22.7 C
ಪುತ್ತೂರು, ಬೆಳ್ತಂಗಡಿ
June 3, 2025
Uncategorized

ಗುರುವಾಯನಕೆರೆ ಶಿವಂ ಟೆಕ್ಸ್ ಟೈಲ್ಸ್ ಮಾಲೀಕ ಶರ್ವಣ್ ಹೃದಯಾಘಾತದಿಂದ ನಿಧನ

ಗುರುವಾಯನಕೆರೆ: ಶಿವಂ ಟೆಕ್ಸ್‌ಟೈಲ್ ಮಾಲೀಕ ಶರ್ವಣ್ (32ವ) ಮೇ.26ರಂದು ಹೃದಯಾಘಾತದಿಂದ ನಿಧನರಾಗಿದ್ದಾರೆ.

ಮೂಲತಃ ರಾಜಸ್ಥಾನದವರಾಗಿದ್ದ ಶರ್ವಣ್ ಅವರು ಗುರುವಾಯನಕೆರೆಯ ಹವ್ಯಕ ಭವನದ ಹತ್ತಿರ ಬಾಡಿಗೆಗಿದ್ದ ಮನೆಯಲ್ಲಿ ತಲೆ ತಿರುಗುತ್ತಿದೆ ಎಂದು ಹೇಳಿ ಮಲಗಿದವರು ಎದ್ದೇಳದೆ ಇದ್ದಾಗ ಗಾಬರಿಗೊಂಡ ಮನೆಯವರು ಶರ್ವಣರನ್ನು ತಕ್ಷಣ ಅಭಯ ಆಸ್ಪತ್ರೆಗೆ ದಾಖಲು ಮಾಡಿದರು.

ಪರಿಶೀಲಿಸಿದ ವೈದ್ಯರು ಶರ್ವಣ್ ಹೃದಯಾಘಾತದಿಂದ ಮೃತಪಟ್ಟಿರುವುದನ್ನು ದೃಢಪಡಿಸಿದ್ದು, ಇದೀಗ ಮೃತದೇಹವನ್ನು ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ. ಪೋಸ್ಟ್ ಮಾರ್ಟಂ ನಂತರ ಶರ್ವಣ್ ರ ಮೃತಶರೀರವನ್ನು ಅವರ ಊರಾದ ರಾಜಸ್ಥಾನಕ್ಕೆ ತೆಗೆದುಕೊಂಡು ಹೋಗಲಾಗುವುದು ಎಂದು ಮನೆ ಮಂದಿ ತಿಳಿಸಿದ್ದಾರೆ.

ಶರ್ವಣ್ ಅವರಿಗೆ ನವೆಂಬರ್‌ನಲ್ಲಿ ಮದುವೆ ಗೊತ್ತು ಮಾಡಲಾಗಿತ್ತು. ಮನೆಮಂದಿಯ ಆಕ್ರಂದನ ಮುಗಿಲು ಮುಟ್ಟಿದ್ದು ಅಪಾರ ಬಂಧು ಮಿತ್ರರನ್ನು ಅಗಲಿದ್ದಾರೆ.

Related posts

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್‌ ತಾಲೂಕು ಮಟ್ಟದ ಸಭೆ

Suddi Udaya

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದುರ್ಗಾ ದೇವಿ ದೇವಸ್ಥಾನಕ್ಕೆ ಧಾರ್ಮಿಕ ಪರಿಷತ್ ಸದಸ್ಯ ಯೋಗೀಶ್ ಕುಮಾರ್ ನಡಕ್ಕರ ಭೇಟಿ

Suddi Udaya

ಉಜಿರೆ: ಕುಂಜರ್ಪದಲ್ಲಿ 5ನೇ ವರ್ಷದ ದುರ್ಗಾಪೂಜೆ

Suddi Udaya

ಕರ್ನಾಟಕ ಮುಸ್ಲಿಂ ಜಮಾಅತ್ ಬೆಳ್ತಂಗಡಿ ಸರ್ಕಲ್ ಸಮಿತಿ ವಾರ್ಷಿಕ ಮಹಾಸಭೆ, ಸಮಿತಿ ರಚನೆ

Suddi Udaya

ಇಂದಬೆಟ್ಟು ಸಾರ್ವಜನಿಕ ಶ್ರೀ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಮಡಂತ್ಯಾರು: ಬಿದ್ದ ಪರ್ಸ್ ಹಿಂದುರುಗಿಸಿ ಕೊಟ್ಟು ಮಾನವೀಯತೆ ಮೆರೆದ ಆಟೋ ಚಾಲಕ ಇರ್ಷಾದ್

Suddi Udaya
error: Content is protected !!