22.5 C
ಪುತ್ತೂರು, ಬೆಳ್ತಂಗಡಿ
June 5, 2025
Uncategorized

ಗುರುವಾಯನಕೆರೆ ಶಿವಂ ಟೆಕ್ಸ್ ಟೈಲ್ಸ್ ಮಾಲೀಕ ಶರ್ವಣ್ ಹೃದಯಾಘಾತದಿಂದ ನಿಧನ

ಗುರುವಾಯನಕೆರೆ: ಶಿವಂ ಟೆಕ್ಸ್‌ಟೈಲ್ ಮಾಲೀಕ ಶರ್ವಣ್ (32ವ) ಮೇ.26ರಂದು ಹೃದಯಾಘಾತದಿಂದ ನಿಧನರಾಗಿದ್ದಾರೆ.

ಮೂಲತಃ ರಾಜಸ್ಥಾನದವರಾಗಿದ್ದ ಶರ್ವಣ್ ಅವರು ಗುರುವಾಯನಕೆರೆಯ ಹವ್ಯಕ ಭವನದ ಹತ್ತಿರ ಬಾಡಿಗೆಗಿದ್ದ ಮನೆಯಲ್ಲಿ ತಲೆ ತಿರುಗುತ್ತಿದೆ ಎಂದು ಹೇಳಿ ಮಲಗಿದವರು ಎದ್ದೇಳದೆ ಇದ್ದಾಗ ಗಾಬರಿಗೊಂಡ ಮನೆಯವರು ಶರ್ವಣರನ್ನು ತಕ್ಷಣ ಅಭಯ ಆಸ್ಪತ್ರೆಗೆ ದಾಖಲು ಮಾಡಿದರು.

ಪರಿಶೀಲಿಸಿದ ವೈದ್ಯರು ಶರ್ವಣ್ ಹೃದಯಾಘಾತದಿಂದ ಮೃತಪಟ್ಟಿರುವುದನ್ನು ದೃಢಪಡಿಸಿದ್ದು, ಇದೀಗ ಮೃತದೇಹವನ್ನು ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ. ಪೋಸ್ಟ್ ಮಾರ್ಟಂ ನಂತರ ಶರ್ವಣ್ ರ ಮೃತಶರೀರವನ್ನು ಅವರ ಊರಾದ ರಾಜಸ್ಥಾನಕ್ಕೆ ತೆಗೆದುಕೊಂಡು ಹೋಗಲಾಗುವುದು ಎಂದು ಮನೆ ಮಂದಿ ತಿಳಿಸಿದ್ದಾರೆ.

ಶರ್ವಣ್ ಅವರಿಗೆ ನವೆಂಬರ್‌ನಲ್ಲಿ ಮದುವೆ ಗೊತ್ತು ಮಾಡಲಾಗಿತ್ತು. ಮನೆಮಂದಿಯ ಆಕ್ರಂದನ ಮುಗಿಲು ಮುಟ್ಟಿದ್ದು ಅಪಾರ ಬಂಧು ಮಿತ್ರರನ್ನು ಅಗಲಿದ್ದಾರೆ.

Related posts

ವಾಣಿ ಪದವಿಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕದ ವಾರ್ಷಿಕ ವಿಶೇಷ ಶಿಬಿರ

Suddi Udaya

ಸವಣಾಲು ಉದ್ಯಮಿ ಅರುಣ್ ಕುಮಾರ್ ನಿಧನ

Suddi Udaya

ಡಿ.15: ಸಾವ್ಯ ದ.ಕ.ಜಿ.ಪಂ. ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆಯ ವಜ್ರ ಮಹೋತ್ಸವ ಸಂಭ್ರಮಾಚರಣೆ

Suddi Udaya

ಬೆಳ್ತಂಗಡಿಗೆ ಹೊಸ ನ್ಯಾಯಾಲಯ ಕಟ್ಟಡ ಮಂಜೂರುಗೊಳಿಸುವಂತೆ ಉಸ್ತುವಾರಿ ಸಚಿವರಿಗೆ ವಕೀಲರ ನಿಯೋಗದಿಂದ ಮನವಿ

Suddi Udaya

ಅಳದಂಗಡಿ ಸಂತೆ ಮಾರುಕಟ್ಟೆಯಲ್ಲಿಚೂರಿ ಇರಿತ: ಗಾಯಾಳು ಡೆನ್ನಿಸ್ ಪಿಂಟೋ ಆಸ್ಪತ್ರೆಗೆ ದಾಖಲು

Suddi Udaya

ಎ.13 ರಿಂದ ಶ್ರೀ ಕ್ಷೇತ್ರ ಎನೋ೯ಡಿ ನೇಮೋತ್ಸವ ಆರಂಭ: ಎ.19 : ಧರ್ಮ ದೈವ ಅಣ್ಣಪ್ಪ ಸ್ವಾಮಿ , ಗಡಿ ಮೊಗೇರ ದೈವ ಗಳಾದ ಶ್ರೀ ಮುದ್ದ ಕಳಲ,, ದೇವಿ ಸ್ವರೂಪಿಣಿ ಶ್ರೀ ತನ್ನಿ ಮಾನಿಗ, ಸ್ವಾಮಿ ಕೊರಗಜ್ಜ ಹಾಗೂ ಎರ್ನೋ ಡಿ ಗುಳಿಗ ದೈವದ ನೇಮೋ ತ್ಸವ

Suddi Udaya
error: Content is protected !!