September 6, 2026
Uncategorized

ಗುರುವಾಯನಕೆರೆ ಶಿವಂ ಟೆಕ್ಸ್ ಟೈಲ್ಸ್ ಮಾಲೀಕ ಶರ್ವಣ್ ಹೃದಯಾಘಾತದಿಂದ ನಿಧನ

ಗುರುವಾಯನಕೆರೆ: ಶಿವಂ ಟೆಕ್ಸ್‌ಟೈಲ್ ಮಾಲೀಕ ಶರ್ವಣ್ (32ವ) ಮೇ.26ರಂದು ಹೃದಯಾಘಾತದಿಂದ ನಿಧನರಾಗಿದ್ದಾರೆ.

ಮೂಲತಃ ರಾಜಸ್ಥಾನದವರಾಗಿದ್ದ ಶರ್ವಣ್ ಅವರು ಗುರುವಾಯನಕೆರೆಯ ಹವ್ಯಕ ಭವನದ ಹತ್ತಿರ ಬಾಡಿಗೆಗಿದ್ದ ಮನೆಯಲ್ಲಿ ತಲೆ ತಿರುಗುತ್ತಿದೆ ಎಂದು ಹೇಳಿ ಮಲಗಿದವರು ಎದ್ದೇಳದೆ ಇದ್ದಾಗ ಗಾಬರಿಗೊಂಡ ಮನೆಯವರು ಶರ್ವಣರನ್ನು ತಕ್ಷಣ ಅಭಯ ಆಸ್ಪತ್ರೆಗೆ ದಾಖಲು ಮಾಡಿದರು.

ಪರಿಶೀಲಿಸಿದ ವೈದ್ಯರು ಶರ್ವಣ್ ಹೃದಯಾಘಾತದಿಂದ ಮೃತಪಟ್ಟಿರುವುದನ್ನು ದೃಢಪಡಿಸಿದ್ದು, ಇದೀಗ ಮೃತದೇಹವನ್ನು ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ. ಪೋಸ್ಟ್ ಮಾರ್ಟಂ ನಂತರ ಶರ್ವಣ್ ರ ಮೃತಶರೀರವನ್ನು ಅವರ ಊರಾದ ರಾಜಸ್ಥಾನಕ್ಕೆ ತೆಗೆದುಕೊಂಡು ಹೋಗಲಾಗುವುದು ಎಂದು ಮನೆ ಮಂದಿ ತಿಳಿಸಿದ್ದಾರೆ.

ಶರ್ವಣ್ ಅವರಿಗೆ ನವೆಂಬರ್‌ನಲ್ಲಿ ಮದುವೆ ಗೊತ್ತು ಮಾಡಲಾಗಿತ್ತು. ಮನೆಮಂದಿಯ ಆಕ್ರಂದನ ಮುಗಿಲು ಮುಟ್ಟಿದ್ದು ಅಪಾರ ಬಂಧು ಮಿತ್ರರನ್ನು ಅಗಲಿದ್ದಾರೆ.

Related posts

ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ಬೆಳ್ತಂಗಡಿ ಹಳೆಕೋಟೆ ಬಳಿ ಟಯರ್ ಹೊತ್ತಿಸಿ ಆಕ್ರೋಶ

Suddi Udaya

ವಾಣಿ ಕಾಲೇಜಿನ ವಿಜ್ಞಾನ ವಿಭಾಗಕ್ಕೆ ಉತ್ತಮ ಫಲಿತಾಂಶ: ವಿದ್ಯಾರ್ಥಿನಿ ನವಮಿ ಗೆ 588 ಅಂಕ

Suddi Udaya

ಮೈರೋಳ್ತಡ್ಕ ಇದರ ಸಂಯುಕ್ತ ಆಶ್ರಯದಲ್ಲಿ 35ನೇ ವರ್ಷದ ಸಾರ್ವಜನಿಕ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಮೊಸರು ಕುಡಿಕೆ ಉತ್ಸವ

Suddi Udaya

ಗುರುವಾಯನಕೆರೆ:ಶ್ರೀ ಶಾರದಾಂಭ ಭಜನಾ ಮಂಡಳಿಯ ವತಿಯಿಂದವರಮಹಾಲಕ್ಷ್ಮೀ ಪೂಜೆ.

Suddi Udaya

ವೇಣೂರು: ಲಯನ್ಸ್ ಕ್ಲಬ್ ನ ಅಧ್ಯಕ್ಷರಾಗಿ ನಿರಂಜನ್ ಕೆ.ಎಸ್, ಕಾರ್ಯದರ್ಶಿಯಾಗಿ ದಯಾನಂದ ಭಂಡಾರಿ ಆಯ್ಕೆ

Suddi Udaya

ದ.ಕ ಜಿಲ್ಲಾ ಕೇಂದ್ರ ಬ್ಯಾಂಕಿನ ಮಹಾಸಭೆಯಲ್ಲಿ ಪೆರಾಡಿ ಸಹಕಾರಿ ಸಂಘಕ್ಕೆ ಉತ್ತಮ ಪ್ರೋತ್ಸಾಹಕ ಪ್ರಶಸ್ತಿ

Suddi Udaya
error: Content is protected !!