June 4, 2025
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪಿಲ್ಯ: ಕೋಳಿ ಅಂಕಕ್ಕೆ ವೇಣೂರು ಪೊಲೀಸರ ದಾಳಿ : ಆರೋಪಿಗಳ ಸಹಿತ ನಗದು ಹಾಗೂ ಇತರ ಸೊತ್ತುಗಳ ವಶ

ಅಳದಂಗಡಿ: ಇಲ್ಲಿಯ ಪಿಲ್ಯ ಅಲೆಕ್ಕಿ ಎಂಬಲ್ಲಿ ಅಕ್ರಮವಾಗಿ ಹಣವನ್ನು ಪಣವಾಗಿಟ್ಟುಕೊಂಡು ಕೋಳಿ ಅಂಕ ನಡೆಯುತ್ತಿದ್ದಾಗ ವೇಣೂರು ಪೊಲೀಸ್ ಠಾಣೆಯ ಉಪನಿರೀಕ್ಷಕ ಆನಂದ ಎಂ ಹಾಗೂ ಸಿಬ್ಬಂದಿಗಳು ದಾಳಿ ನಡೆಸಿ ಕೋಳಿ ಅಂಕದಲ್ಲಿ ನಿರತರಾಗಿದ್ದ ಪ್ರವೀಣ್ ಬಳಂಜ , ರಮೇಶ್ ಅಲೆಕ್ಕಿ, ಜೋಯೆಲ್ ಕರಂಬಾರು, ರಾಜೇಶ್ ಪೂಜಾರಿ ಸುಲ್ಕೇರಿ ಮೊಗ್ರು, ಅವಿನಾಶ್ ಕುದ್ಯಾಡಿ, ತೇಜಸ್ ಗರ್ಡಾಡಿ, ಸುಂದರ ಮಾಳ, ಮೇಘರಾಜ್ ಗರ್ಡಾಡಿ, ಉಮೇಶ್ ಬಡಗಕಾರಂದೂರು ಎಂಬುವವರನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಘಟನೆ ವಿವರ: ಮೇ 24 ರಂದು ವೇಣೂರು ಪೊಲೀಸ್ ಠಾಣೆ ಪೊಲೀಸ್ ಉಪನಿರೀಕ್ಷಕರಾದ ಆನಂದ ಎಂ. ರವರು ಹೊಸಂಗಡಿ ಗ್ರಾಮ ಪಂಚಾಯತ್ ಮರುಚುನಾವಣಾ ಬಂದೋಬಸ್ತು ಕರ್ತವ್ಯದಲ್ಲಿರುವ ಸಮಯ ಬೆಳ್ತಂಗಡಿ ತಾಲೂಕು ಪಿಲ್ಯ ಗ್ರಾಮದ ಅಲೆಕ್ಕಿ ಎಂಬಲ್ಲಿ ಅಕ್ರಮವಾಗಿ ಹಣವನ್ನು ಪಣವಾಗಿಟ್ಟುಕೊಂಡು ಕೋಳಿ ಅಂಕ ಜುಗಾರಿ ಆಟ ಆಡುತ್ತಿರುವ ಬಗ್ಗೆ ಬಂದ ಮಾಹಿತಿ ಮೇರೆಗೆ ಸಿಬ್ಬಂದಿಗಳೊಂದಿಗೆ ಕೂಡಿಕೊಂಡು ಸುಮಾರು 20-25 ಜನ ಗುಂಪು ಸೇರಿ ಅಕ್ರಮವಾಗಿ ಕೋಳಿ ಅಂಕ ಜುಗಾರಿ ಆಟ ಆಡುತ್ತಿದ್ದ ವೇಳೆ ದಾಳಿ ನಡೆಸಿದ್ದು, ಆರೋಪಿತರು ಪರಾರಿಯಾಗಿದ್ದು, ಆ ಪೈಕಿ 9 ಜನರನ್ನು ವಶಕ್ಕೆ ಪಡೆದು ಅವರಿಂದ ತಕ್ಷೀರಿಗೆ ಉಪಯೋಗಿಸಿದ ಒಟ್ಟು ನಗದು ರೂ. 14,900/- ಹಾಗೂ ಅಂದಾಜು ಮೌಲ್ಯ 2,600/- ರೂ. ಬೆಲೆಬಾಳುವ. 5 ವಿವಿಧ ಬಣ್ಣದ ವಿವಿಧ ಗಾತ್ರದ ಹುಂಜಾ ಕೋಳಿ ಹಾಗೂ ಎರಡು ಬಾಲುಕತ್ತಿಯನ್ನು ಸ್ವಾಧೀನ ಪಡಿಸಿ ಠಾಣಾ ಎನ್.ಸಿ. ನಂಬ್ರ 78/25 ರಂತೆ ನೊಂದಾಯಿಸಿಕೊಂಡಿದ್ದು, ಬೆಳ್ತಂಗಡಿ ಎ.ಸಿ.ಜೆಮತ್ತು ಜೆ.ಎಂ.ಎಫ್.ಸಿ ನ್ಯಾಯಾಲಯಕ್ಕೆ ಕೋರಿಕೆ ಪತ್ರ ಸಲ್ಲಿಸಿ ನ್ಯಾಯಾಲಯದ ಅನುಮತಿ ಪಡೆದು ಆರೋಪಿತರ ವಿರುದ್ದ ಪ್ರಕರಣ ದಾಖಲಿಸಿರುವುದಾಗಿದೆ.

Related posts

ಕುವೆಟ್ಟು ಗ್ರಾ.ಪಂ. ವತಿಯಿಂದ ಚರಂಡಿ ದುರಸ್ತಿ

Suddi Udaya

ಬಜಿರೆ ಶಾಲೆ: ಕೇಂದ್ರದ ಪಿಎಂಶ್ರೀ ಯೋಜನೆಯ ಅನುಷ್ಠಾನಕ್ಕೆ ಚಾಲನೆ, ಎಲ್‌ಕೆಜಿ ತರಗತಿ ಉದ್ಘಾಟನೆ

Suddi Udaya

ಬಳಂಜದಲ್ಲಿ ಜೆಸಿಐ ಬೆಳ್ತಂಗಡಿ ಮಂಜುಶ್ರೀಯಿಂದ ವ್ಯಕ್ತಿತ್ವ ವಿಕಸನ ತರಬೇತಿ ಕಾರ್ಯಕ್ರಮ

Suddi Udaya

ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವದ ಪ್ರಯುಕ್ತ ಅಡಿಕೆ ಸಮರ್ಪಣೆ

Suddi Udaya

ಉಜಿರೆಯಿಂದ ಸೋಮಂತಡ್ಕ ಪ್ರಯಾಣ ಸಂದರ್ಭ ಕಳೆದು ಹೋದ ರೂ.2. 80 ಲಕ್ಷ ಹಣವಿದ್ದ ಬ್ಯಾಗ್: ಕೊರಗಜ್ಜನ ಮೊರೆ ಹೋದ ಬ್ಯಾಗ್ ಕಳೆದು ಕೊಂಡ‌ ಲತೇಶ್ ಉಜಿರೆ

Suddi Udaya

ಕರಿಮಣೇಲು ಸಂತ ಜೂಡರ ಶಾಲೆಯಲ್ಲಿ ಶ್ರೀ ಧವಳ ಕಾಲೇಜಿನ ಎನ್ಎಸ್ಎಸ್ ಶಿಬಿರದ ಸಮಾರೋಪ ಸಮಾರಂಭ

Suddi Udaya
error: Content is protected !!