25.5 C
ಪುತ್ತೂರು, ಬೆಳ್ತಂಗಡಿ
April 24, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪಿಲ್ಯ: ಕೋಳಿ ಅಂಕಕ್ಕೆ ವೇಣೂರು ಪೊಲೀಸರ ದಾಳಿ : ಆರೋಪಿಗಳ ಸಹಿತ ನಗದು ಹಾಗೂ ಇತರ ಸೊತ್ತುಗಳ ವಶ

ಅಳದಂಗಡಿ: ಇಲ್ಲಿಯ ಪಿಲ್ಯ ಅಲೆಕ್ಕಿ ಎಂಬಲ್ಲಿ ಅಕ್ರಮವಾಗಿ ಹಣವನ್ನು ಪಣವಾಗಿಟ್ಟುಕೊಂಡು ಕೋಳಿ ಅಂಕ ನಡೆಯುತ್ತಿದ್ದಾಗ ವೇಣೂರು ಪೊಲೀಸ್ ಠಾಣೆಯ ಉಪನಿರೀಕ್ಷಕ ಆನಂದ ಎಂ ಹಾಗೂ ಸಿಬ್ಬಂದಿಗಳು ದಾಳಿ ನಡೆಸಿ ಕೋಳಿ ಅಂಕದಲ್ಲಿ ನಿರತರಾಗಿದ್ದ ಪ್ರವೀಣ್ ಬಳಂಜ , ರಮೇಶ್ ಅಲೆಕ್ಕಿ, ಜೋಯೆಲ್ ಕರಂಬಾರು, ರಾಜೇಶ್ ಪೂಜಾರಿ ಸುಲ್ಕೇರಿ ಮೊಗ್ರು, ಅವಿನಾಶ್ ಕುದ್ಯಾಡಿ, ತೇಜಸ್ ಗರ್ಡಾಡಿ, ಸುಂದರ ಮಾಳ, ಮೇಘರಾಜ್ ಗರ್ಡಾಡಿ, ಉಮೇಶ್ ಬಡಗಕಾರಂದೂರು ಎಂಬುವವರನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಘಟನೆ ವಿವರ: ಮೇ 24 ರಂದು ವೇಣೂರು ಪೊಲೀಸ್ ಠಾಣೆ ಪೊಲೀಸ್ ಉಪನಿರೀಕ್ಷಕರಾದ ಆನಂದ ಎಂ. ರವರು ಹೊಸಂಗಡಿ ಗ್ರಾಮ ಪಂಚಾಯತ್ ಮರುಚುನಾವಣಾ ಬಂದೋಬಸ್ತು ಕರ್ತವ್ಯದಲ್ಲಿರುವ ಸಮಯ ಬೆಳ್ತಂಗಡಿ ತಾಲೂಕು ಪಿಲ್ಯ ಗ್ರಾಮದ ಅಲೆಕ್ಕಿ ಎಂಬಲ್ಲಿ ಅಕ್ರಮವಾಗಿ ಹಣವನ್ನು ಪಣವಾಗಿಟ್ಟುಕೊಂಡು ಕೋಳಿ ಅಂಕ ಜುಗಾರಿ ಆಟ ಆಡುತ್ತಿರುವ ಬಗ್ಗೆ ಬಂದ ಮಾಹಿತಿ ಮೇರೆಗೆ ಸಿಬ್ಬಂದಿಗಳೊಂದಿಗೆ ಕೂಡಿಕೊಂಡು ಸುಮಾರು 20-25 ಜನ ಗುಂಪು ಸೇರಿ ಅಕ್ರಮವಾಗಿ ಕೋಳಿ ಅಂಕ ಜುಗಾರಿ ಆಟ ಆಡುತ್ತಿದ್ದ ವೇಳೆ ದಾಳಿ ನಡೆಸಿದ್ದು, ಆರೋಪಿತರು ಪರಾರಿಯಾಗಿದ್ದು, ಆ ಪೈಕಿ 9 ಜನರನ್ನು ವಶಕ್ಕೆ ಪಡೆದು ಅವರಿಂದ ತಕ್ಷೀರಿಗೆ ಉಪಯೋಗಿಸಿದ ಒಟ್ಟು ನಗದು ರೂ. 14,900/- ಹಾಗೂ ಅಂದಾಜು ಮೌಲ್ಯ 2,600/- ರೂ. ಬೆಲೆಬಾಳುವ. 5 ವಿವಿಧ ಬಣ್ಣದ ವಿವಿಧ ಗಾತ್ರದ ಹುಂಜಾ ಕೋಳಿ ಹಾಗೂ ಎರಡು ಬಾಲುಕತ್ತಿಯನ್ನು ಸ್ವಾಧೀನ ಪಡಿಸಿ ಠಾಣಾ ಎನ್.ಸಿ. ನಂಬ್ರ 78/25 ರಂತೆ ನೊಂದಾಯಿಸಿಕೊಂಡಿದ್ದು, ಬೆಳ್ತಂಗಡಿ ಎ.ಸಿ.ಜೆಮತ್ತು ಜೆ.ಎಂ.ಎಫ್.ಸಿ ನ್ಯಾಯಾಲಯಕ್ಕೆ ಕೋರಿಕೆ ಪತ್ರ ಸಲ್ಲಿಸಿ ನ್ಯಾಯಾಲಯದ ಅನುಮತಿ ಪಡೆದು ಆರೋಪಿತರ ವಿರುದ್ದ ಪ್ರಕರಣ ದಾಖಲಿಸಿರುವುದಾಗಿದೆ.

Related posts

ಯೂಟ್ಯೂಬರ್ಸ್ ಹಾಗೂ ಖಾಸಗಿ ಚಾನೆಲ್ ವರದಿಗಾರನ ಮೇಲೆ ಹಲ್ಲೆ ಆರೋಪ: ಸ್ಥಳದಲ್ಲಿ ಜನ ಜಮಾಯಿಸಿ ಉದ್ವಿಗ್ನ ಸ್ಥಿತಿ- ಪೊಲೀಸರಿಂದ ಲಾಠಿ ಚಾರ್ಜ್. ಸ್ಥಳದಲ್ಲಿ ಪರಿಸ್ಥಿತಿ ಪ್ರಸ್ತುತ ಶಾಂತವಾಗಿದ್ದು, ಪ್ರಕರಣ ದಾಖಲಿಸಲಾಗುತ್ತಿದೆ: ಎಸ್.ಪಿ

Suddi Udaya

ಮಾಲಾಡಿ ಶಕ್ತಿ ಕೇಂದ್ರದ ವತಿಯಿಂದ ದ್ವಿತೀಯ ಪಿಯುಸಿಯಲ್ಲಿ ರಾಜ್ಯಕ್ಕೆ ಒಂಬತ್ತನೇ ಸ್ಥಾನ ಪಡೆದ ಕು| ಅನನ್ಯಾ ರಿಗೆ ಸನ್ಮಾನ

Suddi Udaya

ಪಾರೆಂಕಿ: ಪರನೀರು ನಿವಾಸಿ ಮಹಿಳೆ ನಾಪತ್ತೆ: ದೂರು ದಾಖಲು

Suddi Udaya

ಬಂದಾರು : ಬಟ್ಲಡ್ಕ ಜುಮಾ ಮಸೀದಿಯಲ್ಲಿ 2ನೇ ದಿನದ ಉರೂಸ್ ಸಮಾರಂಭ

Suddi Udaya

ಮಡಂತ್ಯಾರು ಮೆಸ್ಕಾಂ ಕಛೇರಿಯಲ್ಲಿ ಕಂದಾಯ ಅದಾಲತ್‌ ಕಾರ್ಯಕ್ರಮ: ವಿದ್ಯುತ್ ಪರಿವರ್ತಕದ ಬೇಡಿಕೆಗೆ ಮನವಿ

Suddi Udaya

ಪುಂಜಾಲಕಟ್ಟೆ- ಚಾರ್ಮಾಡಿ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ: ಕಚ್ಚಾವಸ್ತು ಪೂರೈಕೆದಾರರಿಂದ ನಾಗಪುರದಲ್ಲಿ ಪ್ರತಿಭಟನೆ – ರೂ.11.50 ಕೋಟಿ ಪಾವತಿಗೆ ಕಂಪೆನಿ ಒಪ್ಪಿಗೆ

Suddi Udaya
error: Content is protected !!