September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಸಿಇಟಿ ಫಲಿತಾಂಶ : ಎಕ್ಸಲೆಂಟ್ ಮೂಡುಬಿದಿರೆ ವಿದ್ಯಾರ್ಥಿಗಳಿಗೆ ಅತ್ಯುತ್ತಮ ರ‍್ಯಾಂಕ್

ಮೂಡುಬಿದಿರೆ : ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ವಿವಿಧ ವೃತ್ತಿಪರ ಕೋರ್ಸುಗಳ ಪ್ರವೇಶಾತಿಗಾಗಿ ನಡೆಸಿದ ಸಿಇಟಿ ಫಲಿತಾಂಶ ಪ್ರಕಟಗೊಂಡಿದ್ದು ಮೂಡುಬಿದಿರೆಯ ಎಕ್ಸಲೆಂಟ್ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಅಭೂತಪೂರ್ವ ಸಾಧನೆಯನ್ನು ಮಾಡಿದ್ದಾರೆ.


ಶಿಶಿರ್ ಹೆಚ್ ಶೆಟ್ಟಿ ಇ೦ಜಿನಿಯರಿ೦ಗ್ ವಿಭಾಗದಲ್ಲಿ 4 ನೇ ರ‍್ಯಾಂಕ್, ನೂತನ್ ಕೃಷ್ಣ ಬಿ ಬಿ ಎನ್ ವೈ ಎಸ್ ನಲ್ಲಿ ೪ ನೇ ರ‍್ಯಾಂಕ್, ಬಿ ಫಾರ್ಮ ಮತ್ತು ಫಾರ್ಮಾ ಡಿ ನಲ್ಲಿ ೫ ನೇ ರ‍್ಯಾಂಕ್, ಬಿ ಎಸ್ಸಿ ನರ್ಸಿ೦ಗ್ ಮತ್ತು ವೆಟರಿನರಿ ಸಾಯನ್ಸ್ ನಲ್ಲಿ ೬ ನೇ ರ‍್ಯಾಂಕ್ ನ್ನು ಗಳಿಸಿರುತ್ತಾನೆ.


ವಿವಿಧ ವಿಭಾಗಗಳಲ್ಲಿ ನಡೆದ ಸಿಇಟಿ ಪರೀಕ್ಷೆಯಲ್ಲಿ ಎಕ್ಸಲೆಂಟ್ ಸಂಸ್ಥೆಯ ವಿದ್ಯಾರ್ಥಿಗಳು ನೂರರ ಒಳಗೆ ೧೩ ರ‍್ಯಾಂಕ್, ಐದುನೂರರ ಒಳಗೆ ೩೮ ರ‍್ಯಾಂಕ್, ಸಾವಿರದ ಒಳಗೆ ೬೪ ರ‍್ಯಾಂಕ್ ಗಳನ್ನು ಪಡೆದು ರಾಜ್ಯದ ಪ್ರತಿಷ್ಠಿತ ಸಂಸ್ಥೆಗಳಲ್ಲಿ ವೃತ್ತಿಪರ ಕೋರ್ಸುಗಳ ಪ್ರವೇಶಾತಿಗಾಗಿ ಅರ್ಹತೆ ಗಳಿಸಿದ್ದಾರೆ.


ಗುಣಮಟ್ಟದ ಶಿಕ್ಷಣಕ್ಕೆ ಹೆಸರಾದ ಎಕ್ಸಲೆಂಟ್ ವಿದ್ಯಾಸಂಸ್ಥೆಯು ವಿದ್ಯಾರ್ಥಿಗಳನ್ನು ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಅತ್ಯುತ್ತಮ ರೀತಿಯಲ್ಲಿ ತರಬೇತುಗೊಳಿಸಿ ಪ್ರತಿವರ್ಷದಂತೆ ಈ ವರ್ಷವೂ ರಾಜ್ಯಮಟ್ಟದಲ್ಲಿ ಉತ್ತಮ ಫಲಿತಾಂಶವನ್ನು ದಾಖಲಿಸಿದೆ.
ಸಂಸ್ಥೆಯ ಅಧ್ಯಕ್ಷರಾದ ಯುವರಾಜ ಜೈನ್, ಕಾರ್ಯದರ್ಶಿ ರಶ್ಮಿತಾ ಜೈನ್, ಪ್ರಾಂಶುಪಾಲ ಪ್ರದೀಪ್ ಕುಮಾರ ಶೆಟ್ಟಿ, ಮತ್ತು ಉಪನ್ಯಾಸಕ ವೃ೦ದ ವಿದ್ಯಾರ್ಥಿಗಳನ್ನು ಅಭಿನಂದಿಸಿ ವಿದ್ಯಾರ್ಥಿಗಳ ಉಜ್ವಲ ಭವಿಷ್ಯಕ್ಕೆ ಶುಭ ಹಾರೈಸಿದ್ದಾರೆ.

Related posts

ಶಾಸಕ ಹರೀಶ್ ಪೂಂಜರವರಿಂದ ಪಡಂಗಡಿ ಸಹಕಾರಿ ಸಂಘದ ಕಾವಲುಗಾರ ಕೊಠಡಿಯ ಉದ್ಘಾಟನೆ

Suddi Udaya

ಧರ್ಮಸ್ಥಳ: ಉಪರಾಷ್ಟ್ರಪತಿ ಭೇಟಿ ಹಿನ್ನಲೆ; ನೋ ಫ್ಲೈ ಝೋನ್ /ನೋ ಡ್ರೋನ್ ಝೋನ್ ಆದೇಶ

Suddi Udaya

ಸವಣಾಲು ಅನುದಾನಿತ ಹಿರಿಯ ಪ್ರಾಥಮಿಕ ಶಾಲಾ ಸಂಸತ್ತು ಚುನಾವಣೆ

Suddi Udaya

ಕಳಿಯ ನ್ಯಾಯತರ್ಪು ಗ್ರಾಮದಲ್ಲಿ ಶ್ರೀ ಕ್ಷೇತ್ರ ಗೆಜ್ಜೆಗಿರಿ ಜಾತ್ರೋತ್ಸವ ಸಮಾಲೋಚನಾ ಸಭೆ

Suddi Udaya

ಉಜಿರೆ ಗ್ರಾ.ಪಂ.ಯಲ್ಲಿ ಸ್ವಚ್ಛ ಭಾರತ ಮಿಷನ್ ಯೋಜನೆಯ ಅನುಷ್ಠಾನದ ಅಧ್ಯಯನ ಪ್ರವಾಸ

Suddi Udaya

ಹಿರಿಯ ಯಕ್ಷಗಾನ ಕಲಾವಿದ, ಪಾತಾಳ ವೆಂಕಟರಮಣ ಭಟ್ ಹೃದಯಾಘಾತದಿಂದ ನಿಧನ

Suddi Udaya
error: Content is protected !!