July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕುಣಿತ ಭಜನಾ ತರಬೇತಿ ಶಿಬಿರಕ್ಕೆ ಭಜನಾ ಪರಿಷತ್ ರಾಜ್ಯಾಧ್ಯಕ್ಷರ ಭೇಟಿ

ಕರಾಯ ಶ್ರೀ ಕೃಷ್ಣ ಭಜನಾ ಮಂದಿರದಲ್ಲಿ ಶ್ರೀ ಮಂಜುನಾಥೇಶ್ವರ ಭಜನಾ ಪರಿಷತ್ ತಣ್ಣೀರುಪಂಥ ವಲಯ ಮತ್ತು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ತಣ್ಣೀರುಪಂಥ ಇದರ ನೇತೃತ್ವದಲ್ಲಿ ನಡೆಯುತ್ತಿರುವ ಕುಣಿತ ಭಜನಾ ತರಬೇತಿ ಶಿಬಿರಕ್ಕೆ ಶ್ರೀ ಮಂಜುನಾಥೇಶ್ವರ ಭಜನಾ ಪರಿಷತ್ತಿನ ರಾಜ್ಯಾಧ್ಯಕ್ಷ ಪಿ ಚಂದ್ರಶೇಖರ ಸಾಲ್ಯಾನ್ ಕೊಯ್ಯೂರು ಹಾಗೂ ತಾಲೂಕು ಕುಣಿತ ಭಜನಾ ತರಭೇತಿ ಸಂಘದ ಅಧ್ಯಕ್ಷರು ಹಾಗೂ ರಾಜ್ಯ ಮಟ್ಟದ ಕುಣಿತ ಭಜನಾ ತರಬೇತುದಾರರಾದ ಸಂದೇಶ್ ಮದ್ದಡ್ಕ ಇವರುಗಳು ಭೇಟಿ ನೀಡಿ ತರಬೇತಿಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು .


ಈ ಸಂದರ್ಭದಲ್ಲಿ ಶ್ರೀ ಕೃಷ್ಣ ಭಜನಾ ಮಂದಿರ ಕರಾಯ ಹಾಗೂ ಶ್ರೀ ಮಂಜುನಾಥೇಶ್ವರ ಭಜನಾ ಪರಿಷತ್ತು ತಣ್ಣೀರುಪಂತ ಇದರ ಅಧ್ಯಕ್ಷ ಜಗದೀಶ್ ಶೆಟ್ಟಿ ಮೈರ, ಭಜನಾ ಮಂದಿರದ ಹಿರಿಯ ಸದಸ್ಯರು ಹಾಗೂ ತಾಲೂಕಿನ ಭಜಕ ಸಾಧಕ ಪ್ರಶಸ್ತಿ ವಿಜೇತರು ಹಿರಿಯ ಭಜಕ ಗುರುಗಳಾದ ಗೋಪಾಲಕೃಷ್ಣ ಪೈ ಕರಾಯ, ಮಹಾಬಲ ಶೆಟ್ಟಿ ಮೈರ , ಶ್ರೀ ಕೃಷ್ಣ ಭಜನಾ ಮಂದಿರದ ಕಾರ್ಯದರ್ಶಿ ರಾಜಶೇಖರ ಪೇರೋಡಿ, ಸೇವಾಪ್ರತಿನಿಧಿ ಶ್ರೀಮತಿ ಸುಜಾತ ಕರಾಯ , ರಾಮಚಂದ್ರ ಗೌಡ ಉಪಸ್ಥಿತರಿದ್ದರು.

Related posts

ನೀರಚಿಲುಮೆಯಲ್ಲಿ ಚರಂಡಿಗೆ ಉರುಳಿದ ಕಾರು: ನ್ಯಾಯವಾದಿ ಬಿ.ಎಂ ಭಟ್ ಅಪಾಯದಿಂದ ಪಾರು

Suddi Udaya

ಕೊಕ್ಕಡದಲ್ಲಿ ಎನ್ ಎಸ್ ಎಸ್ ಶಿಬಿರ ಸಮಾರೋಪ

Suddi Udaya

ಪ್ರಯೋಜನಕ್ಕೆ ಬಾರದ ಜಿಯೋ ಟವರ್ ಗಳು: ಎರಡು ವರ್ಷಗಳಿಂದ ಭೂ ಮಾಲೀಕರಿಗೆ ಬಾಡಿಗೆ ನೀಡದ ಸಂಸ್ಥೆ: ನೆಟ್ವರ್ಕ್ ಸಮಸ್ಯೆಯಿಂದ ಪರದಾಡುತ್ತಿರುವ ವ್ಯಾಪಾರಸ್ಥರು

Suddi Udaya

ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ : ಸಾಧಕರಿಗೆ ಸನ್ಮಾನ

Suddi Udaya

ಹಾಸನ ಜಿಲ್ಲಾ ರಾಷ್ಟ್ರೀಯ ಹೆದ್ದಾರಿ ವಿಭಾಗದ ಕಾರ್ಯಪಾಲಕ ಅಭಿಯಂತರರಾಗಿ ಶಿವಪ್ರಸಾದ್ ಅಜಿಲರಿಗೆ ಹೆಚ್ಚುವರಿ ಜವಾಬ್ದಾರಿ: ಇಂದು ಅಧಿಕಾರ ಸ್ವೀಕಾರ

Suddi Udaya

ಓಮ್ನಿ ಕಾರು – ಸ್ವಿಫ್ಟ್ ಡಿಸೈರ್ ಮುಖಾಮುಖಿ ಡಿಕ್ಕಿ

Suddi Udaya
error: Content is protected !!