22.6 C
ಪುತ್ತೂರು, ಬೆಳ್ತಂಗಡಿ
July 23, 2026
Uncategorized

ಗುರುವಾಯನಕೆರೆ ಶಿವಂ ಟೆಕ್ಸ್ ಟೈಲ್ಸ್ ಮಾಲೀಕ ಶರ್ವಣ್ ಹೃದಯಾಘಾತದಿಂದ ನಿಧನ

ಗುರುವಾಯನಕೆರೆ: ಶಿವಂ ಟೆಕ್ಸ್‌ಟೈಲ್ ಮಾಲೀಕ ಶರ್ವಣ್ (32ವ) ಮೇ.26ರಂದು ಹೃದಯಾಘಾತದಿಂದ ನಿಧನರಾಗಿದ್ದಾರೆ.

ಮೂಲತಃ ರಾಜಸ್ಥಾನದವರಾಗಿದ್ದ ಶರ್ವಣ್ ಅವರು ಗುರುವಾಯನಕೆರೆಯ ಹವ್ಯಕ ಭವನದ ಹತ್ತಿರ ಬಾಡಿಗೆಗಿದ್ದ ಮನೆಯಲ್ಲಿ ತಲೆ ತಿರುಗುತ್ತಿದೆ ಎಂದು ಹೇಳಿ ಮಲಗಿದವರು ಎದ್ದೇಳದೆ ಇದ್ದಾಗ ಗಾಬರಿಗೊಂಡ ಮನೆಯವರು ಶರ್ವಣರನ್ನು ತಕ್ಷಣ ಅಭಯ ಆಸ್ಪತ್ರೆಗೆ ದಾಖಲು ಮಾಡಿದರು.

ಪರಿಶೀಲಿಸಿದ ವೈದ್ಯರು ಶರ್ವಣ್ ಹೃದಯಾಘಾತದಿಂದ ಮೃತಪಟ್ಟಿರುವುದನ್ನು ದೃಢಪಡಿಸಿದ್ದು, ಇದೀಗ ಮೃತದೇಹವನ್ನು ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ. ಪೋಸ್ಟ್ ಮಾರ್ಟಂ ನಂತರ ಶರ್ವಣ್ ರ ಮೃತಶರೀರವನ್ನು ಅವರ ಊರಾದ ರಾಜಸ್ಥಾನಕ್ಕೆ ತೆಗೆದುಕೊಂಡು ಹೋಗಲಾಗುವುದು ಎಂದು ಮನೆ ಮಂದಿ ತಿಳಿಸಿದ್ದಾರೆ.

ಶರ್ವಣ್ ಅವರಿಗೆ ನವೆಂಬರ್‌ನಲ್ಲಿ ಮದುವೆ ಗೊತ್ತು ಮಾಡಲಾಗಿತ್ತು. ಮನೆಮಂದಿಯ ಆಕ್ರಂದನ ಮುಗಿಲು ಮುಟ್ಟಿದ್ದು ಅಪಾರ ಬಂಧು ಮಿತ್ರರನ್ನು ಅಗಲಿದ್ದಾರೆ.

Related posts

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದುರ್ಗಾ ದೇವಿ ದೇವಸ್ಥಾನಕ್ಕೆ ಧಾರ್ಮಿಕ ಪರಿಷತ್ ಸದಸ್ಯ ಯೋಗೀಶ್ ಕುಮಾರ್ ನಡಕ್ಕರ ಭೇಟಿ

Suddi Udaya

ವಿಧಾನ ಪರಿಷತ್‌ನ ಉಪಚುನಾವಣೆ: ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್ ಪುತ್ತೂರು ಭಾರಿ ಮತಗಳ ಅಂತರದಿಂದ ಗೆಲುವು

Suddi Udaya

ಯಕ್ಷಭಾರತಿ ದಶಮಾನೋತ್ಸವದ ಅಂಗವಾಗಿ ನಡೆಯುವ ಸನ್ಮಾನ ಕಾರ್ಯಕ್ರಮ ಮತ್ತು ದೇವಿ ಮಹಾತ್ಮೆ ಯಕ್ಷಗಾನದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಇಸ್ರೇಲ್ ನಲ್ಲಿ ವಾಸವಾಗಿರುವ ದ.ಕ ಜಿಲ್ಲೆಯ ಪ್ರಜೆಗಳ ಮಾಹಿತಿ ನೀಡುವಂತೆ ಜಿಲ್ಲಾಧಿಕಾರಿ ಸೂಚನೆ

Suddi Udaya

ಹತ್ಯಡ್ಕ ನಿವಾಸಿ ಯಮುನಾ ನಿಧನ

Suddi Udaya

ಭಾರಿ ಮಳೆ: ಆ.29ರಂದು ದ.ಕ.ಜಿಲ್ಲಾ ಶಾಲಾ ಕಾಲೇಜುಗಳಿಗೆ ರಜೆ

Suddi Udaya
error: Content is protected !!