25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ: ಧೀಮತಿ ಜೈನ ಮಹಿಳಾ ಸಮಾಜದ ಮಾಸಿಕ ಸಭೆ

ಉಜಿರೆ: ಜೈನ ಧರ್ಮ ಕೇವಲ ಒಂದು ಮತ ಅಷ್ಟೇ ಅಲ್ಲ ಅದೊಂದು ಸರಳವಾದ ಜೀವನ ಶೈಲಿ. ಅದೊಂದು ವೈಚಾರಿಕತೆ, ನಾರಕ ತೀರ್ಯಂಚ ಗತಿಗಳಿಂದ ಮುಕ್ತಿ ಪಡೆದು ಮೋಕ್ಷ ಸಾಧನೆಗೆ ಜೈನ ಧರ್ಮ ದಾರಿ ತೋರುತ್ತದೆ ಎಂದು ಧೀಮತಿ ಜೈನ ಮಹಿಳಾ ಸಮಾಜದ ಮಾಸಿಕ ಸಭೆಯಲ್ಲಿ ,’ಆಧುನಿಕ ಜೀವನ ಶೈಲಿಯಲ್ಲಿ ಜೈನ ಧರ್ಮದ ಆಚರಣೆಯ ಪ್ರಸ್ತುತತೆ’ ಎಂಬ ವಿಷಯದ ಕುರಿತು ಕ್ಷೇಮವನ ಬೆಂಗಳೂರು ಇದರ ನಿರ್ದೇಶಕರಾದ ಶ್ರದ್ದಾ ಅಮಿತ್ ಅಭಿಪ್ರಾಯ ವ್ಯಕ್ತಪಡಿಸಿದರು.

ಯಾವುದೇ ಧರ್ಮದ ತತ್ವಗಳನ್ನು ವೈಜ್ಞಾನಿಕ ಚಿಂತನೆಗೆ ಒಳಪಡಿಸಿ ಸಮಾಜದ ಒಳಿತಿಗಾಗಿ ಸಕಾರಾತ್ಮಕವಾಗಿ ಅಳವಡಿಸಿಕೊಳ್ಳುವುದು ಇಂದಿನ ಅಗತ್ಯತೆಗಳಲ್ಲಿ ಒಂದು ಎಂದರು.


ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಡಾ.ರಜತ ಪಿ.ಶೆಟ್ಟಿ ಮಾತನಾಡಿ ಜೈನ ಧರ್ಮದ ನೈಜ ತಿರುಳನ್ನು ಅರ್ಥೈಸಿಕೊಂಡು ಪಾಲಿಸುವುದು ನೆಮ್ಮದಿಯ ಜೀವನಕ್ಕೆ ರಹದಾರಿ. ಜೈನ ಧರ್ಮದ ಮೂಲ ತತ್ವಗಳಾದ ಅಹಿಂಸೆ, ತ್ಯಾಗ ಅಸ್ಥೇಯ ಅಪರಿಗ್ರಹ ಹಾಗೂ ಅನೇಕಾಂತವಾದಗಳಲ್ಲಿ ಆಳವಾದ ಜೀವನದ ಸತ್ಯ ಅಡಗಿದೆ ಅದನ್ನು ಅರಿತಾಗ ಜೀವನ ಸಾರ್ಥಕವಾಗುವುದು ಎಂದರು. ಇದೇ ಸಂದರ್ಭದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳದ ಯೋಜನೆಗಳಲ್ಲಿ ವಿಶೇಷವಾಗಿ ತೊಡಗಿಸಿಕೊಂಡು ಮಹಿಳಾ ಸಬಲೀಕರಣಕ್ಕೆ ಕೊಡುಗೆ ನೀಡುತ್ತಿರುವ ಶ್ರದ್ಧಾ ಅಮಿತ್ ಅವರನ್ನು ದೀಮತಿ ಜೈನ ಮಹಿಳಾ ಸಮಾಜದ ವತಿಯಿಂದ ಅಭಿನಂದಿಸಿ ಗೌರವಿಸಲಾಯಿತು.


ಕಾರ್ಯಕ್ರಮದ ಆರಂಭದಲ್ಲಿ ಪೇಹಲ್ಗಾಮ್ ದಾಳಿಯಲ್ಲಿ ಮಡಿದ ನಾಗರಿಕರು ಹಾಗೂ ಪ್ರತಿದಾಳಿಯಲ್ಲಿ ಹುತಾತ್ಮರಾದ ಸೈನಿಕರಿಗೆ ಶ್ರದ್ಧಾಂಜಲಿ ಅರ್ಪಿಸಲಾಯಿತು.
ಸ್ಮೃತಿ ಜೈನ್ ಪ್ರಾರ್ಥಿಸಿ, ಸ್ಮಿತಾ ಜೈನ್ ಸ್ವಾಗತಿಸಿದರು. ಅಕ್ಷತಾ ಜೈನ್ ಅತಿಥಿಗಳನ್ನು ಪರಿಚಯಿಸಿದರು. ಪುನೀತ ಜೈನ್ ವಂದಿಸಿ, ದಿವ್ಯಾ ಕುಮಾರಿ ಕಾರ್ಯಕ್ರಮ ನಿರೂಪಿಸಿದರು.ಅಶ್ವಿನಿ ಪ್ರವೀಣ್ ಇಂದ್ರ ಹಾಗೂ ಉಲ್ಲಾಸಿನಿ ಕಂಬಳಿ ಸಹಕರಿಸಿದರು.

Related posts

ದ್ವಿತೀಯ ಪಿಯುಸಿ ಪರೀಕ್ಷೆ ವಾಣಿಜ್ಯ ವಿಭಾಗದಲ್ಲಿ ಸಾಧನೆಗೈದ ಜೋಶನ್‌ ರಫಾಯೆಲ್‌ ಡಿಸೋಜ ರಿಗೆ ಮಡಂತ್ಯಾರು ಸೇಕ್ರೆಡ್‌ ಹಾಟ್‌೯ ವಿದ್ಯಾಸಂಸ್ಥೆಯ ವತಿಯಿಂದ ಸನ್ಮಾನ

Suddi Udaya

ಶ್ರೀ ಎರ್ನೋಡಿ ಕ್ಷೇತ್ರ ಉಜಿರೆ ವಷಾ೯ವಧಿ ಜಾತ್ರೋತ್ಸವ : ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಬೆಳ್ತಂಗಡಿ: ಗೋ ಸಂರಕ್ಷಣಾ ತಿದ್ದುಪಡಿ ವಿಧೇಯಕದ ವಿರುದ್ಧ ವಿ.ಹಿಂ.ಪ ಪ್ರತಿಭಟನೆ

Suddi Udaya

ಕೊಕ್ಕಡ: ಉಪ್ಪಾರಪಳಿಕೆಯಲ್ಲಿ ಶ್ರೀಕೃಷ್ಣ ಭಜನಾ ಮಂದಿರದ ಪ್ರಾರಂಭೋತ್ಸವ ; ಧಾರ್ಮಿಕ ಸಭೆ

Suddi Udaya

ನಾವರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾಗಿ ಜಯಾನಂದ ಪೂಜಾರಿ ಅಭಿವೃದ್ಧಿ ಸಮಿತಿ ಅಧ್ಯಕ್ಷರಾಗಿ ನವೀನ್ ಕುಮಾರ್ ಆಯ್ಕೆ

Suddi Udaya

ಸುರ್ಯ ಸದಾಶಿವ ರುದ್ರ ದೇವಸ್ಥಾನಕ್ಕೆ ಕರ್ನಾಟಕ ರಾಜ್ಯ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಅರುಣ್ ಚಕ್ರವರ್ತಿ ಭೇಟಿ

Suddi Udaya
error: Content is protected !!