ಉಜಿರೆ: ಎಸ್.ಡಿ.ಎಂ (ಸಿ.ಬಿ.ಎಸ್.ಇ) ಶಾಲೆಯ ಶಿಕ್ಷಕರಿಗೆ “ಶಿಕ್ಷಣದಲ್ಲಿ ತಂತ್ರಜ್ಞಾನ” ಕಾರ್ಯಾಗಾರ ಆಯೋಜಿಸಲಾಗಿತ್ತು.
ಸಂಪನ್ಮೂಲ ವ್ಯಕ್ತಿಯಾಗಿ ಉಜಿರೆ ಎಸ್.ಡಿ.ಎಮ್ ಪದವಿ ಕಾಲೇಜಿನ ಉಪನ್ಯಾಸಕ ಸತೀಶ್ ಪಿ.ಡಿ ವಿಷಯದ ಕುರಿತಾಗಿ ಪ್ರಾಯೋಗಿಕವಾಗಿ ಮಾಹಿತಿ ಹಂಚಿಕೊಂಡರು.
ಕಾರ್ಯಾಗಾರದಲ್ಲಿ ಎಸ್.ಡಿ.ಎಮ್ ಶಿಕ್ಷಣ ಸಂಸ್ಥೆ ವಿದ್ಯಾರ್ಥಿ ಕ್ಷೇಮಪಾಲನ ಅಧಿಕಾರಿ ಧನ್ಯಕುಮಾರ್ ಉಪಸ್ಥಿತರಿದ್ದರು.
ಶಿಕ್ಷಕಿ ನೀತು ಪ್ರಸಾದ್ ನಿರೂಪಿಸಿದ ಕಾರ್ಯಾಗಾರದಲ್ಲಿ ಶಿಕ್ಷಕಿ ಮಧುರ ವಂದಿಸಿದರು.