July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳಾಲು: ಶ್ರೀ ಅನಂತೇಶ್ವರ ಭಜನಾ ಮಂಡಳಿಯ ವಾರ್ಷಿಕ ಮಹಾಸಭೆ ಹಾಗೂ ಮಂಡಳಿಯ ನೂತನ ಪದಾಧಿಕಾರಿಗಳ ಆಯ್ಕೆ

ಬೆಳಾಲು: ಶ್ರೀ ಅನಂತೇಶ್ವರ ಭಜನಾ ಮಂಡಳಿಯ ವಾರ್ಷಿಕ ಮಹಾಸಭೆ ಹಾಗೂ ಲೆಕ್ಕಪತ್ರ ಮಂಡನೆ ಮತ್ತು ಮಂಡಳಿಯ ನೂತನ ಪದಾಧಿಕಾರಿಗಳ ಆಯ್ಕೆಯು ನಡೆಯಿತು.

ಭಜನಾ ಮಂಡಳಿಯ 2025-26 ನೇ ಸಾಲಿನ ಅಧ್ಯಕ್ಷರಾಗಿ ಹರೀಶ್ ಪೂಜಾರಿ ಪೋಸೊಟ್ಟು, ಕಾರ್ಯದರ್ಶಿಯಾಗಿ ತೇಜಸ್ ಗೌಡ ಶಾಂತಿನಗರ ಹಾಗೂ ಕೋಶಾಧಿಕಾರಿಯಾಗಿ ಹರೀಶ್ ಗೌಡ ಮುಂಡೆತ್ಯಾರು, ಉಪಾಧ್ಯಕ್ಷರಾಗಿ ಹರೀಶ್ ನಾಯ್ಕ ಕುದ್ದಂಟೆ, ಜತೆ ಕಾರ್ಯದರ್ಶಿಯಾಗಿ ಗಣೇಶ್ ಗೌಡ ಅನಂತೋಡಿ ಮತ್ತು ಕಾರ್ಯಕಾರಣಿ ಸಮಿತಿಯ ಸದಸ್ಯರಾಗಿ ಹರಿಪ್ರಸಾದ್ ಗೌಡ ಅರಣೆಮಾರು, ಸುಮಿತ್ ಆಚಾರ್ಯ ಅನಂತೋಡಿ, ವಿಘ್ನೇಶ್ ಗೌಡ ಅನಂತೋಡಿ , ಶಶಿಧರ ಪೂಜಾರಿ ಓಡಿಪ್ರೊಟ್ಟು, ಪ್ರವೀಣ್ ಗೌಡ ಆನಂತೋಡಿ ಹಾಗೂ ಸದಸ್ಯರನ್ನು ನೇಮಕ ಮಾಡಲಾಯಿತು.

ಸಭಾ ಕಾರ್ಯಕ್ರಮದಲ್ಲಿ ಶ್ರೀ ಅನಂತೇಶ್ವರ ಮಕ್ಕಳ ಕುಣಿತಾ ಭಜನಾ ತಂಡಕ್ಕೆ ತರಬೇತಿ ನೀಡುತ್ತಿರುವ ಗುರುಗಳಾದ ಶ್ರೀಮತಿ ಸೌಮ್ಯ ರಾವ್ ಇವರಿಗೆ ಗೌರವಿಸಲಾಯಿತು.ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಅಧ್ಯಕ ನವೀನ್ ಗೌಡ ಕಂಬಳದಡ್ಡ ವಹಿಸಿದ್ದರು. ಭಜನಾ ಮಂಡಳಿಯ ಕಾರ್ಯದರ್ಶಿ ವಿಘ್ನೇಶ್ ಗೌಡ ಅನಂತೋಡಿ ವಾರ್ಷಿಕ ಲೆಕ್ಕಾಚಾರ ಮಂಡನೆಯನ್ನು ಮಾಡಿದರು.

ವೇದಿಕೆಯಲ್ಲಿ ಶ್ರೀ ಅನಂತಪದ್ಮನಾಭ ದೇವಸ್ಥಾನ ಅನಂತೋಡಿ ಇದರ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷ ಶ್ರೀನಿವಾಸ ಗೌಡ ಶ್ರೀ ಸೌಧ ಬೆಳಾಲು, ವ್ಯವಸ್ಥಾಪನ ಸಮಿತಿಯ ಪ್ರಧಾನ ಕಾರ್ಯದರ್ಶಿ ದುರ್ಗಾಪ್ರಸಾದ್ ಕೇರ್ಮುನ್ನಾಯ, ಉಪಾಧ್ಯಕ್ಷರಾದ ಶ್ರೀಮತಿ ಮಮತಾ ದಿನೇಶ್ ಪೂಜಾರಿ ಉಪ್ಪಾರು, ಮಹಿಳಾ ಸಮಿತಿಯ ಅಧ್ಯಕ್ಷ ಶ್ರೀಮತಿ ಹೇಮಲತಾ ಶ್ರೀನಿವಾಸ ಗೌಡ ಗಣಪನಗುತ್ತು, ಮಹಿಳಾ ಸಮಿತಿಯ ಗೌರವಾಧ್ಯಕ್ಷೆ ಶ್ರೀಮತಿ ವಿದ್ಯಾ ಶ್ರೀನಿವಾಸ ಗೌಡ ಬೆಳಾಲು ಮತ್ತು ವ್ಯವಸ್ಥಾಪನ ಸಮಿತಿಯ ಜತೆ ಕಾರ್ಯದರ್ಶಿ ಸತೀಶ್ ಗೌಡ ಎಳ್ಳುಗದ್ದೆ ಹಾಗೂ ಭಜನಾ ಮಂಡಳಿಯ ಸದಸ್ಯರು ಉಪಸ್ಥಿತರಿದ್ದರು.

ದೇವಸ್ಥಾನದ ಕಛೇರಿ ಮೇಲ್ವಿಚಾರಕರಾದ ಶಿವಪ್ರಸಾದ್ ಗೊಲ್ಲ ಕಾರ್ಯಕ್ರಮ ನಿರೂಪಿಸಿದರು. ಭಜನಾ ಮಂಡಳಿಯ ಸದಸ್ಯರಾದ ಹರೀಶ್ ನಾಯ್ಕ ಕುದ್ದಂಟೆ ಸ್ವಾಗತಿಸಿ, ಭಜನಾ ಮಂಡಳಿಯ ಗೌರವ ಸಲಹೆಗಾರರಾದ ಜಾರಪ್ಪ ಗೌಡ ಅರಣೆಮಾರು ವಂದಿಸಿದರು.

Related posts

ಬೆಳಾಲು ಶ್ರೀರಾಮ ಶಾಖೆ ವತಿಯಿಂದ ಕೊಲ್ಪಾಡಿ ಸುಬ್ರಮಣ್ಯೇಶ್ವರ ಮಕ್ಕಳ ಭಜನಾ ತಂಡಕ್ಕೆ ಧನಸಹಾಯ

Suddi Udaya

ಮಿತ್ತಬಾಗಿಲು: ಕೊಲ್ಲಿ ಸೇತುವೆ ಬಳಿ ನಿಂತಿದ್ದ ಸ್ಕೂಟಿಗೆ ಬೈಕ್ ಡಿಕ್ಕಿ

Suddi Udaya

ಕೊಯ್ಯೂರು: ಶ್ರೀ ಪಂಚದುರ್ಗಾಪರಮೇಶ್ವರಿ ಭಜನಾ ಮಂಡಳಿಗಳಿಗೆ ತಾಲೂಕು ಭಜನಾ ಪರಿಷತ್ ಕಾರ್ಯದರ್ಶಿ ಪಿ ಚಂದ್ರಶೇಖರ್ ಸಾಲ್ಯಾನ್ ಭೇಟಿ

Suddi Udaya

ಧರ್ಮಸ್ಥಳದಲ್ಲಿ ಶಿವರಾತ್ರಿಯ ರಥೋತ್ಸವ

Suddi Udaya

ರಾಷ್ಟ್ರೀಯ ಕರಾಟೆ ಚಾಂಪಿಯನ್ ಶಿಪ್: ಉಜಿರೆ ಎಸ್ ಡಿ ಎಮ್ ಶಾಲಾ ವಿದ್ಯಾರ್ಥಿ ಕ್ಷಿತಿಜ್ ಶೆಟ್ಟಿ ಕುಮಿಟೆ ಹಾಗು ಕಟಾ ವಿಭಾಗದಲ್ಲಿ ಬೆಳ್ಳಿ ಪದಕ

Suddi Udaya

ಬೆಳ್ತಂಗಡಿ ಶಾಸಕ ಹರೀಶ್ ಪೂಂಜರ ಹುಟ್ಟುಹಬ್ಬದ ಸಲುವಾಗಿ ಬೆಳ್ತಂಗಡಿ ಮಂಡಲ ಬಿಜೆಪಿ ಯುವಮೋರ್ಚಾ ತಂಡದ ಸಹಕಾರದಲ್ಲಿ ಸುಲ್ಕೇರಿ ಶ್ರೀರಾಮ ಶಾಲೆಗೆ ಧನಸಹಾಯ ಹಸ್ತಾoತರ

Suddi Udaya
error: Content is protected !!