30.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ: ಸಂತೆಕಟ್ಟೆ ಮೆಸ್ಕಾಂ ರಸ್ತೆಯಲ್ಲಿ ರಾತ್ರಿ ತಿರುಗಾಡುತ್ತಿದ್ದ ಮಾನಸಿಕ ಅಸ್ವಸ್ಥತೆ; ಬೆಳ್ತಂಗಡಿ ಪ.ಪಂ ಅಧ್ಯಕ್ಷ ಜಯಾನಂದ ಗೌಡ ನೇತೃತ್ವದಲ್ಲಿ ಬಾಲಕಿ ಸಿಯೋನ್ ಆಶ್ರಮಕ್ಕೆ ದಾಖಲು

ಬೆಳ್ತಂಗಡಿ: ಕೊಕ್ಕಡದಲ್ಲಿ ತಿರುಗಾಡುತ್ತಿದ್ದ ಮಾನಸಿಕ ಅಸ್ವಸ್ಥತೆಯನ್ನು 108 ಆಂಬುಲೆನ್ಸ್ ಮುಖಾಂತರ ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ದಾಖಲು ಮಾಡಿ ಹೋದ ನಂತರ ಆಸ್ಪತ್ರೆಯಿಂದ ತಪ್ಪಿಸಿಕೊಂಡ ಹುಡುಗಿ ಬೆಳ್ತಂಗಡಿ ಸಂತೆಕಟ್ಟೆ ಮೆಸ್ಕಾಂ ರಸ್ತೆಯಲ್ಲಿ ತಿರುಗಾಡುತ್ತಿರುವ ವಿಷಯವನ್ನು ತಿಳಿದ ಪಟ್ಟಣ ಪಂಚಾಯತ್ ಅಧ್ಯಕ್ಷ ಕೂಡಲೇ ಇನ್ಸ್ಪೆಕ್ಟರ್ ಸುಬ್ಬಾಪುರ ಮಠ್ ಮತ್ತು ಸಬ್ ಇನ್ಸ್ಪೆಕ್ಟರ್ ಮುರಳಿಯವರಿಗೆ ಹಾಗೂ ಪಟ್ಟಣ ಪಂಚಾಯತ್ ಮುಖ್ಯ ಅಧಿಕಾರಿಯವರಿಗೆ ಮಾಹಿತಿಯನ್ನು ನೀಡಿದರು. ನಂತರ ನೆರಿಯ ಸಿಯೋನ್ ಆಶ್ರಮದ ಪೌಲೋಸ್ ರನ್ನು ಸಂಪರ್ಕಿಸಿ ಸಬ್ ಇನ್ಸ್ಪೆಕ್ಟರ್ ಪತ್ರದ ಮುಖಾಂತರ ಆಂಬುಲೆನ್ಸ್ ನಲ್ಲಿ ಸಿಯೋನ್ ಆಶ್ರಮಕ್ಕೆ, ಬಾಲಕಿಯನ್ನು ದಾಖಲಿಸಲಾಯಿತು.,


ಈ ಸಂದರ್ಭದಲ್ಲಿ ಪಟ್ಟಣ ಪಂಚಾಯತ್ ಅಧ್ಯಕ್ಷ ಜಯಾನಂದ ಗೌಡ ಪ್ರಜ್ವಲ್, ಪಟ್ಟಣ ಪಂಚಾಯತ್ ನ ಸ್ಯಾನಿಟರಿ ಸೂಪರ್ವೈಸರ್ ಕರುಣಾಕರ, ಪಟ್ಟಣ ಪಂಚಾಯತ್ ನ ಮಾಜಿ ನಾಮನಿರ್ದೇಶನ ಸದಸ್ಯ ಪ್ರಕಾಶ್ ಆಚಾರ್ಯ, ಆಟೋ ಚಾಲಕ ಅಭಿಲಾಶ್, ಆಂಬುಲೆನ್ಸ್ ಚಾಲಕ ಪವನ್ ಕುಮಾರ್, ಸಬ್ ಇನ್ಸ್ಪೆಕ್ಟರ್ ಮುರಳಿಯವರು ಸಹಕರಿಸಿದರು.

Related posts

ಮಚ್ಚಿನ : ಸರಕಾರಿ ಪ್ರೌಢಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

Suddi Udaya

ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ ಪಡೆದ ಚಿನ್ಮಯ್ ಜಿ.ಕೆ ರಿಗೆ ಜಿಲ್ಲಾಧಿಕಾರಿಗಳಿಂದ ಸನ್ಮಾನ

Suddi Udaya

ಎಸ್‌ಎಸ್‌ಎಲ್‌ಸಿ ಫಲಿತಾಂಶ: ಪಟ್ರಮೆ ಪಟ್ಟೂರು ಶ್ರೀರಾಮ ಪ್ರೌಢಶಾಲೆಗೆ ಶೇ. 100 ಫಲಿತಾಂಶ

Suddi Udaya

ಬೆಳ್ತಂಗಡಿ: ಶ್ರೀ ಗುರುದೇವ ಕಾಲೇಜಿನಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಜು.1: ಧರ್ಮಸ್ಥಳದಲ್ಲಿ ಶಾಸಕ ಹರೀಶ್ ಪೂಂಜ ನೇತೃತ್ವದಲ್ಲಿ ಜನಸ್ಪಂದನಾ ಕಾರ್ಯಕ್ರಮ

Suddi Udaya

ಸುಲ್ಕೇರಿ: ಕೇಡೇಲು ಪರಿಸರಕ್ಕೆ ಮಾಜಿ ಸಚಿವ ಸುರೇಶ್ ಕುಮಾರ್ ಭೇಟಿ

Suddi Udaya
error: Content is protected !!