24 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಸಿಇಟಿ ಯಲ್ಲಿ ಎಕ್ಸೆಲ್ ವಿದ್ಯಾರ್ಥಿಗಳ ಅಮೋಘ ಸಾಧನೆ, ಜೆಇಇ, ಎನ್ ಡಿ ಎ, ನಾಟಾ ಸೇರಿ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿಯೂ ಅತ್ಯುತ್ತಮ ಸಾಧನೆ

ಗುರುವಾಯನಕೆರೆ: ಇಂಜಿನಿಯರಿಂಗ್ , ನ್ಯಾಚುರೋಪತಿ, ಫಾರ್ಮಸಿ, ಪಶು ವೈದ್ಯಕೀಯ, ಕೃಷಿ ವಿಜ್ಞಾನ ಸೇರಿದಂತೆ ವಿವಿಧ ವೃತ್ತಿಪರ ಕೋರ್ಸ್ ಗಳ ಪ್ರವೇಶಾತಿಗಾಗಿ ನಡೆದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ – ಸಿಇಟಿ ಯಲ್ಲಿ ಗುರುವಾಯನಕೆರೆ ಎಕ್ಸೆಲ್ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಅಮೋಘ ಸಾಧನೆ ಮಾಡಿದ್ದಾರೆ.

ಪ್ರವಣ್ ಪೊನ್ನಪ್ಪ – 18, ಯಶವಂತ್ ಕೆಪಿ – 58, ನಿಶಾನ್ ಜೈನ್- 160,ಕೃಪಾ ಸಾಂಚಿ ಮೌರ್ಯ – 436, ಅನುಷ್ ಬಿ – 482,ಸಫ್ವಾನ್ -572 , ಅನುಜ್ ಕೆ ಎಸ್ – 596, ಪ್ರತೀಕ್ಷಾ ಎಸ್ – 616,ಶಾಂತವ್ವ ಬಸಪ್ಪ ಸಾಣಕ್ಕಿ -713,ಏರಲ್ ಸಾನಿಯಾ ಡಯಾಸ್ – 751,ಸಂದೀಪ್ ದುಲಾಜ್ -727, ಪ್ರಿಮಲ್ ವಿನಿಷಾ ಡಿಸೋಜ 763, ಆನಂದ ರೆಡ್ಡಿ -883, ಧನ್ಯ ಎಸ್ – 904 ಅತ್ಯುತ್ತಮ ರಾಂಕ್ ಗಳನ್ನು ರಾಜ್ಯ ಮಟ್ಟದಲ್ಲಿ ಪಡೆದುಕೊಂಡಿದ್ದಾರೆ.

1000 ದ ಒಳಗೆ 28 ವಿದ್ಯಾರ್ಥಿಗಳು, 2000 ದ ಒಳಗೆ 36 ವಿದ್ಯಾರ್ಥಿಗಳು 5000 ದ ಒಳಗೆ 312 ವಿದ್ಯಾರ್ಥಿಗಳು ರ್‍ಯಾಂಕ್ ಗಳಿಸಿಕೊಂಡಿದ್ದಾರೆ.

ಬೋರ್ಡ್ ಎಕ್ಸಾಂನಲ್ಲಿ ಅಭೂತ ಪೂರ್ವ ಫಲಿತಾಂಶವನ್ನು ದಾಖಲಿಸುತ್ತಾ ಬಂದ ಎಕ್ಸೆಲ್ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಈ ಬಾರಿಯೂ ಜೆ ಇ ಇ, ಎನ್ ಡಿ ಎ, ನಾಟಾ ಸೇರಿ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಅತ್ಯುತ್ತಮ ಸಾಧನೆ ಮಾಡಿದ್ದಾರೆ. ಕಳೆದ ಶೈಕ್ಷಣಿಕ ವರ್ಷದ, ರಾಷ್ಟ್ರೀಯ ವೈದ್ಯಕೀಯ ಪ್ರವೇಶ ಪರೀಕ್ಷೆ – ನೀಟ್ ನಲ್ಲಿ ನೂರಾರು ವಿದ್ಯಾರ್ಥಿಗಳನ್ನು ಸರ್ಕಾರಿ ಕೋಟಾದಡಿ ವೈದ್ಯಕೀಯ ಶಿಕ್ಷಣಕ್ಕೆ ಕಳುಹಿಸಿರುವ ಎಕ್ಸೆಲ್ ಪದವಿ ಪೂರ್ವ ಕಾಲೇಜು , ನಾಲ್ಕು ವಿದ್ಯಾರ್ಥಿಗಳನ್ನು ವೈದ್ಯಕೀಯ ಜಗತ್ತಿನ ಅತ್ಯುನ್ನತ ಸಂಸ್ಥೆಗಳಾದ ಏಮ್ಸ್ ಗೆ ಪ್ರವೇಶ ಕಲ್ಪಿಸಿ ಕೊಟ್ಟಿರುವುದನ್ನು ಸ್ಮರಿಸಿ ಕೊಳ್ಳಬಹುದು.

ಸಾಧಕರನ್ನು ಎಕ್ಸೆಲ್ ವಿದ್ಯಾ ಸಂಸ್ಥೆಗಳ ಆಡಳಿತ ಮಂಡಳಿಯ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಅವರು, ಪ್ರಾಂಶುಪಾಲರು, ಪ್ರಾಧ್ಯಾಪಕರು ಅಭಿನಂದಿಸಿದ್ದಾರೆ.

Related posts

ಮೈಸೂರು ರಾಜವಂಶಸ್ಥ ಯದುವೀರ್ ಒಡೆಯರ್ ರವರಿಂದ ದೇವೆಂದ್ರ ಹೆಗ್ಡೆ ಕೊಕ್ರಾಡಿಯವರಿಗೆ ಸನ್ಮಾನ

Suddi Udaya

ಉಜಿರೆ ಜನಾರ್ದನ ದೇವಸ್ಥಾನದ ನೂತನ ವಿಜಯಗೋಪುರ ಲೋಕಾರ್ಪಣೆ

Suddi Udaya

ಬೆಳ್ತಂಗಡಿಯಲ್ಲಿ ಲಯನ್ಸ್ ಯಕ್ಷೋತ್ಸವ: ಧರ್ಮಸ್ಥಳ ಮೇಳದ ಹಿರಿಯ ಕಲಾವಿದರು ಮತ್ತು ಸಿಬ್ಬಂದಿಗಳಿಗೆ ಗೌರವ

Suddi Udaya

“ನಮ್ಮ ಜವನೆರ್ ವಾಟ್ಸಪ್ ಗ್ರೂಪ್ ಅಳದಂಗಡಿ” ಹಾಗೂ “ಪಬ್ ಜಿ “ಗ್ರೂಪಿನ ಸದಸ್ಯರಿಂದ ಸಹಾಯಧನ ಹಸ್ತಾಂತರ

Suddi Udaya

ಅಂತರಾಷ್ಟ್ರೀಯ ಮಟ್ಟದ ಕರಾಟೆ ಪಂದ್ಯಾಟ: ಕಕ್ಕಿಂಜೆಯ ಶೇಖ್ ಅಝೀಮ್ ರಿಗೆ ಪ್ರಶಸ್ತಿ

Suddi Udaya

ಅಳದಂಗಡಿ: ಗುಡ್ ಫ್ಯೂಚೆರ್ ಆಂ.ಮಾ. ಶಾಲೆಯಲ್ಲಿ ಶಿಕ್ಷಕ ರಕ್ಷಕ ಸಭೆ

Suddi Udaya
error: Content is protected !!