September 6, 2026
ಗ್ರಾಮಾಂತರ ಸುದ್ದಿ

ಬೆಳ್ತಂಗಡಿ : ಕೆಇಬಿ ರಸ್ತೆ -ರೆಂಕೆದಗುತ್ತು-ಮಲ್ಲೊಟ್ಟು ಸಂಪರ್ಕ ರಸ್ತೆಗೆ ಅನುದಾನ ಒದಗಿಸುವಂತೆ ಡಾ. ಡಿ ವೀರೇಂದ್ರ ಹೆಗ್ಗಡೆಯವರಿಗೆ ಮನವಿ

ಬೆಳ್ತಂಗಡಿ: ಬೆಳ್ತಂಗಡಿ ನಗರದಿಂದ ಕೆಇಬಿ ರಸ್ತೆ ರೆಂಕೆದಗುತ್ತುವಾಗಿ – ಮಲ್ಲೊಟ್ಟು ಸಂಪರ್ಕಿಸುವ ರಸ್ತೆಯು ತೀರಾ ಹದಗೆಟ್ಟಿದ್ದು ರಸ್ತೆಯನ್ನು ಅಗಲೀಕರಣಗೊಳಿಸಿ, ಒಳಚರಂಡಿಗಳನ್ನು ನಿರ್ಮಿಸಿ ಅಭಿವೃದ್ಧಿಗೊಳಿಸುವುದು ಅನಿವಾರ್ಯವಾಗಿರುವ ಹಿನ್ನೆಲೆಯಲ್ಲಿ ರಸ್ತೆ ಕಾಮಗಾರಿಯನ್ನು ಕೈಗೊಳ್ಳಲು ಧರ್ಮಸ್ಥಳದ ಡಾ| ಡಿ. ವೀರೇಂದ್ರ ಹೆಗ್ಗಡೆಯವರಿಗೆ ರಾಜ್ಯಸಭಾ ಸದಸ್ಯರ ನಿಧಿಯಿಂದ ಅಗತ್ಯವಿರುವ ಅಂದಾಜು ರೂ. 2.೦೦ ಕೋಟಿ ಅನುದಾನವನ್ನು ಒದಗಿಸಿಕೊಡುವಂತೆ ಬೆಳ್ತಂಗಡಿ ನಗರ ಪಂಚಾಯತ್ ಆಡಳಿತ ಮಂಡಳಿ ವತಿಯಿಂದ ಮನವಿ ಸಲ್ಲಿಸಲಾಯಿತು.


ಬೆಳ್ತಂಗಡಿ ಕೆಇಬಿ ರಸ್ತೆ ರೆಂಕೆದಗುತ್ತುವಾಗಿ- ಮಲ್ಲೊಟ್ಟು ಸಂಪರ್ಕಿಸುವ ರಸ್ತೆಯು ತೀರಾ ಹದಗೆಟ್ಟಿದ್ದು ಸಾರ್ವಜನಿಕರ/ವಿದ್ಯಾರ್ಥಿಗಳ ಹಾಗೂ ಉದ್ಯಮಿಗಳ ಸಂಚಾರಕ್ಕೆ ತೊಂದರೆಯಾಗುತ್ತಿದೆ. ಈ ರಸ್ತೆಯು ಹಾದು ಹೋಗುವ ಪ್ರದೇಶದಲ್ಲಿ ಸರಕಾರದ ಮೂರು ವಿದ್ಯಾರ್ಥಿ ನಿಲಯಗಳು, ಒಂದು ವಸತಿ ಶಾಲೆ, ಅಂಗನವಾಡಿಗಳು, ಪ್ರಾಥಮಿಕ ಶಾಲೆಗಳು, ಹಾಲಿನ ಡೈರಿ, ೧೦೦೦ಕ್ಕೂ ಅಧಿಕ ಕುಟುಂಬಗಳು ವಾಸಿಸುವ ಜನ ಪ್ರದೇಶವಾಗಿರುತ್ತದೆ. ಅದಲ್ಲದೇ “ಸಿರಿ” ಗ್ರಾಮೋದ್ಯೋಗ ಸಂಸ್ಥೆಯ ನೂತನ ಉತ್ಪಾದನಾ ಘಟಕವು ಸಂಪರ್ಕ ರಸ್ತೆಯ ಬದಿಯಲ್ಲೇ ನೂತನವಾಗಿ ಪ್ರಾರಂಭಗೊAಡಿದ್ದು ಈ ಪ್ರದೇಶದ ನಗರೀಕರಣಕ್ಕೆ ಹೊಸ ಮೆರುಗನ್ನು ನೀಡಿದೆ. ಪ್ರಸ್ತುತ ಈ ಸಂಪರ್ಕ ರಸ್ತೆಯನ್ನು ಬೆಳ್ತಂಗಡಿ – ಉಪ್ಪಿನಂಗಡಿ ಮುಖಾಂತರ ಪುತ್ತೂರನ್ನು ಸಂಪರ್ಕ ಕಲ್ಪಿಸುವ ಬೈಪಾಸ್ ರಸ್ತೆಯನ್ನಾಗಿ ಉಪಯೋಗಿಸುತ್ತಿದ್ದು, ಸದರಿ ರಸ್ತೆಯನ್ನು ಅಭಿವೃದ್ಧಿ ಪಡಿಸುವುದು ಸೂಕ್ತವೆಂದು ಬೆಳ್ತಂಗಡಿ ನಗರ ಪಂಚಾಯತ್ ಆಡಳಿತ ಮಂಡಳಿಯು ತೀರ್ಮಾನಿಸಿದೆ.
ಈ ಸಂದರ್ಭದಲ್ಲಿ ಪಟ್ಟಣ ಪಂಚಾಯತ್ ಅಧ್ಯಕ್ಷ ಜಯಾನಂದ ಗೌಡ, ಸ್ಥಾಯಿ ಸಮಿತಿ ಅಧ್ಯಕ್ಷ ಶರತ್ ಕುಮಾರ್ ಶೆಟ್ಟಿ, ಪ.ಪಂ. ಮುಖ್ಯ ಅಧಿಕಾರಿ ರಾಜೇಶ್, ಇಂಜಿನಿಯರ್ ಮಹಾವೀರ ಅರಿಗ, ಸದಸ್ಯರಾದ ಲೋಕೇಶ್, ಅಂಬರೀಶ್, ಪ್ರಮುಖರಾದ ರಾಜೇಶ್ ನಾಯಕ್, ಕರುಣಾಕರ, ಭುಜಂಗ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.

Related posts

ಹೆದ್ದಾರಿ ಕಾಮಗಾರಿ ಅವಾಂತರ; ಮುಂಡಾಜೆಯ ಚಂದ್ರಶೇಖರ ಅಂಬಡ್ತ್ಯಾರು ರವರ ಮನೆಗೆ ನುಗ್ಗಿದ್ದ ನೀರು

Suddi Udaya

ಕಳಿಯ ಪತಂಜಲಿ ಯೋಗ ಶಾಖೆಯಲ್ಲಿ ಕಾರ್ಗಿಲ್ ವಿಜಯ ದಿವಸ ಆಚರಣೆ

Suddi Udaya

ಮುಂಡಾಜೆ ಸೀಟು ಬಳಿಯ ಸಿಸಿ ಕ್ಯಾಮೆರಾ ಎಗರಿಸಿದ ಕಳ್ಳರು

Suddi Udaya

ಎಲ್ ಸಿ ಆರ್ ಇಂಡಿಯನ್ ಪದವಿ ವಿಭಾಗದಲ್ಲಿ ವಾಣಿಜ್ಯ ಚಟುವಟಿಕೆ ಕಾರ್ಯಕ್ರಮ

Suddi Udaya

ಅರಸಿನಮಕ್ಕಿ ಮೂಲ್ಯರ ಯಾನೆ ಕುಲಾಲರ ಸಂಘ: 29ನೇ ವರ್ಷದ ವಾರ್ಷಿಕೋತ್ಸವ-ಸತ್ಯನಾರಾಯಣ ಪೂಜೆ

Suddi Udaya

ಸರ್ಕಾರಿ ಪದವಿಪೂರ್ವ ಕಾಲೇಜು, ಕೊಯ್ಯೂರು -ಪ್ರಥಮ ಪಿ ಯು ಸಿ ವಿದ್ಯಾರ್ಥಿಗಳ ಸ್ವಾಗತ ಸಮಾರಂಭ :

Suddi Udaya
error: Content is protected !!