22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕೊಕ್ಕಡ: EduNest ಅಕಾಡೆಮಿ ಕೋಚಿಂಗ್ ಕೇಂದ್ರ ಉದ್ಘಾಟನೆ

ಕೊಕ್ಕಡ: ಮಕ್ಕಳ ಭವಿಷ್ಯ ನಿರ್ಮಾಣದ ಮಹತ್ವದ ಗುರಿಯನ್ನು ಮನಸಿನಲ್ಲಿಟ್ಟುಕೊಂಡು ಕೊಕ್ಕಡದ ಸಮ್ಯಕ್ ಬಿಲ್ಡಿಂಗ್ ನಲ್ಲಿ ಆರಂಭಿಸಿರುವ EduNest ಅಕಾಡೆಮಿ ಕೋಚಿಂಗ್ ಕೇಂದ್ರವನ್ನು ಪೆರ್ಲಾ ಮತ್ತು ಕೊಕ್ಕಡ ಕ್ಲಸ್ಟರಿನ ಸಮೂಹ ಸಂಪನ್ಮೂಲ ವ್ಯಕ್ತಿ ವಿಲ್ಫ್ರೆಡ್ ಪಿಂಟೋರವರು ಮೇ 25ರಂದು ದೀಪ ಬೆಳಗಿಸಿ ಉದ್ಘಾಟಿಸಿ, ತರಬೇತಿ ಕೇಂದ್ರಕ್ಕೆ ಶುಭಹಾರೈಸಿದರು. ವೇದಿಕೆಯಲ್ಲಿ ಸಂತೋಷ್ ಜೈನ್ ಮತ್ತು ಶ್ರೀಮತಿ ರೇಷ್ಮಾ ಉಪಸ್ಥಿತರಿದ್ದರು.

ಸಂಸ್ಥೆಯು 1 ನೇ ತರಗತಿಯಿಂದ 8ನೇ ತರಗತಿಯವರೆಗೆ ಟ್ಯೂಷನ್ ತರಗತಿ ಮತ್ತು 9, 10ನೇ ತರಗತಿ ಮತ್ತು 1st ಪಿಯುಸಿ( Science ಮತ್ತು Commerce) ತರಗತಿಯವರಿಗೆ ಬೋಧನೆಯನ್ನು ಒದಗಿಸಲಾಗುತ್ತದೆ. ಇದರೊಟ್ಟಿಗೆ ಗಣಿತವನ್ನು ಸುಲಭ ರೀತಿಯಲ್ಲಿ ಕಲಿಯುವಂತಹ ಅಬಕಾಸ್ ತರಗತಿಯನ್ನು ನಡೆಸಲಾಗುತ್ತದೆ. ಅನುಭವಿ ಅಧ್ಯಾಪಕರು, ವಿದ್ಯಾರ್ಥಿಗಳೊಂದಿಗೆ ವ್ಯೆಯಕ್ತಿಕ ಗಮನ, ನಡವಳಿಕೆಯ ಮಾರ್ಪಡು, ಓದುವಿಕೆ ಮತ್ತು ಬರವಣಿಗೆ ಕೌಶಲ್ಯಗಳು, ಪೋಷಕರಿಗೆ ನಿಯಮಿತವಾಗಿ ವರದಿ ಮಾಡುವುದು, ನಿಯಮಿತ ಪರೀಕ್ಷಾ ಸರಣಿಗಳು. ವಿದ್ಯಾರ್ಥಿಗಳ ಶೈಕ್ಷಣಿಕ ಕ್ಷೇತ್ರದಲ್ಲಿ ತಮ್ಮ ಅತ್ಯುತ್ತಮ ಸಾಧನೆ ಮಾಡಲು ಸಹಾಯ ಮಾಡುವುದು. ಕಲಿಕೆಯ ಸುಲಭ ವಿಧಾನ, ಕಷ್ಟಪಡುತ್ತಿರುವ ವಿದ್ಯಾರ್ಥಿಗಳಿಗೆ ಸೂಕ್ತವೇದಿಕೆ ಒದಗಿಸುವುದು. ಇದರ ಜೊತೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿಯಾಗಳು ಬೇಕಾಗುವ ತರಬೇತಿ, ಕ್ಯಾರಿಯರ್ ಗೈಡೆನ್ಸ್ ಮತ್ತು ವೆಕ್ತಿತ್ವ ವಿಕಾಸನಕ್ಕೆ ಬೇಕಾಗುವ ತರಬೇತಿಯನ್ನು ನೀಡುವುದಾಗಿ ಸಂಸ್ಥೆಯ ಸದಸ್ಯರು ಪ್ರಕಟಿಸಿದರು.

ಈ ಸಂದರ್ಭದಲ್ಲಿ ಸಂಸ್ಥೆಯ ಸದಸ್ಯರಾದ ಶ್ರೀಮತಿ ಅಭಿಜ್ಞಾ, ಅಧ್ಯಾಪಕರಾದ ಶ್ರೀಮತಿ ಶುಭ್ರ ಜೈನ್, ಶ್ರೀಮತಿ ದೀಪಿಕಾ ಉಪಸ್ಥಿತರಿದ್ದರು. ಅದೇ ರೀತಿ ಉದ್ಘಾಟನಾ ಸಮಾರಂಭದಲ್ಲಿ ವಿದ್ಯಾರ್ಥಿಗಳು, ಪೋಷಕರು ಮತ್ತು ಸ್ಥಳೀಯರು ಉಪಸ್ಥಿತರಿದ್ದರು. ಡಾ. ಶೋಭಾ ನಿರೂಪಿಸಿದ ಕಾರ್ಯಕ್ರಮವನ್ನು ಕುಮಾರಿ ಪ್ರೀತಿಕಾ ಪ್ರಾರ್ಥನೆ ಮಾಡಿ, ಶ್ರೀಮತಿ ಮನೋರಮ ವಂದಿಸಿದರು.

Related posts

ಮಡಂತ್ಯಾರು ಬಿಎಂಎಸ್ ಆಟೋ ಚಾಲಕ ಮಾಲಕರ ಸಂಘ ಹಾಗೂ ಮಚ್ಚಿನ ಗ್ರಾ.ಪಂ. ನಿಂದ ಆಧಾರ್ ನೋಂದಣಿ ಮತ್ತು ಪರಿಷ್ಕರಣೆ

Suddi Udaya

ಜು.15: ಧರ್ಮಸ್ಥಳದಲ್ಲಿ ಆತಿಥ್ಯ ವೆಜ್ ಹೊಟೇಲ್ ಶುಭಾರಂಭ

Suddi Udaya

ಅಳದಂಗಡಿ: ಸತ್ಯದೇವತಾ ದೈವಸ್ಥಾನದ ಆಡಳಿತದಾರ ಶಿವಪ್ರಸಾದ್ ಅಜಿಲರ ನಿವಾಸಕ್ಕೆ ಭೇಟಿ ನೀಡಿದ ಲಾವಣ್ಯ ಬಳ್ಳಾಲ್

Suddi Udaya

ಗುರುವಾಯನಕೆರೆ ಸ.ಹಿ.ಪ್ರಾ, ಶಾಲೆಯಲ್ಲಿ ಮಾನವ ಹಕ್ಕುಗಳ ಮಹತ್ವದ ಬಗ್ಗೆ ಮಾಹಿತಿ ಕಾರ್ಯಕ್ರಮ

Suddi Udaya

ಪಂಜ: ವಲಯ ಅರಣ್ಯಾಧಿಕಾರಿಯಾಗಿ ಬೆಳ್ತಂಗಡಿಯ ಶ್ರೀಮತಿ ಸಂಧ್ಯಾ ಅಧಿಕಾರ ಸ್ವೀಕಾರ

Suddi Udaya

ಕರಾಯ: ಭಗವಾನ್ ಶಿರಡಿ ಸಾಯಿ ಸತ್ಯ ಸಾಯಿ ಸೇವಾ ಕ್ಷೇತ್ರದಿಂದ ಭಜನ್ ಸಂಧ್ಯಾ ಕಾರ್ಯಕ್ರಮ ಹಾಗೂ ಶ್ರೀ ಸತ್ಯನಾರಾಯಣ ಪೂಜೆ

Suddi Udaya
error: Content is protected !!