
ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಆಡಳಿತ, ತಾಲೂಕು ಪಂಚಾಯತ್, ಶಾಸಕ ಹರೀಶ್ ಪೂಂಜ ಅಧ್ಯಕ್ಷತೆಯಲ್ಲಿ ಮುಂಗಾರು ಮಳೆಯ ಪೂರ್ವ ಸಿದ್ಧತೆ ಬಗ್ಗೆ ತಾಲೂಕು ಮಟ್ಟದ ವಿವಿಧ ಇಲಾಖಾಧಿಕಾರಿಗಳ ಜೊತೆ ಸಮಾಲೋಚನಾ ಸಭೆ ಮೇ 26 ರಂದು ಗುರುವಾಯನಕೆರೆ ಕಿನ್ಯಮ್ಮ ಯಾನೆ ಗುಣವತಿ ಅಮ್ಮ ಸಭಾಭವನದಲ್ಲಿ ನಡೆಯಿತು.

ಪ್ರಸಕ್ತ ಮಳೆಗಾಲದಲ್ಲಿ ಜನರಿಗೆ ಯಾವುದೇ ತೊಂದರೆ ಕೊರತೆಗಳು ಆಗದ್ದಂತೆ ಕಾರ್ಯನಿರ್ವಹಿಸಬೇಕು. ಸಮಸ್ಯೆಗಳಾದಲ್ಲಿ ತಕ್ಷಣವೇ ಸ್ಪಂದಿಸಿ ಸರಿದೂಗಿಸುವಂತೆ ಅಧಿಕಾರಿಗಳಿಗೆ ಶಾಸಕ ಹರೀಶ್ ಪೂಂಜ ಸೂಚಿಸಿದರು. ರಾಷ್ಟ್ರೀಯ ಹೆದ್ದಾರಿ ಎಇಇ ಶಿವಪ್ರಸಾದ್ ಅಜಿಲ, ತಹಶೀಲ್ದಾರ್ ಪೃಥ್ವಿ ಸಾನಿಕಮ್, ತಾ.ಪಂ. ಸಿಇಒ ಭವಾನಿ ಶಂಕರ್, ಪ.ಪಂ. ಅಧ್ಯಕ್ಷ ಜಯಾನಂದ ಗೌಡ ಉಪಸ್ಥಿತರಿದ್ದರು.