22.6 C
ಪುತ್ತೂರು, ಬೆಳ್ತಂಗಡಿ
July 23, 2026
Uncategorized

ಗುರುವಾಯನಕೆರೆ ಶಿವಂ ಟೆಕ್ಸ್ ಟೈಲ್ಸ್ ಮಾಲೀಕ ಶರ್ವಣ್ ಹೃದಯಾಘಾತದಿಂದ ನಿಧನ

ಗುರುವಾಯನಕೆರೆ: ಶಿವಂ ಟೆಕ್ಸ್‌ಟೈಲ್ ಮಾಲೀಕ ಶರ್ವಣ್ (32ವ) ಮೇ.26ರಂದು ಹೃದಯಾಘಾತದಿಂದ ನಿಧನರಾಗಿದ್ದಾರೆ.

ಮೂಲತಃ ರಾಜಸ್ಥಾನದವರಾಗಿದ್ದ ಶರ್ವಣ್ ಅವರು ಗುರುವಾಯನಕೆರೆಯ ಹವ್ಯಕ ಭವನದ ಹತ್ತಿರ ಬಾಡಿಗೆಗಿದ್ದ ಮನೆಯಲ್ಲಿ ತಲೆ ತಿರುಗುತ್ತಿದೆ ಎಂದು ಹೇಳಿ ಮಲಗಿದವರು ಎದ್ದೇಳದೆ ಇದ್ದಾಗ ಗಾಬರಿಗೊಂಡ ಮನೆಯವರು ಶರ್ವಣರನ್ನು ತಕ್ಷಣ ಅಭಯ ಆಸ್ಪತ್ರೆಗೆ ದಾಖಲು ಮಾಡಿದರು.

ಪರಿಶೀಲಿಸಿದ ವೈದ್ಯರು ಶರ್ವಣ್ ಹೃದಯಾಘಾತದಿಂದ ಮೃತಪಟ್ಟಿರುವುದನ್ನು ದೃಢಪಡಿಸಿದ್ದು, ಇದೀಗ ಮೃತದೇಹವನ್ನು ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ. ಪೋಸ್ಟ್ ಮಾರ್ಟಂ ನಂತರ ಶರ್ವಣ್ ರ ಮೃತಶರೀರವನ್ನು ಅವರ ಊರಾದ ರಾಜಸ್ಥಾನಕ್ಕೆ ತೆಗೆದುಕೊಂಡು ಹೋಗಲಾಗುವುದು ಎಂದು ಮನೆ ಮಂದಿ ತಿಳಿಸಿದ್ದಾರೆ.

ಶರ್ವಣ್ ಅವರಿಗೆ ನವೆಂಬರ್‌ನಲ್ಲಿ ಮದುವೆ ಗೊತ್ತು ಮಾಡಲಾಗಿತ್ತು. ಮನೆಮಂದಿಯ ಆಕ್ರಂದನ ಮುಗಿಲು ಮುಟ್ಟಿದ್ದು ಅಪಾರ ಬಂಧು ಮಿತ್ರರನ್ನು ಅಗಲಿದ್ದಾರೆ.

Related posts

ಜನಸ್ಪಂದನ ಸಭೆಗೆ ಸ್ಪಂದನೆ ನೀಡದ ಬಾರ್ಯ ಗ್ರಾಮ ಪಂಚಾಯತ್ ಆಡಳಿತ: ಪಿಡಿಒ ವಿರುದ್ಧ ಶಾಸಕರು ಗರಂ

Suddi Udaya

ಶ್ರೀ ಧ.ಮಂ. ಇಂಜಿನಿಯರಿಂಗ್ ಕಾಲೇಜಿನಲ್ಲಿ ಸೈಬರ್ ಅಪರಾಧ ಮತ್ತು ಸುರಕ್ಷತೆ

Suddi Udaya

ನೆಲ್ಲಿಕಟ್ಟೆ ಶ್ರೀ ಮಂಜುನಾಥೇಶ್ವರ ಭಜನಾ ಮಂಡಳಿ ನೂತನ ಅಧ್ಯಕ್ಷರಾಗಿ ಜನಾರ್ಧನ ಗೌಡ ಕುಳಾಯಿ ಕಾರ್ಯದರ್ಶಿಯಾಗಿ ಸುಂದರ್ ನಾಯ್ಕ್ ಕುಳಾಯಿ ಆಯ್ಕೆ

Suddi Udaya

ಉಜಿರೆ ಟೆಕ್ಸ್ ಟೈಲ್ಸ್ ಉದ್ಯಮಿಯಿಂದ ಲೈಂಗಿಕ ದೌರ್ಜನ್ಯ ಆರೋಪ: ಕೆಲಸಕ್ಕೆ ಬಂದ ಮಹಿಳೆಯಿಂದ ಬೆಳ್ತಂಗಡಿ ಠಾಣೆಯಲ್ಲಿ ದೂರು ದಾಖಲು

Suddi Udaya

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಚುನಾವಣೆ ಶೇ. 73.64 ಮತದಾನ

Suddi Udaya

ಎಸ್‌ಡಿಎಂ ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವಿಜ್ಞಾನಗಳ ಕಾಲೇಜಿನಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya
error: Content is protected !!