಡುತ್ತಿದ್ದು ಅಡಿಕೆ ಬೆಳೆಗಾರರು ಇದರ ಪ್ರಯೋಜನವನ್ನು ಪಡೆಯಬೇಕೆಂದು ಸಂಘದ ಅಧ್ಯಕ್ಷ ರಾಕೇಶ್ ಹೆಗ್ಡೆ ಬಳಂಜ ತಿಳಿಸಿರುತ್ತಾರೆ.

ಸಬ್ಸಿಡಿ ಬೆಲೆ ಪ್ರತಿ ಕಿಲೋ ರೂ. 280 ಆಗಿದ್ದು ಬೆಳೆಗಾರರಿಗೆ ಈ ಬೆಲೆಯಲ್ಲಿ ಮೈಲುತುತ್ತು ನೀಡುತ್ತಿದ್ದೇವೆ. ಕಳೆದ ಬಾರಿ ಕೊಳೆರೋಗದ ಬಾಧೆಯಿಂದ ಅಡಿಕೆ ಬೆಳಗಾರರು ತುಂಬಾ ಕಷ್ಟ ನಷ್ಟ ಗಳನ್ನು ಅನುಭವಿಸಿದ್ದು ಈ ಸಂದರ್ಭದಲ್ಲಿ ಸಂಘದಿಂದ ಕಡಿಮೆ ಬೆಲೆಯಲ್ಲಿ ಮೈಲುತುತ್ತು ನೀಡುವ ಯೋಜನೆ ಹಾಕಿಕೊಂಡಿದ್ದೇವೆ ಎಂದರು. ಜೊತೆಗೆ ರೈತರಿಗೆ ರಸಗೊಬ್ಬರ ಹಾಗೂ ಕೀಟನಾಶಕಗಳ ಖರೀದಿಗೆ ವಿಶೇಷವಾಗಿ ಪ್ರತಿ ಎಕ್ರೆಗೆ ರೂ. 20 ಸಾವಿರದಂತೆ ಓವರ್ ಡ್ರಾಫ್ಟ್, (ಓಡಿ) ಸಾಲ ನೀಡಿ ರೈತರಿಗೆ ಸದಾ ಸ್ಪಂದನೆ ನೀಡಲಾಗುವುದು. ಈ ಯೋಜನೆ ರೈತರಿಗೆ ತುಂಬಾ ಅನುಕೂಲವಾಗಲಿದೆ ಎಂದರು.

ಈಗಾಗಲೇ ಮೈಲು ತುತ್ತು ವಿತರಣೆಗೆ ಚಾಲನೆ ನೀಡಲಾಗಿದ್ದು ಶೇಖರ ಆಚಾರ್ಯ ಪಿಲ್ಯ ಹಾಗೂ ಧರ್ಣಪ್ಪ ಪೂಜಾರಿ ಬಡಗಕಾರಂದೂರು ಇವರಿಗೆ ಪ್ರಥಮವಾಗಿ ನೀಡಲಾಗಿದೆ.

ಈ ಸಂದರ್ಭದಲ್ಲಿ ಸಂಘದ ಉಪಾಧ್ಯಕ್ಷ ಜನಾರ್ಧನ ಪೂಜಾರಿ,ಸಿಇಓ ಮೀರಾ, ನಿರ್ದೇಶಕರಾದ ದಿನೇಶ್ ಪಿ‌ಕೆ,ದೇವಿಪ್ರಸಾದ್ ಶೆಟ್ಟಿ,ದೇಜಪ್ಪ ಪೂಜಾರಿ ಹಾಗೂ ಕೃಷಿಕರು ಉಪಸ್ಥಿತರಿದ್ದರು.

Related posts

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಕಮೋಡ್ ವೀಲ್‌ಚೇರ್ ವಿತರಣೆ

Suddi Udaya

ಪಾಡ್ಯಾರು ಮಜಲು ರಾಜಗ್ರಹ ನಿವಾಸಿ ಶ್ರೀಮತಿ ವಿಮಲಾ ಡಿ’ ಪಾಂಡಿ ನಿಧನ

Suddi Udaya

ಇಂದಬೆಟ್ಟು: ಮನ್ನಡ್ಕ ನಿವಾಸಿ ಮಿನ್ಕಿ ಗೌಡ ನಿಧನ

Suddi Udaya

ವಲಯ ಮಟ್ಟದ ಬಂಟರ ಕ್ರೀಡಾಕೂಟ: ಪ್ರಜನ್ ಶೆಟ್ಟಿ ಮುಂಡಾಜೆ ಪ್ರಥಮ

Suddi Udaya

ಫೆ.1: ಭೂಸೇನೆಯಲ್ಲಿ 22 ವರ್ಷ ದೇಶ ಸೇವೆ ಸಲ್ಲಿಸಿ ನಿವೃತ್ತಿ ಹೊಂದುತ್ತಿರುವ ಎ.ಸಿ.ಪಿ ಹವಾಲ್ದಾರ್ ದೇವಕುಮಾರ್ ಗೌಡರಿಗೆ ಹುಟ್ಟೂರಿನಲ್ಲಿ ಸ್ವಾಗತ ಅಭಿನಂದನಾ ಕಾರ್ಯಕ್ರಮ

Suddi Udaya

ದ.ಕ.ಜಿಲ್ಲಾ ತುಳುನಾಡು ಕೋಳಿ ಸಾಕಾಣಿಕೆ ರೈತರ ಒಕ್ಕೂಟದ ನಿರ್ದೇಶಕರಾಗಿ ಗುರುಪ್ರಸಾದ್ ಆಯ್ಕೆ

Suddi Udaya
error: Content is protected !!