July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ: ಧೀಮತಿ ಜೈನ ಮಹಿಳಾ ಸಮಾಜದ ಮಾಸಿಕ ಸಭೆ

ಉಜಿರೆ: ಜೈನ ಧರ್ಮ ಕೇವಲ ಒಂದು ಮತ ಅಷ್ಟೇ ಅಲ್ಲ ಅದೊಂದು ಸರಳವಾದ ಜೀವನ ಶೈಲಿ. ಅದೊಂದು ವೈಚಾರಿಕತೆ, ನಾರಕ ತೀರ್ಯಂಚ ಗತಿಗಳಿಂದ ಮುಕ್ತಿ ಪಡೆದು ಮೋಕ್ಷ ಸಾಧನೆಗೆ ಜೈನ ಧರ್ಮ ದಾರಿ ತೋರುತ್ತದೆ ಎಂದು ಧೀಮತಿ ಜೈನ ಮಹಿಳಾ ಸಮಾಜದ ಮಾಸಿಕ ಸಭೆಯಲ್ಲಿ ,’ಆಧುನಿಕ ಜೀವನ ಶೈಲಿಯಲ್ಲಿ ಜೈನ ಧರ್ಮದ ಆಚರಣೆಯ ಪ್ರಸ್ತುತತೆ’ ಎಂಬ ವಿಷಯದ ಕುರಿತು ಕ್ಷೇಮವನ ಬೆಂಗಳೂರು ಇದರ ನಿರ್ದೇಶಕರಾದ ಶ್ರದ್ದಾ ಅಮಿತ್ ಅಭಿಪ್ರಾಯ ವ್ಯಕ್ತಪಡಿಸಿದರು.

ಯಾವುದೇ ಧರ್ಮದ ತತ್ವಗಳನ್ನು ವೈಜ್ಞಾನಿಕ ಚಿಂತನೆಗೆ ಒಳಪಡಿಸಿ ಸಮಾಜದ ಒಳಿತಿಗಾಗಿ ಸಕಾರಾತ್ಮಕವಾಗಿ ಅಳವಡಿಸಿಕೊಳ್ಳುವುದು ಇಂದಿನ ಅಗತ್ಯತೆಗಳಲ್ಲಿ ಒಂದು ಎಂದರು.


ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಡಾ.ರಜತ ಪಿ.ಶೆಟ್ಟಿ ಮಾತನಾಡಿ ಜೈನ ಧರ್ಮದ ನೈಜ ತಿರುಳನ್ನು ಅರ್ಥೈಸಿಕೊಂಡು ಪಾಲಿಸುವುದು ನೆಮ್ಮದಿಯ ಜೀವನಕ್ಕೆ ರಹದಾರಿ. ಜೈನ ಧರ್ಮದ ಮೂಲ ತತ್ವಗಳಾದ ಅಹಿಂಸೆ, ತ್ಯಾಗ ಅಸ್ಥೇಯ ಅಪರಿಗ್ರಹ ಹಾಗೂ ಅನೇಕಾಂತವಾದಗಳಲ್ಲಿ ಆಳವಾದ ಜೀವನದ ಸತ್ಯ ಅಡಗಿದೆ ಅದನ್ನು ಅರಿತಾಗ ಜೀವನ ಸಾರ್ಥಕವಾಗುವುದು ಎಂದರು. ಇದೇ ಸಂದರ್ಭದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳದ ಯೋಜನೆಗಳಲ್ಲಿ ವಿಶೇಷವಾಗಿ ತೊಡಗಿಸಿಕೊಂಡು ಮಹಿಳಾ ಸಬಲೀಕರಣಕ್ಕೆ ಕೊಡುಗೆ ನೀಡುತ್ತಿರುವ ಶ್ರದ್ಧಾ ಅಮಿತ್ ಅವರನ್ನು ದೀಮತಿ ಜೈನ ಮಹಿಳಾ ಸಮಾಜದ ವತಿಯಿಂದ ಅಭಿನಂದಿಸಿ ಗೌರವಿಸಲಾಯಿತು.


ಕಾರ್ಯಕ್ರಮದ ಆರಂಭದಲ್ಲಿ ಪೇಹಲ್ಗಾಮ್ ದಾಳಿಯಲ್ಲಿ ಮಡಿದ ನಾಗರಿಕರು ಹಾಗೂ ಪ್ರತಿದಾಳಿಯಲ್ಲಿ ಹುತಾತ್ಮರಾದ ಸೈನಿಕರಿಗೆ ಶ್ರದ್ಧಾಂಜಲಿ ಅರ್ಪಿಸಲಾಯಿತು.
ಸ್ಮೃತಿ ಜೈನ್ ಪ್ರಾರ್ಥಿಸಿ, ಸ್ಮಿತಾ ಜೈನ್ ಸ್ವಾಗತಿಸಿದರು. ಅಕ್ಷತಾ ಜೈನ್ ಅತಿಥಿಗಳನ್ನು ಪರಿಚಯಿಸಿದರು. ಪುನೀತ ಜೈನ್ ವಂದಿಸಿ, ದಿವ್ಯಾ ಕುಮಾರಿ ಕಾರ್ಯಕ್ರಮ ನಿರೂಪಿಸಿದರು.ಅಶ್ವಿನಿ ಪ್ರವೀಣ್ ಇಂದ್ರ ಹಾಗೂ ಉಲ್ಲಾಸಿನಿ ಕಂಬಳಿ ಸಹಕರಿಸಿದರು.

Related posts

ಎಸ್.ಡಿ.ಎಂ. ವಸತಿ ಪ.ಪೂ. ಕಾಲೇಜಿನ ಕನ್ನಡ ವಿಭಾಗ ಮುಖ್ಯಸ್ಥೆ ಕವಿತಾ ಉಮೇಶ್ ರವರಿಗೆ ‘ಕನ್ನಡ ಸ್ವಾಭಿಮಾನ ಸ್ಮರಣಿಕೆಯ ಗೌರವ ಪ್ರಶಸ್ತಿ’

Suddi Udaya

ವಿ.ಹಿ.ಪಂ. ಸ್ಥಾಪನಾ ದಿನ ಹಾಗೂ ಷಷ್ಠಿಪೂರ್ತಿ ಸಮಾರೋಪ: ಸೆ.1 ರಂದು ಉಜಿರೆಯಲ್ಲಿ ಬೆಳ್ತಂಗಡಿ ಪ್ರಖಂಡ ಇದರ ನೇತೃತ್ವದಲ್ಲಿ ಬೃಹತ್ ಹಿಂದೂ ಸಮಾವೇಶ- ಆಕರ್ಷಕ ಶೋಭಾಯಾತ್ರೆ

Suddi Udaya

ಉಜಿರೆ ಎಸ್.ಡಿ.ಎಂ ಮಹಿಳಾ ಐ.ಟಿ.ಐ ಕಾಲೇಜಿನಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ಉದ್ಘಾಟನೆ ಹಾಗೂ ಭಿತ್ತಿ ಪತ್ರಿಕೆ ಅನಾವರಣ

Suddi Udaya

ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನದ ನೂತನ ಆಡಳಿತ ಮಂಡಳಿ ರಚನೆ

Suddi Udaya

ಜಿಲ್ಲಾ ಮಟ್ಟದ ಇನ್ಸ್ ಪೈಯರ್ ಸ್ಪರ್ಧೆಗೆ ಉರುವಾಲು ಶ್ರೀ ಭಾರತೀ ವಿದ್ಯಾರ್ಥಿಗಳು ಆಯ್ಕೆ

Suddi Udaya

ಅಳದಂಗಡಿ ಸಿಎ ಬ್ಯಾಂಕ್ ಅಧ್ಯಕ್ಷ ಹಾಗೂ ಆಡಳಿತ ಮಂಡಳಿಯ ವಿರುದ್ಧ ಮಾನಹಾನಿಕರ ಪೋಸ್ಟ್: ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುತ್ತಿರುವ ಕಿಡಿಗೇಡಿಗಳ ವಿರುದ್ಧ ಅಳದಂಗಡಿ ಸತ್ಯದೇವತೆ ದೇವಸ್ಥಾನದಲ್ಲಿ ಪ್ರಾರ್ಥನೆ

Suddi Udaya
error: Content is protected !!