September 6, 2026
Uncategorized

ಗುರುವಾಯನಕೆರೆ ಶಿವಂ ಟೆಕ್ಸ್ ಟೈಲ್ಸ್ ಮಾಲೀಕ ಶರ್ವಣ್ ಹೃದಯಾಘಾತದಿಂದ ನಿಧನ

ಗುರುವಾಯನಕೆರೆ: ಶಿವಂ ಟೆಕ್ಸ್‌ಟೈಲ್ ಮಾಲೀಕ ಶರ್ವಣ್ (32ವ) ಮೇ.26ರಂದು ಹೃದಯಾಘಾತದಿಂದ ನಿಧನರಾಗಿದ್ದಾರೆ.

ಮೂಲತಃ ರಾಜಸ್ಥಾನದವರಾಗಿದ್ದ ಶರ್ವಣ್ ಅವರು ಗುರುವಾಯನಕೆರೆಯ ಹವ್ಯಕ ಭವನದ ಹತ್ತಿರ ಬಾಡಿಗೆಗಿದ್ದ ಮನೆಯಲ್ಲಿ ತಲೆ ತಿರುಗುತ್ತಿದೆ ಎಂದು ಹೇಳಿ ಮಲಗಿದವರು ಎದ್ದೇಳದೆ ಇದ್ದಾಗ ಗಾಬರಿಗೊಂಡ ಮನೆಯವರು ಶರ್ವಣರನ್ನು ತಕ್ಷಣ ಅಭಯ ಆಸ್ಪತ್ರೆಗೆ ದಾಖಲು ಮಾಡಿದರು.

ಪರಿಶೀಲಿಸಿದ ವೈದ್ಯರು ಶರ್ವಣ್ ಹೃದಯಾಘಾತದಿಂದ ಮೃತಪಟ್ಟಿರುವುದನ್ನು ದೃಢಪಡಿಸಿದ್ದು, ಇದೀಗ ಮೃತದೇಹವನ್ನು ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ. ಪೋಸ್ಟ್ ಮಾರ್ಟಂ ನಂತರ ಶರ್ವಣ್ ರ ಮೃತಶರೀರವನ್ನು ಅವರ ಊರಾದ ರಾಜಸ್ಥಾನಕ್ಕೆ ತೆಗೆದುಕೊಂಡು ಹೋಗಲಾಗುವುದು ಎಂದು ಮನೆ ಮಂದಿ ತಿಳಿಸಿದ್ದಾರೆ.

ಶರ್ವಣ್ ಅವರಿಗೆ ನವೆಂಬರ್‌ನಲ್ಲಿ ಮದುವೆ ಗೊತ್ತು ಮಾಡಲಾಗಿತ್ತು. ಮನೆಮಂದಿಯ ಆಕ್ರಂದನ ಮುಗಿಲು ಮುಟ್ಟಿದ್ದು ಅಪಾರ ಬಂಧು ಮಿತ್ರರನ್ನು ಅಗಲಿದ್ದಾರೆ.

Related posts

ವಾಣಿ ಪದವಿಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕದ ವಾರ್ಷಿಕ ವಿಶೇಷ ಶಿಬಿರ

Suddi Udaya

ಅಂಡಿಂಜೆ ಗ್ರಾ.ಪಂ. ವತಿಯಿಂದ ಪ.ಜಾತಿ, ಪ. ಪಂಗಡದ ಕುಟುಂಬಗಳಿಗೆ ಹಾಗೂ ವಿಶೇಷ ಚೇತನರಿಗೆ ತಲಾ ಎರಡರಂತೆ ಚಯರ್ ವಿತರಣೆ

Suddi Udaya

ಸುಲ್ಕೇರಿಯಲ್ಲಿ ಭಾರಿ ಮಳೆ: ಸಂಚಾರ ಅಸ್ತವ್ಯಸ್ತ

Suddi Udaya

ಶಾಸಕ ಹರೀಶ್ ಪೂಂಜ ಗಡಾ೯ಡಿ ಶಾಲೆಯ ಮತದಾನ ಕೇಂದ್ರದಲ್ಲಿ ಮತದಾನ

Suddi Udaya

ಹದಗೆಟ್ಟ ರಾಜ್ಯದ ಆರ್ಥಿಕತೆ ತುಂಬಲು ಕುಮ್ಕಿ ಭೂಮಿಯ ಕಬಳಿಕೆಗೆ ಸರಕಾರದ ಹುನ್ನಾರ: ಬಿಜೆಪಿ ರೈತ ಮೋರ್ಚಾ ಆಕ್ರೋಶ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಸಹಾಯಧನ

Suddi Udaya
error: Content is protected !!