September 6, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಪ್ರಮುಖ ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿಯ ಮೂರು ವಕೀಲರ ಕಚೇರಿಗೆ, ಒಂದು ಇಂಜಿನಿಯರ್ ಆಫೀಸ್‌ಗೆ ಕುಂಕುಮ ?

ಬೆಳ್ತಂಗಡಿ: ಇಲ್ಲಿನ ಐಬಿ ರಸ್ತೆಯಲ್ಲಿರುವ ಖಾಸಗಿ ವಾಣಿಜ್ಯ ಸಂಕೀರ್ಣದಲ್ಲಿರುವ ಮೂರು ಮಂದಿ ವಕೀಲರು ಹಾಗೂ ಒಬ್ಬರು ಇಂಜಿನಿಯರ್ ಕಚೇರಿಯ ಬಾಗಿಲಿನ ಮುಂಭಾಗದಲ್ಲಿ ಕಂಕುಮ ಚೆಲ್ಲಿರುವುದು ಬುಧವಾರ ಬೆಳಿಗ್ಗೆ ಬೆಳಕಿಗೆ ಬಂದಿದೆ.

ಬೆಳ್ತಂಗಡಿ ಐಬಿ ರಸ್ತೆಯಲ್ಲಿರುವ ವಿಘ್ನೇಶ್ ಸಿಟಿ ವಾಣಿಜ್ಯ ಸಂಕಿರ್ಣದ ಒಂದನೆ ಮಹಡಿಯಲ್ಲಿರುವ ಸಂತೋಷ್ ಕುಮಾರ್, ಗಂಗಾಧರ ಪೂಜಾರಿ ವಕೀಲರ ಕಚೇರಿಯ ಬಾಗಿಲ ಮುಂದೆ ಹಾಗೂ ಸಿದ್ದಿವಿನಾಯಕ ಆಸೋಸಿಯೇಟ್ಸ್ ಇಂಜಿನಿಯರ್ ಕಚೇರಿ ಮುಂದೆ ಇಂದು ಬೆಳಿಗ್ಗೆ ಕುಂಕುಮ ಚೆಲ್ಲಿರುವುದು ಕಂಡು ಬಂದಿದೆ. ಅದೇ ರೀತಿ ಮಹಿಳಾ ಒಕ್ಕೂಟ ಕಟ್ಟಡದಲ್ಲಿರುವ ವಕೀಲರಾದ ಮನೋಹರ ಇಳಂತಿಲರ ಕಚೇರಿಯ ಬಾಗಿಲಿನ ಮುಂದೆಯೂ ಇದೇ ರೀತಿ ಕುಂಕುಮ ಚೆಲ್ಲಿರುವುದು ಕಂಡು ಬಂದಿದೆ.

ನಾಲ್ಕು ಮಂದಿಯ ಕಚೇರಿಯ ಬಾಗಿಲು ಎದುರು ಕುಂಕುಮ ಚೆಲ್ಲಿರುವ ಉದ್ದೇಶ ಏನುಗೊತ್ತಾಗಿಲ್ಲ.ಈ ಕಟ್ಟಡದಲ್ಲಿ ಹಲವು ಕಚೇರಿಗಳಿದ್ದರೂ, ನಾಲ್ಕು ಕಚೇರಿಯ ಎದರು ಮಾತ್ರ ಕುಂಕುಮ ಚೆಲ್ಲಿರುವುದು ಕುತೂಲಹಕ್ಕೆ ಕಾರಣವಾಗಿದೆ.

Related posts

ಪಜಿರಡ್ಕ ಸಂಗಮ ಕ್ಷೇತ್ರ ಶ್ರೀ ಸದಾಶಿವೇಶ್ವರ ದೇವಸ್ಥಾನಕ್ಕೆ ನೂತನ ಶಿಲಾಮಯ ಧ್ವಜಸ್ತಂಭದ ಶೋಭಾಯಾತ್ರೆಗೆ ಉಜಿರೆಯಲ್ಲಿ ಗಣ್ಯರಿಂದ ಚಾಲನೆ

Suddi Udaya

ಬೆಳ್ತಂಗಡಿ ಶ್ರೀ ಧ.ಮಂ. ಆಂಗ್ಲ ಮಾಧ್ಯಮ ಶಾಲೆಯ ಸ್ಕೌಟು ಗೈಡ್ ಶಿಕ್ಷಕರಿಗೆ ಚೇತರಿಕಾ ಶಿಬಿರ

Suddi Udaya

ನಾರಾವಿ ಸಂತ ಅಂತೋಣಿ ಪದವಿ ಪೂರ್ವ ಕಾಲೇಜಿನಲ್ಲಿ ಪೋಷಕ–ಶಿಕ್ಷಕ ಸಭೆ

Suddi Udaya

ರಾಜ್ಯದ ಜನರಿಗೆ ಬೆಲೆ ಏರಿಕೆ ಮೂಲಕ ಬರೆ ಎಳೆದ ಕಾಂಗ್ರೆಸ್ ಸರಕಾರ :ಉಚಿತ ಗ್ಯಾರಂಟಿಯ ಹೊರೆ ಭರಿಸಲಾದೆ ಸರ್ಕಾರ ದಿವಾಳಿ ಅಂಚಿಗೆ

Suddi Udaya

ಮಾ16: ಬದುಕು ಕಟ್ಟೋಣ ಬನ್ನಿ ತಂಡದ ಸಂಚಾಲಕ ಮೋಹನ್ ಕುಮಾರ್ ನೇತೃತ್ವ , ವಂದೇ ಮಾತರಂ, ನನ್ನ ಸೇವೆ ದೇಶಕ್ಕಾಗಿ ಧ್ಯೇಯದೊಂದಿಗೆ ನೇತ್ರಾವತಿ ಸ್ವಚ್ಛತಾ ಕಾರ್ಯಕ್ರಮ

Suddi Udaya

ಮಿತ್ತಬಾಗಿಲು: ಮಕ್ಕಳ ಬೇಸಿಗೆ ಶಿಬಿರದ ಸಮಾರೋಪ ಸಮಾರಂಭ

Suddi Udaya
error: Content is protected !!