25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಯುವವಾಹಿನಿ ಅಂತರ್ ಘಟಕ ಸಾಂಸ್ಕೃತಿಕ ಸ್ಪರ್ಧೆ ಬೆಳ್ತಂಗಡಿ ಘಟಕ ತೃತೀಯ ಸ್ಥಾನ

ಬೆಳ್ತಂಗಡಿ: ಯುವ ವಾಹಿನಿ ಕೇಂದ್ರ ಸಮಿತಿ ಆಶ್ರಯದಲ್ಲಿ ಪುತ್ತೂರು ಘಟಕದ ಆತಿಥ್ಯದಲ್ಲಿ ಪುತ್ತೂರಿನಲ್ಲಿ ನಡೆದ ಡೆನ್ನಾನ ಡೆನ್ನಾನ 2025 ಅಂತರ ಘಟಕ ಸಾಂಸ್ಕೃತಿಕ ಸ್ಪರ್ಧೆಯಲ್ಲಿ ಬೆಳ್ತಂಗಡಿ ಘಟಕ ಭಾಗವಹಿಸಿದ್ದು ಅತ್ಯುತ್ತಮ ಪ್ರದರ್ಶನದೊಂದಿಗೆ ನೋಡುಗರ ಹಾಗೂ ತೀರ್ಪುಗಾರರ ಮನ ಗೆದ್ದು ತೃತೀಯ ಸ್ಥಾನವನ್ನು ಪಡೆದಿರುತ್ತದೆ ಹಾಗೂ ಅತ್ಯುತ್ತಮ ಸಂದೇಶವನ್ನು ಸಾರುವ ಕಥೆ ಈ ಪ್ರಶಸ್ತಿಯನ್ನು ಕೂಡ ಬೆಳ್ತಂಗಡಿ ಘಟಕ ಪಡೆದಿರುತ್ತದೆ.


ಘಟಕದ ಅಧ್ಯಕ್ಷ ಗುರುರಾಜ್ ಗುರಿಪಳ್ಳ ನೇತೃತ್ವದಲ್ಲಿ ಭಾಗವಹಿಸಿದ ಈ ತಂಡವು ನಿರ್ದೇಶಕರಾದ ಸ್ಮಿತೇಶ್ ಎಸ್ ಬಾರ್ಯ ಹಾಗೂ ಅನೀಶ್ ಅಮೀನ್ ವೇಣೂರು ಇವರ ಅತ್ಯುತ್ತಮ ಕಥೆ ಹಾಗೂ ನಿರ್ದೇಶನದೊಂದಿಗೆ ಪ್ರಸ್ತುತಿಗೊಂಡಿತು. ತಂಡದಲ್ಲಿ ಒಟ್ಟು 40 ಜನ ಸ್ಪರ್ಧಾರ್ಥಿಗಳು ಭಾಗವಹಿಸಿದ್ದರು.

ಘಟಕದ ಮಾಜಿ ಅಧ್ಯಕ್ಷರಾದ ಪ್ರಶಾಂತ್ ಮಚ್ಚಿನ, ರಾಕೇಶ್ ಮೂಡಿಕೋಡಿ, ಎಂ ಕೆ ಪ್ರಸಾದ್, ಅಶ್ವತ್ ಕುಮಾರ್, ಸದಾಶಿವ ಪೂಜಾರಿ ಊರ ಹಾಗೂ ಗೌರವ ಸಲಹೆಗಾರರಾದ ರಮಾನಂದ ಸಾಲಿಯಾನ್ ಮುಂಡೂರು, ಕಾರ್ಯದರ್ಶಿ ಮಧುರ ರಾಘವ, ಕೋಶಾಧಿಕಾರಿ ನಾಗೇಶ್ ಆದೇಲು, ಮಹಿಳಾ ಸಂಚಾಲನ ಸಮಿತಿ ಸಂಚಾಲಕರಾದ ಲೀಲಾವತಿ ಪಣಕಜೆ ಹಾಗು ಘಟಕದ ಪದಾಧಿಕಾರಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

Related posts

ರಾಜ್ಯಾದ್ಯಂತ ನಂದಿನಿ ಹಾಲಿನ ಬೆಲೆ ಏರಿಕೆ: ಲೀಟರ್ ಗೆ 2 ರೂ ಹೆಚ್ಚಳ

Suddi Udaya

ಜೆಸಿಐ ಬೆಳ್ತಂಗಡಿ ವತಿಯಿಂದ ಜಾಯಿನ್ ಜೆಸಿಐ ಅಭಿಯಾನದಲ್ಲಿ ಜೇಸಿಯೇತರ ಸದಸ್ಯರಿಗಾಗಿ ಒರಿಯಂಟೇಷನ್ ತರಬೇತಿ ಕಾರ್ಯಾಗಾರ

Suddi Udaya

ಕಕ್ಕಿಂಜೆ: ರಮ್ಯ ಡ್ರೆಸ್ಸಸ್ ನಲ್ಲಿ ಶೇ. 10-30 ಡಿಸ್ಕೌಂಟ್ ಸೇಲ್

Suddi Udaya

ನಿಡ್ಲೆ ಗ್ರಾ.ಪಂ. ನಲ್ಲಿ ರೋಜ್ ಗಾರ್ ದಿನಾಚರಣೆ

Suddi Udaya

ವೇಣೂರು: ತುಂಬೆದಲ್ಕೆ ನಿವಾಸಿ ಕೃಷಿಕ ಸೇಸಪ್ಪ ಪೂಜಾರಿ ನಿಧನ

Suddi Udaya

ಕುಕ್ಕೇಡಿ : ಗುಲಾಬಿ ಶೆಟ್ಟಿ ನಿಧನ

Suddi Udaya
error: Content is protected !!