September 6, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಪ್ರಮುಖ ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿಯ ಮೂರು ವಕೀಲರ ಕಚೇರಿಗೆ, ಒಂದು ಇಂಜಿನಿಯರ್ ಆಫೀಸ್‌ಗೆ ಕುಂಕುಮ ?

ಬೆಳ್ತಂಗಡಿ: ಇಲ್ಲಿನ ಐಬಿ ರಸ್ತೆಯಲ್ಲಿರುವ ಖಾಸಗಿ ವಾಣಿಜ್ಯ ಸಂಕೀರ್ಣದಲ್ಲಿರುವ ಮೂರು ಮಂದಿ ವಕೀಲರು ಹಾಗೂ ಒಬ್ಬರು ಇಂಜಿನಿಯರ್ ಕಚೇರಿಯ ಬಾಗಿಲಿನ ಮುಂಭಾಗದಲ್ಲಿ ಕಂಕುಮ ಚೆಲ್ಲಿರುವುದು ಬುಧವಾರ ಬೆಳಿಗ್ಗೆ ಬೆಳಕಿಗೆ ಬಂದಿದೆ.

ಬೆಳ್ತಂಗಡಿ ಐಬಿ ರಸ್ತೆಯಲ್ಲಿರುವ ವಿಘ್ನೇಶ್ ಸಿಟಿ ವಾಣಿಜ್ಯ ಸಂಕಿರ್ಣದ ಒಂದನೆ ಮಹಡಿಯಲ್ಲಿರುವ ಸಂತೋಷ್ ಕುಮಾರ್, ಗಂಗಾಧರ ಪೂಜಾರಿ ವಕೀಲರ ಕಚೇರಿಯ ಬಾಗಿಲ ಮುಂದೆ ಹಾಗೂ ಸಿದ್ದಿವಿನಾಯಕ ಆಸೋಸಿಯೇಟ್ಸ್ ಇಂಜಿನಿಯರ್ ಕಚೇರಿ ಮುಂದೆ ಇಂದು ಬೆಳಿಗ್ಗೆ ಕುಂಕುಮ ಚೆಲ್ಲಿರುವುದು ಕಂಡು ಬಂದಿದೆ. ಅದೇ ರೀತಿ ಮಹಿಳಾ ಒಕ್ಕೂಟ ಕಟ್ಟಡದಲ್ಲಿರುವ ವಕೀಲರಾದ ಮನೋಹರ ಇಳಂತಿಲರ ಕಚೇರಿಯ ಬಾಗಿಲಿನ ಮುಂದೆಯೂ ಇದೇ ರೀತಿ ಕುಂಕುಮ ಚೆಲ್ಲಿರುವುದು ಕಂಡು ಬಂದಿದೆ.

ನಾಲ್ಕು ಮಂದಿಯ ಕಚೇರಿಯ ಬಾಗಿಲು ಎದುರು ಕುಂಕುಮ ಚೆಲ್ಲಿರುವ ಉದ್ದೇಶ ಏನುಗೊತ್ತಾಗಿಲ್ಲ.ಈ ಕಟ್ಟಡದಲ್ಲಿ ಹಲವು ಕಚೇರಿಗಳಿದ್ದರೂ, ನಾಲ್ಕು ಕಚೇರಿಯ ಎದರು ಮಾತ್ರ ಕುಂಕುಮ ಚೆಲ್ಲಿರುವುದು ಕುತೂಲಹಕ್ಕೆ ಕಾರಣವಾಗಿದೆ.

Related posts

ಓಡಿಲ್ನಾಳ ಕೆರೆಕೋಡಿ ಲೋಕಯ್ಯ ಮೂಲ್ಯ ಅಸಹಜ ಸಾವು

Suddi Udaya

ಬೆಳ್ತಂಗಡಿ ಛೇಂಬರ್ ಆಫ್ ಕಾಮರ್ಸ್ ಇದರ ವಾರ್ಷಿಕ ಮಹಾಸಭೆ

Suddi Udaya

ಉಜಿರೆ ಶ್ರೀ ಆದಿನಾಗಬ್ರಹ್ಮ ಮೊಗೇರ್ಕಳ ದೈವಸ್ಥಾನ ಶ್ರೀ ಕ್ಷೇತ್ರ ಎರ್ನೋಡಿ : ನೇಮೋತ್ಸವ ದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಬೆಳ್ತಂಗಡಿ ತಾಲೂಕು ಸರಕಾರಿ ಆಸ್ಪತ್ರೆಯ ನಿವೃತ್ತ ವೈದ್ಯಾಧಿಕಾರಿ ಡಾ| ಆದಂ ಉಸ್ಮಾನ್ ನಿಧನ

Suddi Udaya

ಅತ್ತಾಜೆ ಮುಹಿಯುದ್ದೀನ್ ಅರಬಿಕ್ ಮದರಸಕ್ಕೆ ಪಬ್ಲಿಕ್ ಪರೀಕ್ಷೆಯಲ್ಲಿ ಶೇ. 100 ಫಲಿತಾಂಶ

Suddi Udaya

ಕ್ಯಾನ್ಸರ್ ಪೀಡಿತರಿಗೆ ಕೇಶದಾನಗೈದು ಮಾನವೀಯತೆ ಮೆರೆದ ಉಜಿರೆಯ ದಿಕ್ಷೀತಾ

Suddi Udaya
error: Content is protected !!