25.5 C
ಪುತ್ತೂರು, ಬೆಳ್ತಂಗಡಿ
June 8, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪಿಲ್ಯ: ಕೋಳಿ ಅಂಕಕ್ಕೆ ವೇಣೂರು ಪೊಲೀಸರ ದಾಳಿ : ಆರೋಪಿಗಳ ಸಹಿತ ನಗದು ಹಾಗೂ ಇತರ ಸೊತ್ತುಗಳ ವಶ

ಅಳದಂಗಡಿ: ಇಲ್ಲಿಯ ಪಿಲ್ಯ ಅಲೆಕ್ಕಿ ಎಂಬಲ್ಲಿ ಅಕ್ರಮವಾಗಿ ಹಣವನ್ನು ಪಣವಾಗಿಟ್ಟುಕೊಂಡು ಕೋಳಿ ಅಂಕ ನಡೆಯುತ್ತಿದ್ದಾಗ ವೇಣೂರು ಪೊಲೀಸ್ ಠಾಣೆಯ ಉಪನಿರೀಕ್ಷಕ ಆನಂದ ಎಂ ಹಾಗೂ ಸಿಬ್ಬಂದಿಗಳು ದಾಳಿ ನಡೆಸಿ ಕೋಳಿ ಅಂಕದಲ್ಲಿ ನಿರತರಾಗಿದ್ದ ಪ್ರವೀಣ್ ಬಳಂಜ , ರಮೇಶ್ ಅಲೆಕ್ಕಿ, ಜೋಯೆಲ್ ಕರಂಬಾರು, ರಾಜೇಶ್ ಪೂಜಾರಿ ಸುಲ್ಕೇರಿ ಮೊಗ್ರು, ಅವಿನಾಶ್ ಕುದ್ಯಾಡಿ, ತೇಜಸ್ ಗರ್ಡಾಡಿ, ಸುಂದರ ಮಾಳ, ಮೇಘರಾಜ್ ಗರ್ಡಾಡಿ, ಉಮೇಶ್ ಬಡಗಕಾರಂದೂರು ಎಂಬುವವರನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಘಟನೆ ವಿವರ: ಮೇ 24 ರಂದು ವೇಣೂರು ಪೊಲೀಸ್ ಠಾಣೆ ಪೊಲೀಸ್ ಉಪನಿರೀಕ್ಷಕರಾದ ಆನಂದ ಎಂ. ರವರು ಹೊಸಂಗಡಿ ಗ್ರಾಮ ಪಂಚಾಯತ್ ಮರುಚುನಾವಣಾ ಬಂದೋಬಸ್ತು ಕರ್ತವ್ಯದಲ್ಲಿರುವ ಸಮಯ ಬೆಳ್ತಂಗಡಿ ತಾಲೂಕು ಪಿಲ್ಯ ಗ್ರಾಮದ ಅಲೆಕ್ಕಿ ಎಂಬಲ್ಲಿ ಅಕ್ರಮವಾಗಿ ಹಣವನ್ನು ಪಣವಾಗಿಟ್ಟುಕೊಂಡು ಕೋಳಿ ಅಂಕ ಜುಗಾರಿ ಆಟ ಆಡುತ್ತಿರುವ ಬಗ್ಗೆ ಬಂದ ಮಾಹಿತಿ ಮೇರೆಗೆ ಸಿಬ್ಬಂದಿಗಳೊಂದಿಗೆ ಕೂಡಿಕೊಂಡು ಸುಮಾರು 20-25 ಜನ ಗುಂಪು ಸೇರಿ ಅಕ್ರಮವಾಗಿ ಕೋಳಿ ಅಂಕ ಜುಗಾರಿ ಆಟ ಆಡುತ್ತಿದ್ದ ವೇಳೆ ದಾಳಿ ನಡೆಸಿದ್ದು, ಆರೋಪಿತರು ಪರಾರಿಯಾಗಿದ್ದು, ಆ ಪೈಕಿ 9 ಜನರನ್ನು ವಶಕ್ಕೆ ಪಡೆದು ಅವರಿಂದ ತಕ್ಷೀರಿಗೆ ಉಪಯೋಗಿಸಿದ ಒಟ್ಟು ನಗದು ರೂ. 14,900/- ಹಾಗೂ ಅಂದಾಜು ಮೌಲ್ಯ 2,600/- ರೂ. ಬೆಲೆಬಾಳುವ. 5 ವಿವಿಧ ಬಣ್ಣದ ವಿವಿಧ ಗಾತ್ರದ ಹುಂಜಾ ಕೋಳಿ ಹಾಗೂ ಎರಡು ಬಾಲುಕತ್ತಿಯನ್ನು ಸ್ವಾಧೀನ ಪಡಿಸಿ ಠಾಣಾ ಎನ್.ಸಿ. ನಂಬ್ರ 78/25 ರಂತೆ ನೊಂದಾಯಿಸಿಕೊಂಡಿದ್ದು, ಬೆಳ್ತಂಗಡಿ ಎ.ಸಿ.ಜೆಮತ್ತು ಜೆ.ಎಂ.ಎಫ್.ಸಿ ನ್ಯಾಯಾಲಯಕ್ಕೆ ಕೋರಿಕೆ ಪತ್ರ ಸಲ್ಲಿಸಿ ನ್ಯಾಯಾಲಯದ ಅನುಮತಿ ಪಡೆದು ಆರೋಪಿತರ ವಿರುದ್ದ ಪ್ರಕರಣ ದಾಖಲಿಸಿರುವುದಾಗಿದೆ.

Related posts

ಅಪಾಯದಂಚಿನಲ್ಲಿರುವ ಗುರಿಪಳ್ಳ ತಾರಗಂಡಿ ಸೇತುವೆ: ಸ್ಥಳಕ್ಕೆ ಬೇಟಿ ನೀಡಿದ ರಕ್ಷಿತ್ ಶಿವರಾಂ ಅತೀ ಶೀಘ್ರದಲ್ಲೇ ಹೊಸ ಸೇತುವೆ ನಿರ್ಮಾಣದ ಭರವಸೆ

Suddi Udaya

ಬೆಳ್ತಂಗಡಿ: ಹೋಲಿ ರಿಡೀಮರ್ ಆಂ.ಮಾ. ಶಾಲೆಯಲ್ಲಿ ಮಹಾತ್ಮ ಗಾಂಧಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿಯವರ ಜನ್ಮದಿನ ಆಚರಣೆ

Suddi Udaya

ಇಂದಬೆಟ್ಟು ಗ್ರಾಮ ಪಂಚಾಯತ್ ನಲ್ಲಿ ಜನಸ್ಪಂದನ ಸಭೆ: ಅಕ್ರಮ ಮರಳುಗಾರಿಕೆ ವಿರುದ್ಧ ಗ್ರಾಮಸ್ಥರ ಆಕ್ರೋಶ

Suddi Udaya

ಉಜಿರೆ : ಅಕ್ರಮ ಮದ್ಯ ಮಾರಾಟ: ವಾಹನ ಸಹಿತ ರೂ. 1.53 ಲಕ್ಷದ ಮದ್ಯ ವಶ

Suddi Udaya

ರೋಟರಿ ಕ್ಲಬ್ ಸುಬ್ರಮಣ್ಯ ಮತ್ತು ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ಸುಬ್ರಮಣ್ಯ ವತಿಯಿಂದ ಐದು ಹಿರಿಯ ನಿವೃತ್ತ ಶಿಕ್ಷಕರಿಗೆ ಸನ್ಮಾನ

Suddi Udaya

ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲದ ಮಹಿಳಾಮೋರ್ಚಾದ ವತಿಯಿಂದ ವಿಶ್ವ ಮಹಿಳಾ ದಿನಾಚರಣೆ

Suddi Udaya
error: Content is protected !!