22.6 C
ಪುತ್ತೂರು, ಬೆಳ್ತಂಗಡಿ
July 23, 2026
ಕೃಷಿಗ್ರಾಮಾಂತರ ಸುದ್ದಿಚಿತ್ರ ವರದಿ

ಅಳದಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ರೈತರಿಗೆ ಸಬ್ಸಿಡಿ ದರದಲ್ಲಿ ಮೈಲುತುತ್ತು ವಿತರಣೆ – ಸಬ್ಸಿಡಿ ಬೆಲೆ ಪ್ರತಿ ಕಿಲೋ ರೂ. 280 ಆಗಿದ್ದು,ರೈತರ ಇದರ ಪ್ರಯೋಜನ ಪಡೆಯಿರಿ: ಅಧ್ಯಕ್ಷ ರಾಕೇಶ್ ಹೆಗ್ಡೆ – ರೈತರಿಗೆ ರಸಗೊಬ್ಬರ ಹಾಗೂ ಕೀಟನಾಶಕಗಳ ಖರೀದಿಗೆ ರೂ.20 ಸಾವಿರದಂತೆ ಸಾಲ ಯೋಜನೆ

ಅಳದಂಗಡಿ: ಅಳದಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಿಂದ ರೈತರಿಗೆ ಸಬ್ಸಿಡಿ ದರದಲ್ಲಿ ಮೈಲುತುತ್ತು ವಿತರಣೆ ಮಾಡುತ್ತಿದ್ದು ಅಡಿಕೆ ಬೆಳೆಗಾರರು ಇದರ ಪ್ರಯೋಜನವನ್ನು ಪಡೆಯಬೇಕೆಂದು ಸಂಘದ ಅಧ್ಯಕ್ಷ ರಾಕೇಶ್ ಹೆಗ್ಡೆ ಬಳಂಜ ತಿಳಿಸಿರುತ್ತಾರೆ.

ಸಬ್ಸಿಡಿ ಬೆಲೆ ಪ್ರತಿ ಕಿಲೋ ರೂ. 280 ಆಗಿದ್ದು ಬೆಳೆಗಾರರಿಗೆ ಈ ಬೆಲೆಯಲ್ಲಿ ಮೈಲುತುತ್ತು ನೀಡುತ್ತಿದ್ದೇವೆ. ಕಳೆದ ಬಾರಿ ಕೊಳೆರೋಗದ ಬಾಧೆಯಿಂದ ಅಡಿಕೆ ಬೆಳಗಾರರು ತುಂಬಾ ಕಷ್ಟ ನಷ್ಟ ಗಳನ್ನು ಅನುಭವಿಸಿದ್ದು ಈ ಸಂದರ್ಭದಲ್ಲಿ ಸಂಘದಿಂದ ಕಡಿಮೆ ಬೆಲೆಯಲ್ಲಿ ಮೈಲುತುತ್ತು ನೀಡುವ ಯೋಜನೆ ಹಾಕಿಕೊಂಡಿದ್ದೇವೆ ಎಂದರು. ಜೊತೆಗೆ ರೈತರಿಗೆ ರಸಗೊಬ್ಬರ ಹಾಗೂ ಕೀಟನಾಶಕಗಳ ಖರೀದಿಗೆ ವಿಶೇಷವಾಗಿ ಪ್ರತಿ ಎಕ್ರೆಗೆ ರೂ. 20 ಸಾವಿರದಂತೆ ಓವರ್ ಡ್ರಾಫ್ಟ್, (ಓಡಿ) ಸಾಲ ನೀಡಿ ರೈತರಿಗೆ ಸದಾ ಸ್ಪಂದನೆ ನೀಡಲಾಗುವುದು. ಈ ಯೋಜನೆ ರೈತರಿಗೆ ತುಂಬಾ ಅನುಕೂಲವಾಗಲಿದೆ ಎಂದರು.

ಈಗಾಗಲೇ ಮೈಲು ತುತ್ತು ವಿತರಣೆಗೆ ಚಾಲನೆ ನೀಡಲಾಗಿದ್ದು ಶೇಖರ ಆಚಾರ್ಯ ಪಿಲ್ಯ ಹಾಗೂ ಧರ್ಣಪ್ಪ ಪೂಜಾರಿ ಬಡಗಕಾರಂದೂರು ಇವರಿಗೆ ಪ್ರಥಮವಾಗಿ ನೀಡಲಾಗಿದೆ.

ಈ ಸಂದರ್ಭದಲ್ಲಿ ಸಂಘದ ಉಪಾಧ್ಯಕ್ಷ ಜನಾರ್ಧನ ಪೂಜಾರಿ,ಸಿಇಓ ಮೀರಾ, ನಿರ್ದೇಶಕರಾದ ದಿನೇಶ್ ಪಿ‌ಕೆ,ದೇವಿಪ್ರಸಾದ್ ಶೆಟ್ಟಿ,ದೇಜಪ್ಪ ಪೂಜಾರಿ ಹಾಗೂ ಕೃಷಿಕರು ಉಪಸ್ಥಿತರಿದ್ದರು.

Related posts

ಶ್ರೀ ರಾಮ ಪ್ರಾಣ ಪ್ರತಿಷ್ಠಾಪನೆ ಪ್ರಯುಕ್ತ ಅನನ್ಯ ಫೀಡ್ಸ್ ಹುಬ್ಬಳ್ಳಿ ಹಾಗೂ ಫಾರ್ಮ್ ಫುಡ್ ಪಾಂಡವರಕಲ್ಲು ಇವರಿಂದ ಗುಂಡೂರಿ ಕಾವೇರಮ್ಮ ಅಮೃತಧಾರಾ ಗೋಶಾಲೆಗೆ ನವಧ್ಯಾನ ಹಿಂಡಿ, ನಿಸರ್ಗ ಮೇವು ಸಮರ್ಪಣೆ

Suddi Udaya

ಭಾರತೀಯ ಜನತಾ ಪಾರ್ಟಿ ಯುವಮೋರ್ಚಾ ಬೆಳ್ತಂಗಡಿ ಮಂಡಲವತಿಯಿಂದ ಬೃಹತ್ ಪ್ರತಿಭಟನೆ

Suddi Udaya

ಉಜಿರೆ ಮಾಚಾರು ಜಾತಿ ನಿಂದನೆ ಮಾಡಿ ಹಲ್ಲೆ ಆರೋಪ: ಯುವಕ ಆಸ್ಪತ್ರೆಗೆ ದಾಖಲು

Suddi Udaya

ಧರ್ಮಸ್ಥಳ : ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ಕಾಮಧೇನು ಸಂಘದ ಸದಸ್ಯರಿಂದ ಆಟಿಡೊಂಜಿ ದಿನ

Suddi Udaya

ಅಳದಂಗಡಿ ಶ್ರೀ ಗಾಯತ್ರಿ ವಿಶ್ವಕರ್ಮ ಸಂಘದಿಂದ ಕಿರಣ್ ಚಂದ್ರ ಪುಷ್ಪಗಿರಿ ರವರ ಭೇಟಿ

Suddi Udaya

ಜಿಲ್ಲಾ ಮಟ್ಟದ ವಾಲಿಬಾಲ್ ಪಂದ್ಯಾಟ : ಎಸ್.ಡಿ ಎಂ ಕಾಲೇಜಿನ ಬಾಲಕರ ತಂಡ ರಾಜ್ಯ ಮಟಕ್ಕೆ ಆಯ್ಕೆ

Suddi Udaya
error: Content is protected !!