23.8 C
ಪುತ್ತೂರು, ಬೆಳ್ತಂಗಡಿ
June 7, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ: ಸಂತೆಕಟ್ಟೆ ಮೆಸ್ಕಾಂ ರಸ್ತೆಯಲ್ಲಿ ರಾತ್ರಿ ತಿರುಗಾಡುತ್ತಿದ್ದ ಮಾನಸಿಕ ಅಸ್ವಸ್ಥತೆ; ಬೆಳ್ತಂಗಡಿ ಪ.ಪಂ ಅಧ್ಯಕ್ಷ ಜಯಾನಂದ ಗೌಡ ನೇತೃತ್ವದಲ್ಲಿ ಬಾಲಕಿ ಸಿಯೋನ್ ಆಶ್ರಮಕ್ಕೆ ದಾಖಲು

ಬೆಳ್ತಂಗಡಿ: ಕೊಕ್ಕಡದಲ್ಲಿ ತಿರುಗಾಡುತ್ತಿದ್ದ ಮಾನಸಿಕ ಅಸ್ವಸ್ಥತೆಯನ್ನು 108 ಆಂಬುಲೆನ್ಸ್ ಮುಖಾಂತರ ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ದಾಖಲು ಮಾಡಿ ಹೋದ ನಂತರ ಆಸ್ಪತ್ರೆಯಿಂದ ತಪ್ಪಿಸಿಕೊಂಡ ಹುಡುಗಿ ಬೆಳ್ತಂಗಡಿ ಸಂತೆಕಟ್ಟೆ ಮೆಸ್ಕಾಂ ರಸ್ತೆಯಲ್ಲಿ ತಿರುಗಾಡುತ್ತಿರುವ ವಿಷಯವನ್ನು ತಿಳಿದ ಪಟ್ಟಣ ಪಂಚಾಯತ್ ಅಧ್ಯಕ್ಷ ಕೂಡಲೇ ಇನ್ಸ್ಪೆಕ್ಟರ್ ಸುಬ್ಬಾಪುರ ಮಠ್ ಮತ್ತು ಸಬ್ ಇನ್ಸ್ಪೆಕ್ಟರ್ ಮುರಳಿಯವರಿಗೆ ಹಾಗೂ ಪಟ್ಟಣ ಪಂಚಾಯತ್ ಮುಖ್ಯ ಅಧಿಕಾರಿಯವರಿಗೆ ಮಾಹಿತಿಯನ್ನು ನೀಡಿದರು. ನಂತರ ನೆರಿಯ ಸಿಯೋನ್ ಆಶ್ರಮದ ಪೌಲೋಸ್ ರನ್ನು ಸಂಪರ್ಕಿಸಿ ಸಬ್ ಇನ್ಸ್ಪೆಕ್ಟರ್ ಪತ್ರದ ಮುಖಾಂತರ ಆಂಬುಲೆನ್ಸ್ ನಲ್ಲಿ ಸಿಯೋನ್ ಆಶ್ರಮಕ್ಕೆ, ಬಾಲಕಿಯನ್ನು ದಾಖಲಿಸಲಾಯಿತು.,


ಈ ಸಂದರ್ಭದಲ್ಲಿ ಪಟ್ಟಣ ಪಂಚಾಯತ್ ಅಧ್ಯಕ್ಷ ಜಯಾನಂದ ಗೌಡ ಪ್ರಜ್ವಲ್, ಪಟ್ಟಣ ಪಂಚಾಯತ್ ನ ಸ್ಯಾನಿಟರಿ ಸೂಪರ್ವೈಸರ್ ಕರುಣಾಕರ, ಪಟ್ಟಣ ಪಂಚಾಯತ್ ನ ಮಾಜಿ ನಾಮನಿರ್ದೇಶನ ಸದಸ್ಯ ಪ್ರಕಾಶ್ ಆಚಾರ್ಯ, ಆಟೋ ಚಾಲಕ ಅಭಿಲಾಶ್, ಆಂಬುಲೆನ್ಸ್ ಚಾಲಕ ಪವನ್ ಕುಮಾರ್, ಸಬ್ ಇನ್ಸ್ಪೆಕ್ಟರ್ ಮುರಳಿಯವರು ಸಹಕರಿಸಿದರು.

Related posts

ಬೆಳ್ತಂಗಡಿ: ಕ್ಯಾನ್ಸರ್ ಪೀಡಿತರಿಗೆ ಕೇಶದಾನ ಮಾಡಿ ಮಾನವೀಯತೆ ಮೆರೆದ ಸುಧೀರ್ ಜೈನ್ ಬಳಂಜ

Suddi Udaya

ಮೇ 28: ಕೊಕ್ಕಡದಲ್ಲಿ ಜೇಸಿ ವಲಯ 15 ರ ವಲಯಾಡಳಿತ ಸಭೆ

Suddi Udaya

ಬೆಳ್ತಂಗಡಿ ಒಕ್ಕಲಿಗ ಗೌಡರ ಸಂಘ ಹಾಗೂ ಕಾಲಭೈರವೇಶ್ವರ ಒಕ್ಕಲಿಗ ಗೌಡರ ಕ್ರೆಡಿಟ್ ಸೌಹಾರ್ದ ಸಹಕಾರಿ ಸಂಘದಿಂದ ತುoಗಪ್ಪ ಗೌಡರಿಗೆ ನುಡಿನಮನ ಕಾರ್ಯಕ್ರಮ

Suddi Udaya

ಭೂ ಪರಿವರ್ತಿತ ಜಮೀನುಗಳಲ್ಲಿನ ವಿನ್ಯಾಸ ಅನುಮೋದನೆಯನ್ನು ತಾ.ಪಂ. ಮತ್ತು ಗ್ರಾ.ಪಂ. ಯಲ್ಲಿಯೇ ಅನುಕೂಲ ಕಲ್ಪಿಸಲು ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್ ರವರಿಗೆ ದ.ಕ. ಮತ್ತು ಉಡುಪಿ ಜಿಲ್ಲೆಗಳ ಬಿಜೆಪಿ ಶಾಸಕರುಗಳ ನಿಯೋಗದಿಂದ ಮನವಿ

Suddi Udaya

ಇನ್ವರ್ಟರ್ ಕೇಳಲು ಬಂದವರಿಂದ ಮನೆಯಂಗಳಕ್ಕೆ ಅಕ್ರಮ ಪ್ರವೇಶ ಕಬ್ಬಿಣದ ರಾಡ್‌ನಿಂದ ಹಲ್ಲೆ

Suddi Udaya

ನಾರಾವಿ: ವಿದ್ಯುತ್ ತಂತಿ ಸ್ಪರ್ಶಿಸಿ ವ್ಯಕ್ತಿ ಸಾವು

Suddi Udaya
error: Content is protected !!