22.6 C
ಪುತ್ತೂರು, ಬೆಳ್ತಂಗಡಿ
July 23, 2026
ಕೃಷಿಗ್ರಾಮಾಂತರ ಸುದ್ದಿಚಿತ್ರ ವರದಿ

ಅಳದಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ರೈತರಿಗೆ ಸಬ್ಸಿಡಿ ದರದಲ್ಲಿ ಮೈಲುತುತ್ತು ವಿತರಣೆ – ಸಬ್ಸಿಡಿ ಬೆಲೆ ಪ್ರತಿ ಕಿಲೋ ರೂ. 280 ಆಗಿದ್ದು,ರೈತರ ಇದರ ಪ್ರಯೋಜನ ಪಡೆಯಿರಿ: ಅಧ್ಯಕ್ಷ ರಾಕೇಶ್ ಹೆಗ್ಡೆ – ರೈತರಿಗೆ ರಸಗೊಬ್ಬರ ಹಾಗೂ ಕೀಟನಾಶಕಗಳ ಖರೀದಿಗೆ ರೂ.20 ಸಾವಿರದಂತೆ ಸಾಲ ಯೋಜನೆ

ಅಳದಂಗಡಿ: ಅಳದಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಿಂದ ರೈತರಿಗೆ ಸಬ್ಸಿಡಿ ದರದಲ್ಲಿ ಮೈಲುತುತ್ತು ವಿತರಣೆ ಮಾಡುತ್ತಿದ್ದು ಅಡಿಕೆ ಬೆಳೆಗಾರರು ಇದರ ಪ್ರಯೋಜನವನ್ನು ಪಡೆಯಬೇಕೆಂದು ಸಂಘದ ಅಧ್ಯಕ್ಷ ರಾಕೇಶ್ ಹೆಗ್ಡೆ ಬಳಂಜ ತಿಳಿಸಿರುತ್ತಾರೆ.

ಸಬ್ಸಿಡಿ ಬೆಲೆ ಪ್ರತಿ ಕಿಲೋ ರೂ. 280 ಆಗಿದ್ದು ಬೆಳೆಗಾರರಿಗೆ ಈ ಬೆಲೆಯಲ್ಲಿ ಮೈಲುತುತ್ತು ನೀಡುತ್ತಿದ್ದೇವೆ. ಕಳೆದ ಬಾರಿ ಕೊಳೆರೋಗದ ಬಾಧೆಯಿಂದ ಅಡಿಕೆ ಬೆಳಗಾರರು ತುಂಬಾ ಕಷ್ಟ ನಷ್ಟ ಗಳನ್ನು ಅನುಭವಿಸಿದ್ದು ಈ ಸಂದರ್ಭದಲ್ಲಿ ಸಂಘದಿಂದ ಕಡಿಮೆ ಬೆಲೆಯಲ್ಲಿ ಮೈಲುತುತ್ತು ನೀಡುವ ಯೋಜನೆ ಹಾಕಿಕೊಂಡಿದ್ದೇವೆ ಎಂದರು. ಜೊತೆಗೆ ರೈತರಿಗೆ ರಸಗೊಬ್ಬರ ಹಾಗೂ ಕೀಟನಾಶಕಗಳ ಖರೀದಿಗೆ ವಿಶೇಷವಾಗಿ ಪ್ರತಿ ಎಕ್ರೆಗೆ ರೂ. 20 ಸಾವಿರದಂತೆ ಓವರ್ ಡ್ರಾಫ್ಟ್, (ಓಡಿ) ಸಾಲ ನೀಡಿ ರೈತರಿಗೆ ಸದಾ ಸ್ಪಂದನೆ ನೀಡಲಾಗುವುದು. ಈ ಯೋಜನೆ ರೈತರಿಗೆ ತುಂಬಾ ಅನುಕೂಲವಾಗಲಿದೆ ಎಂದರು.

ಈಗಾಗಲೇ ಮೈಲು ತುತ್ತು ವಿತರಣೆಗೆ ಚಾಲನೆ ನೀಡಲಾಗಿದ್ದು ಶೇಖರ ಆಚಾರ್ಯ ಪಿಲ್ಯ ಹಾಗೂ ಧರ್ಣಪ್ಪ ಪೂಜಾರಿ ಬಡಗಕಾರಂದೂರು ಇವರಿಗೆ ಪ್ರಥಮವಾಗಿ ನೀಡಲಾಗಿದೆ.

ಈ ಸಂದರ್ಭದಲ್ಲಿ ಸಂಘದ ಉಪಾಧ್ಯಕ್ಷ ಜನಾರ್ಧನ ಪೂಜಾರಿ,ಸಿಇಓ ಮೀರಾ, ನಿರ್ದೇಶಕರಾದ ದಿನೇಶ್ ಪಿ‌ಕೆ,ದೇವಿಪ್ರಸಾದ್ ಶೆಟ್ಟಿ,ದೇಜಪ್ಪ ಪೂಜಾರಿ ಹಾಗೂ ಕೃಷಿಕರು ಉಪಸ್ಥಿತರಿದ್ದರು.

Related posts

ಜೆಸಿಐ ಬೆಳ್ತಂಗಡಿ ಜೆಸಿ ಸಪ್ತಾಹ ಅಂಗವಾಗಿ ಗಣೇಶ್ ಆಸ್ಪತ್ರೆ ಇದರ ಸಹಭಾಗಿತ್ವದಲ್ಲಿ ಉಚಿತ ಆರೋಗ್ಯ ತಪಾಸಣೆ ಶಿಬಿರ

Suddi Udaya

ಬೆಳ್ತಂಗಡಿ: ಸರಕಾರಿ ಪ.ಪೂ. ಕಾಲೇಜು ಹಾಗೂ ಸರಕಾರಿ ಪ್ರೌಢಶಾಲೆಯ ಸಂಯುಕ್ತ ಆಶ್ರಯದಲ್ಲಿ ವಿದ್ಯಾರ್ಥಿಗಳ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ

Suddi Udaya

ಬಿಯರ್ ಬಾಟಲಿಯಿಂದ ಇರಿದು ಚಿಕ್ಕಪ್ಪನನ್ನೇ ಕೊಲೆಗೈದ ಯುವಕ

Suddi Udaya

‘ಎಸ್.ಡಿ.ಎಂ. ಉದ್ಯೋಗಂ – 2026’ ಬೃಹತ್ ಉದ್ಯೋಗ ಮೇಳ ಸಂಪನ್ನ

Suddi Udaya

ಬೆಳ್ತಂಗಡಿ ಬಿಜೆಪಿ ಯುವಮೋರ್ಚಾ ವತಿಯಿಂದ 6ನೇ ವರ್ಷದ ದೀಪಾವಳಿ ದೋಸೆ ಹಬ್ಬ ಹಾಗೂ ನಮೋ ಮ್ಯಾರಥಾನ್ ಪೂರ್ವಭಾವಿ ಸಭೆ

Suddi Udaya

ಬಜಿರೆ: ಬಾಡಾರು ನಿವಾಸಿ ಶ್ರೀಮತಿ ಪ್ರೇಮ ಜೈನ್ ನಿಧನ

Suddi Udaya
error: Content is protected !!