23.5 C
ಪುತ್ತೂರು, ಬೆಳ್ತಂಗಡಿ
June 8, 2026
Uncategorized

ಗುರುವಾಯನಕೆರೆ ಶಿವಂ ಟೆಕ್ಸ್ ಟೈಲ್ಸ್ ಮಾಲೀಕ ಶರ್ವಣ್ ಹೃದಯಾಘಾತದಿಂದ ನಿಧನ

ಗುರುವಾಯನಕೆರೆ: ಶಿವಂ ಟೆಕ್ಸ್‌ಟೈಲ್ ಮಾಲೀಕ ಶರ್ವಣ್ (32ವ) ಮೇ.26ರಂದು ಹೃದಯಾಘಾತದಿಂದ ನಿಧನರಾಗಿದ್ದಾರೆ.

ಮೂಲತಃ ರಾಜಸ್ಥಾನದವರಾಗಿದ್ದ ಶರ್ವಣ್ ಅವರು ಗುರುವಾಯನಕೆರೆಯ ಹವ್ಯಕ ಭವನದ ಹತ್ತಿರ ಬಾಡಿಗೆಗಿದ್ದ ಮನೆಯಲ್ಲಿ ತಲೆ ತಿರುಗುತ್ತಿದೆ ಎಂದು ಹೇಳಿ ಮಲಗಿದವರು ಎದ್ದೇಳದೆ ಇದ್ದಾಗ ಗಾಬರಿಗೊಂಡ ಮನೆಯವರು ಶರ್ವಣರನ್ನು ತಕ್ಷಣ ಅಭಯ ಆಸ್ಪತ್ರೆಗೆ ದಾಖಲು ಮಾಡಿದರು.

ಪರಿಶೀಲಿಸಿದ ವೈದ್ಯರು ಶರ್ವಣ್ ಹೃದಯಾಘಾತದಿಂದ ಮೃತಪಟ್ಟಿರುವುದನ್ನು ದೃಢಪಡಿಸಿದ್ದು, ಇದೀಗ ಮೃತದೇಹವನ್ನು ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ. ಪೋಸ್ಟ್ ಮಾರ್ಟಂ ನಂತರ ಶರ್ವಣ್ ರ ಮೃತಶರೀರವನ್ನು ಅವರ ಊರಾದ ರಾಜಸ್ಥಾನಕ್ಕೆ ತೆಗೆದುಕೊಂಡು ಹೋಗಲಾಗುವುದು ಎಂದು ಮನೆ ಮಂದಿ ತಿಳಿಸಿದ್ದಾರೆ.

ಶರ್ವಣ್ ಅವರಿಗೆ ನವೆಂಬರ್‌ನಲ್ಲಿ ಮದುವೆ ಗೊತ್ತು ಮಾಡಲಾಗಿತ್ತು. ಮನೆಮಂದಿಯ ಆಕ್ರಂದನ ಮುಗಿಲು ಮುಟ್ಟಿದ್ದು ಅಪಾರ ಬಂಧು ಮಿತ್ರರನ್ನು ಅಗಲಿದ್ದಾರೆ.

Related posts

ಕರ್ನಾಟಕ ಪಬ್ಲಿಕ್ ಸ್ಕೂಲ್ ಪುಂಜಾಲಕಟ್ಟೆ ಯಲ್ಲಿ ನ.4 ರಿಂದ 9 ಕೆಪಿಎಸ್ ಶೈಕ್ಷಣಿಕ ಹಬ್ಬ-2024 : 5,500ಕ್ಕೂ ಹೆಚ್ಚು ವಿದ್ಯಾರ್ಥಿಗಳು ಭಾಗಿ : ಶಾಸಕ ಹರೀಶ್

Suddi Udaya

ನವೀಕೃತ ಯೂನಿಯನ್ ಬ್ಯಾಂಕ್ ಉಜಿರೆ ಶಾಖೆಯ ಉದ್ಘಾಟನೆ

Suddi Udaya

ನಾವೂರು: ಮೋರ್ತಾಜೆ ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘದ ಉದ್ಘಾಟನೆ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಬಾಯಿ ಕ್ಯಾನ್ಸರ್‌ಗೆ ಯಶಸ್ವಿ ಶಸ್ತ್ರಚಿಕಿತ್ಸೆ

Suddi Udaya

ನಿಟ್ಟಡೆ: ಗೋಳಿಯಂಗಡಿಯಲ್ಲಿ ಬೈಕ್ ಗೆ ಡಿಕ್ಕಿಯೊಡೆದ ಆಟೋ ರಿಕ್ಷಾ

Suddi Udaya

ಪುದುವೆಟ್ಟು ಗ್ರಾ.ಪಂ.ನ ಗ್ರಾಮ ಸಭೆ

Suddi Udaya
error: Content is protected !!