22.9 C
ಪುತ್ತೂರು, ಬೆಳ್ತಂಗಡಿ
May 31, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಸಿಇಟಿ ಫಲಿತಾಂಶ : ಎಕ್ಸಲೆಂಟ್ ಮೂಡುಬಿದಿರೆ ವಿದ್ಯಾರ್ಥಿಗಳಿಗೆ ಅತ್ಯುತ್ತಮ ರ‍್ಯಾಂಕ್

ಮೂಡುಬಿದಿರೆ : ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ವಿವಿಧ ವೃತ್ತಿಪರ ಕೋರ್ಸುಗಳ ಪ್ರವೇಶಾತಿಗಾಗಿ ನಡೆಸಿದ ಸಿಇಟಿ ಫಲಿತಾಂಶ ಪ್ರಕಟಗೊಂಡಿದ್ದು ಮೂಡುಬಿದಿರೆಯ ಎಕ್ಸಲೆಂಟ್ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಅಭೂತಪೂರ್ವ ಸಾಧನೆಯನ್ನು ಮಾಡಿದ್ದಾರೆ.


ಶಿಶಿರ್ ಹೆಚ್ ಶೆಟ್ಟಿ ಇ೦ಜಿನಿಯರಿ೦ಗ್ ವಿಭಾಗದಲ್ಲಿ 4 ನೇ ರ‍್ಯಾಂಕ್, ನೂತನ್ ಕೃಷ್ಣ ಬಿ ಬಿ ಎನ್ ವೈ ಎಸ್ ನಲ್ಲಿ ೪ ನೇ ರ‍್ಯಾಂಕ್, ಬಿ ಫಾರ್ಮ ಮತ್ತು ಫಾರ್ಮಾ ಡಿ ನಲ್ಲಿ ೫ ನೇ ರ‍್ಯಾಂಕ್, ಬಿ ಎಸ್ಸಿ ನರ್ಸಿ೦ಗ್ ಮತ್ತು ವೆಟರಿನರಿ ಸಾಯನ್ಸ್ ನಲ್ಲಿ ೬ ನೇ ರ‍್ಯಾಂಕ್ ನ್ನು ಗಳಿಸಿರುತ್ತಾನೆ.


ವಿವಿಧ ವಿಭಾಗಗಳಲ್ಲಿ ನಡೆದ ಸಿಇಟಿ ಪರೀಕ್ಷೆಯಲ್ಲಿ ಎಕ್ಸಲೆಂಟ್ ಸಂಸ್ಥೆಯ ವಿದ್ಯಾರ್ಥಿಗಳು ನೂರರ ಒಳಗೆ ೧೩ ರ‍್ಯಾಂಕ್, ಐದುನೂರರ ಒಳಗೆ ೩೮ ರ‍್ಯಾಂಕ್, ಸಾವಿರದ ಒಳಗೆ ೬೪ ರ‍್ಯಾಂಕ್ ಗಳನ್ನು ಪಡೆದು ರಾಜ್ಯದ ಪ್ರತಿಷ್ಠಿತ ಸಂಸ್ಥೆಗಳಲ್ಲಿ ವೃತ್ತಿಪರ ಕೋರ್ಸುಗಳ ಪ್ರವೇಶಾತಿಗಾಗಿ ಅರ್ಹತೆ ಗಳಿಸಿದ್ದಾರೆ.


ಗುಣಮಟ್ಟದ ಶಿಕ್ಷಣಕ್ಕೆ ಹೆಸರಾದ ಎಕ್ಸಲೆಂಟ್ ವಿದ್ಯಾಸಂಸ್ಥೆಯು ವಿದ್ಯಾರ್ಥಿಗಳನ್ನು ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಅತ್ಯುತ್ತಮ ರೀತಿಯಲ್ಲಿ ತರಬೇತುಗೊಳಿಸಿ ಪ್ರತಿವರ್ಷದಂತೆ ಈ ವರ್ಷವೂ ರಾಜ್ಯಮಟ್ಟದಲ್ಲಿ ಉತ್ತಮ ಫಲಿತಾಂಶವನ್ನು ದಾಖಲಿಸಿದೆ.
ಸಂಸ್ಥೆಯ ಅಧ್ಯಕ್ಷರಾದ ಯುವರಾಜ ಜೈನ್, ಕಾರ್ಯದರ್ಶಿ ರಶ್ಮಿತಾ ಜೈನ್, ಪ್ರಾಂಶುಪಾಲ ಪ್ರದೀಪ್ ಕುಮಾರ ಶೆಟ್ಟಿ, ಮತ್ತು ಉಪನ್ಯಾಸಕ ವೃ೦ದ ವಿದ್ಯಾರ್ಥಿಗಳನ್ನು ಅಭಿನಂದಿಸಿ ವಿದ್ಯಾರ್ಥಿಗಳ ಉಜ್ವಲ ಭವಿಷ್ಯಕ್ಕೆ ಶುಭ ಹಾರೈಸಿದ್ದಾರೆ.

Related posts

ರಾಷ್ಟ್ರೀಯ ರಸ್ತೆ ಸುರಕ್ಷತಾ ಮಾಸಾಚರಣೆಯ ಪ್ರಯುಕ್ತ ‘ಸೇಪ್ಟಿ ರೈಡ್’ ಜಾಗೃತಿ ಅಭಿಯಾನ

Suddi Udaya

ನಾರಾವಿ ಮಾಂಡೋವಿ ಮೋಟಾರ್ಸ್ ನಿಂದ ಗುರುವಾಯನಕೆರೆಯಲ್ಲಿ ಮಾರುತಿ ಸುಜುಕಿ ಕಾರುಗಳ ಬುಕ್ಕಿಂಗ್ ಆರಂಭ

Suddi Udaya

ಮೇಲಂತಬೆಟ್ಟು ಗ್ರಾ.ಪಂ. ನಲ್ಲಿ ಸಂವಿಧಾನ ಜಾಗೃತಿ ಜಾಥ

Suddi Udaya

ಸೆ. 7: ಮಡಂತ್ಯಾರುವಿನಲ್ಲಿ ವೈಭವದ ಮೊಸರು ಕುಡಿಕೆ ಉತ್ಸವ: ಸಾಧಕರಿಗೆ ಸನ್ಮಾನ,ಧಾರ್ಮಿಕ ಕಾರ್ಯಕ್ರಮ

Suddi Udaya

ಮಾವಿನಕಟ್ಟೆ: ಸ್ವಾತಿ ಎಂ. ಶೆಟ್ಟಿರವರಿಗೆ ಬೆಸ್ಟ್ಔಟ್ ಗೋಯಿಂಗ್ ಸ್ಟೂಡೆಂಟ್ ಅವಾರ್ಡ್ ಪ್ರಶಸ್ತಿ

Suddi Udaya

ಪೆರ್ಲ ಕ್ಲಸ್ಟರ್ ನ ಪ್ರತಿಭಾ ಕಾರಂಜಿ: ಅರಸಿನಮಕ್ಕಿ ಶ್ರೀ ಗೋಪಾಲಕೃಷ್ಣ ಅ.ಹಿ.ಪ್ರಾ. ಶಾಲೆಗೆ ಹಿರಿಯ ಮತ್ತು ಕಿರಿಯ ವಿಭಾಗದಲ್ಲಿ ಸಮಗ್ರ ಪ್ರಶಸ್ತಿ

Suddi Udaya
error: Content is protected !!