June 4, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ: ಸಂತೆಕಟ್ಟೆ ಮೆಸ್ಕಾಂ ರಸ್ತೆಯಲ್ಲಿ ರಾತ್ರಿ ತಿರುಗಾಡುತ್ತಿದ್ದ ಮಾನಸಿಕ ಅಸ್ವಸ್ಥತೆ; ಬೆಳ್ತಂಗಡಿ ಪ.ಪಂ ಅಧ್ಯಕ್ಷ ಜಯಾನಂದ ಗೌಡ ನೇತೃತ್ವದಲ್ಲಿ ಬಾಲಕಿ ಸಿಯೋನ್ ಆಶ್ರಮಕ್ಕೆ ದಾಖಲು

ಬೆಳ್ತಂಗಡಿ: ಕೊಕ್ಕಡದಲ್ಲಿ ತಿರುಗಾಡುತ್ತಿದ್ದ ಮಾನಸಿಕ ಅಸ್ವಸ್ಥತೆಯನ್ನು 108 ಆಂಬುಲೆನ್ಸ್ ಮುಖಾಂತರ ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ದಾಖಲು ಮಾಡಿ ಹೋದ ನಂತರ ಆಸ್ಪತ್ರೆಯಿಂದ ತಪ್ಪಿಸಿಕೊಂಡ ಹುಡುಗಿ ಬೆಳ್ತಂಗಡಿ ಸಂತೆಕಟ್ಟೆ ಮೆಸ್ಕಾಂ ರಸ್ತೆಯಲ್ಲಿ ತಿರುಗಾಡುತ್ತಿರುವ ವಿಷಯವನ್ನು ತಿಳಿದ ಪಟ್ಟಣ ಪಂಚಾಯತ್ ಅಧ್ಯಕ್ಷ ಕೂಡಲೇ ಇನ್ಸ್ಪೆಕ್ಟರ್ ಸುಬ್ಬಾಪುರ ಮಠ್ ಮತ್ತು ಸಬ್ ಇನ್ಸ್ಪೆಕ್ಟರ್ ಮುರಳಿಯವರಿಗೆ ಹಾಗೂ ಪಟ್ಟಣ ಪಂಚಾಯತ್ ಮುಖ್ಯ ಅಧಿಕಾರಿಯವರಿಗೆ ಮಾಹಿತಿಯನ್ನು ನೀಡಿದರು. ನಂತರ ನೆರಿಯ ಸಿಯೋನ್ ಆಶ್ರಮದ ಪೌಲೋಸ್ ರನ್ನು ಸಂಪರ್ಕಿಸಿ ಸಬ್ ಇನ್ಸ್ಪೆಕ್ಟರ್ ಪತ್ರದ ಮುಖಾಂತರ ಆಂಬುಲೆನ್ಸ್ ನಲ್ಲಿ ಸಿಯೋನ್ ಆಶ್ರಮಕ್ಕೆ, ಬಾಲಕಿಯನ್ನು ದಾಖಲಿಸಲಾಯಿತು.,


ಈ ಸಂದರ್ಭದಲ್ಲಿ ಪಟ್ಟಣ ಪಂಚಾಯತ್ ಅಧ್ಯಕ್ಷ ಜಯಾನಂದ ಗೌಡ ಪ್ರಜ್ವಲ್, ಪಟ್ಟಣ ಪಂಚಾಯತ್ ನ ಸ್ಯಾನಿಟರಿ ಸೂಪರ್ವೈಸರ್ ಕರುಣಾಕರ, ಪಟ್ಟಣ ಪಂಚಾಯತ್ ನ ಮಾಜಿ ನಾಮನಿರ್ದೇಶನ ಸದಸ್ಯ ಪ್ರಕಾಶ್ ಆಚಾರ್ಯ, ಆಟೋ ಚಾಲಕ ಅಭಿಲಾಶ್, ಆಂಬುಲೆನ್ಸ್ ಚಾಲಕ ಪವನ್ ಕುಮಾರ್, ಸಬ್ ಇನ್ಸ್ಪೆಕ್ಟರ್ ಮುರಳಿಯವರು ಸಹಕರಿಸಿದರು.

Related posts

ಉಜಿರೆ: ರತ್ನಮಾನಸದಲ್ಲಿ ಮಾತೃ, ಪಿತೃ ,ಪೋಷಕರ ಸಭೆ ಹಾಗೂ ಗುರು ವಂದನ ಕಾರ್ಯಕ್ರಮ

Suddi Udaya

ರಕ್ತೇಶ್ವರಿಪದವು ಪೌಷ್ಟಿಕಾಹಾರ ಪೋಷಣ್ ಅಭಿಯಾನ

Suddi Udaya

ಮುಂಡಾಜೆ: ಕಾಯರ್ತೋಡಿಯಲ್ಲಿ ಬೃಹತ್ ಗಾತ್ರದ ಕಾಳಿಂಗ ಸರ್ಪ ಪತ್ತೆ: ಸುರಕ್ಷಿತವಾಗಿ ಹಿಡಿದು ಕಾಡಿಗೆ ಬಿಟ್ಟ ಧರ್ಮಸ್ಥಳದ ಸ್ನೇಕ್ ಪ್ರಕಾಶ್

Suddi Udaya

ಮಚ್ಚಿನ: ಕೃಷಿಕ ಕೃಷ್ಣಪ್ಪ ಪೂಜಾರಿ ಹೃದಯಾಘಾತದಿಂದ ನಿಧನ

Suddi Udaya

ಭೂಮಿ ಬಾನೊದ ಸೊರೊ ತುಳು ಜನಪದ ವಿಡಿಯೋ ಹಾಡು ಹಾಗೂ “ವಿಸ್ಮೃತಿ – ಐತಿಹಾಸಿಕ ಸ್ಮಾರಕಗಳ ಮನನ ಕನ್ನಡ ಅಲ್ಬಂ ಹಾಡು ಲೋಕಾರ್ಪಣೆ

Suddi Udaya

ಮೊಗ್ರು: ಅಲೆಕ್ಕಿ-ಮುಗೇರಡ್ಕ ಶ್ರೀ ರಾಮ ಶಿಶು ಮಂದಿರದ ಆಶ್ರಯದಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ಗೋಪೂಜೆ ಹಾಗೂ ತುಳಸಿ ಪೂಜೆ

Suddi Udaya
error: Content is protected !!