23.2 C
ಪುತ್ತೂರು, ಬೆಳ್ತಂಗಡಿ
May 31, 2025
ಅಪರಾಧ ಸುದ್ದಿಕರಾವಳಿಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪೊಲೀಸ್ಪ್ರಮುಖ ಸುದ್ದಿಬೆಳ್ತಂಗಡಿವರದಿ

ದಕ್ಷಿಣ ಕನ್ನಡ: ಬೆಳ್ತಂಗಡಿ ಸೇರಿದಂತೆ 5 ತಾಲೂಕುಗಳಲ್ಲಿ ಮೂರು ದಿನ ನಿಷೇಧಾಜ್ಞೆ ಜಾರಿ

ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕಾ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲೆಯ ಐದು ತಾಲೂಕು ವ್ಯಾಪ್ತಿಯಲ್ಲಿ ಮೂರು ದಿನ ನಿಷೇಧಾಜ್ಞೆ ಜಾರಿ ಮಾಡಲಾಗಿದೆ.

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ, ಬೆಳ್ತಂಗಡಿ, ಕಡಬ, ಪುತ್ತೂರು ಮತ್ತು ಸುಳ್ಯ ತಾಲೂಕುಗಳಲ್ಲಿ ಮೇ 27ರ ಸಂಜೆ 6 ಗಂಟೆಯಿಂದ ಮೇ 30ರ ಸಂಜೆ 6ರವರೆಗೆ ನಿಷೇಧಾಜ್ಞೆ ಜಾರಿ ಮಾಡಿ ಜಿಲ್ಲಾಧಿಕಾರಿಯವರು ಆದೇಶ ಹೊರಡಿಸಿದ್ದಾರೆ.

ಬಂಟ್ವಾಳ ತಾಲೂಕಿನ ಕುರಿಯಾಳ ಸಮೀಪದ ಇರಾಕೋಡಿ ಎಂಬಲ್ಲಿ ಇಬ್ಬರು ಮುಸ್ಲಿಂ ಯುವಕರ ಮೇಲೆ ಮಂಗಳವಾರ (ಮೇ 27) ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ದಾಳಿ ನಡೆಸಿದ್ದರು. ಪರಿಣಾಮ ಕೊಳತ್ತಮಜಲು ನಿವಾಸಿ ರಹೀಮ್ ಸ್ಥಳದಲ್ಲೇ ಮೃತಪಟ್ಟಿದ್ದು, ಇನ್ನೋರ್ವ ಗಾಯಾಳು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ.

Related posts

ಅಳದಂಗಡಿ ಅರಮನೆಯ ಡಾ.ಪದ್ಮಪ್ರಸಾದ್ ಅಜಿಲರಿಂದ ಹನುಮೋತ್ಸವ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಉಜಿರೆ : ಹಳೆಪೇಟೆ ಬಳಿ ಸಂಚರಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ: ಬೈಕ್ ಸವಾರ ಪ್ರಾಣಾಪಾಯದಿಂದ ಪಾರು

Suddi Udaya

ಮಚ್ಚಿನ ಉಚಿತ ನೇತ್ರಾ ತಪಾಸಣಾ ಶಿಬಿರ

Suddi Udaya

ಕಳಿಯ : ಕೃಷಿಕ ಅಣ್ಣು ಗೌಡ ನಿಧನ

Suddi Udaya

ಕೊಯ್ಯೂರು: ಸರಕಾರಿ ಪ್ರೌಢಶಾಲೆಯಲ್ಲಿ 75ನೇ ಗಣರಾಜ್ಯೋತ್ಸವ ಆಚರಣೆ

Suddi Udaya

ಫೆಬ್ರವರಿ ತಿಂಗಳಲ್ಲಿ ತಾ.ಪಂ – ಜಿ.ಪಂ ಚುನಾವಣೆ: ಮೀಸಲಾತಿ ಪ್ರಕಟಣೆಯ ನಿರೀಕ್ಷೆ: ಆಯೋಗದ ಸಿದ್ಧತೆ

Suddi Udaya
error: Content is protected !!