23.4 C
ಪುತ್ತೂರು, ಬೆಳ್ತಂಗಡಿ
May 30, 2025
ಗ್ರಾಮಾಂತರ ಸುದ್ದಿ

ಬೆಳ್ತಂಗಡಿ : ಕೆಇಬಿ ರಸ್ತೆ -ರೆಂಕೆದಗುತ್ತು-ಮಲ್ಲೊಟ್ಟು ಸಂಪರ್ಕ ರಸ್ತೆಗೆ ಅನುದಾನ ಒದಗಿಸುವಂತೆ ಡಾ. ಡಿ ವೀರೇಂದ್ರ ಹೆಗ್ಗಡೆಯವರಿಗೆ ಮನವಿ

ಬೆಳ್ತಂಗಡಿ: ಬೆಳ್ತಂಗಡಿ ನಗರದಿಂದ ಕೆಇಬಿ ರಸ್ತೆ ರೆಂಕೆದಗುತ್ತುವಾಗಿ – ಮಲ್ಲೊಟ್ಟು ಸಂಪರ್ಕಿಸುವ ರಸ್ತೆಯು ತೀರಾ ಹದಗೆಟ್ಟಿದ್ದು ರಸ್ತೆಯನ್ನು ಅಗಲೀಕರಣಗೊಳಿಸಿ, ಒಳಚರಂಡಿಗಳನ್ನು ನಿರ್ಮಿಸಿ ಅಭಿವೃದ್ಧಿಗೊಳಿಸುವುದು ಅನಿವಾರ್ಯವಾಗಿರುವ ಹಿನ್ನೆಲೆಯಲ್ಲಿ ರಸ್ತೆ ಕಾಮಗಾರಿಯನ್ನು ಕೈಗೊಳ್ಳಲು ಧರ್ಮಸ್ಥಳದ ಡಾ| ಡಿ. ವೀರೇಂದ್ರ ಹೆಗ್ಗಡೆಯವರಿಗೆ ರಾಜ್ಯಸಭಾ ಸದಸ್ಯರ ನಿಧಿಯಿಂದ ಅಗತ್ಯವಿರುವ ಅಂದಾಜು ರೂ. 2.೦೦ ಕೋಟಿ ಅನುದಾನವನ್ನು ಒದಗಿಸಿಕೊಡುವಂತೆ ಬೆಳ್ತಂಗಡಿ ನಗರ ಪಂಚಾಯತ್ ಆಡಳಿತ ಮಂಡಳಿ ವತಿಯಿಂದ ಮನವಿ ಸಲ್ಲಿಸಲಾಯಿತು.


ಬೆಳ್ತಂಗಡಿ ಕೆಇಬಿ ರಸ್ತೆ ರೆಂಕೆದಗುತ್ತುವಾಗಿ- ಮಲ್ಲೊಟ್ಟು ಸಂಪರ್ಕಿಸುವ ರಸ್ತೆಯು ತೀರಾ ಹದಗೆಟ್ಟಿದ್ದು ಸಾರ್ವಜನಿಕರ/ವಿದ್ಯಾರ್ಥಿಗಳ ಹಾಗೂ ಉದ್ಯಮಿಗಳ ಸಂಚಾರಕ್ಕೆ ತೊಂದರೆಯಾಗುತ್ತಿದೆ. ಈ ರಸ್ತೆಯು ಹಾದು ಹೋಗುವ ಪ್ರದೇಶದಲ್ಲಿ ಸರಕಾರದ ಮೂರು ವಿದ್ಯಾರ್ಥಿ ನಿಲಯಗಳು, ಒಂದು ವಸತಿ ಶಾಲೆ, ಅಂಗನವಾಡಿಗಳು, ಪ್ರಾಥಮಿಕ ಶಾಲೆಗಳು, ಹಾಲಿನ ಡೈರಿ, ೧೦೦೦ಕ್ಕೂ ಅಧಿಕ ಕುಟುಂಬಗಳು ವಾಸಿಸುವ ಜನ ಪ್ರದೇಶವಾಗಿರುತ್ತದೆ. ಅದಲ್ಲದೇ “ಸಿರಿ” ಗ್ರಾಮೋದ್ಯೋಗ ಸಂಸ್ಥೆಯ ನೂತನ ಉತ್ಪಾದನಾ ಘಟಕವು ಸಂಪರ್ಕ ರಸ್ತೆಯ ಬದಿಯಲ್ಲೇ ನೂತನವಾಗಿ ಪ್ರಾರಂಭಗೊAಡಿದ್ದು ಈ ಪ್ರದೇಶದ ನಗರೀಕರಣಕ್ಕೆ ಹೊಸ ಮೆರುಗನ್ನು ನೀಡಿದೆ. ಪ್ರಸ್ತುತ ಈ ಸಂಪರ್ಕ ರಸ್ತೆಯನ್ನು ಬೆಳ್ತಂಗಡಿ – ಉಪ್ಪಿನಂಗಡಿ ಮುಖಾಂತರ ಪುತ್ತೂರನ್ನು ಸಂಪರ್ಕ ಕಲ್ಪಿಸುವ ಬೈಪಾಸ್ ರಸ್ತೆಯನ್ನಾಗಿ ಉಪಯೋಗಿಸುತ್ತಿದ್ದು, ಸದರಿ ರಸ್ತೆಯನ್ನು ಅಭಿವೃದ್ಧಿ ಪಡಿಸುವುದು ಸೂಕ್ತವೆಂದು ಬೆಳ್ತಂಗಡಿ ನಗರ ಪಂಚಾಯತ್ ಆಡಳಿತ ಮಂಡಳಿಯು ತೀರ್ಮಾನಿಸಿದೆ.
ಈ ಸಂದರ್ಭದಲ್ಲಿ ಪಟ್ಟಣ ಪಂಚಾಯತ್ ಅಧ್ಯಕ್ಷ ಜಯಾನಂದ ಗೌಡ, ಸ್ಥಾಯಿ ಸಮಿತಿ ಅಧ್ಯಕ್ಷ ಶರತ್ ಕುಮಾರ್ ಶೆಟ್ಟಿ, ಪ.ಪಂ. ಮುಖ್ಯ ಅಧಿಕಾರಿ ರಾಜೇಶ್, ಇಂಜಿನಿಯರ್ ಮಹಾವೀರ ಅರಿಗ, ಸದಸ್ಯರಾದ ಲೋಕೇಶ್, ಅಂಬರೀಶ್, ಪ್ರಮುಖರಾದ ರಾಜೇಶ್ ನಾಯಕ್, ಕರುಣಾಕರ, ಭುಜಂಗ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.

Related posts

ನಕ್ಸಲ್ ನಾಯಕ ವಿಕ್ರಮ್ ಗೌಡ ನಕ್ಸಲ್ ನಿಗ್ರಹ ದಳದ ಎನ್ ಕೌಂಟರ್ ನಲ್ಲಿ ಹತ್ಯೆ: ರಾಜ್ಯ ಸರ್ಕಾರ ತಕ್ಷಣ ಎನ್ ಕೌಂಟರ್ ನ ಬಗ್ಗೆ ನ್ಯಾಯಾಂಗ ತನಿಖೆ ನಡೆಸಬೇಕು: ಶೇಖರ್ ಲಾಯಿಲ

Suddi Udaya

ಬೆಳ್ತಂಗಡಿ ಮಾತೃಶ್ರೀ ಟೆಕ್ಸ್ ಟೈಲ್ಸ್ ನಲ್ಲಿ ಆಷಾಢ ಆಟಿ ಸೇಲ್, ಗ್ರಾಹಕರಿಂದ ಉತ್ತಮ‌ ಪ್ರತಿಕ್ರಿಯೆ

Suddi Udaya

ರಾಷ್ಟ್ರೀಯ ಟಾರ್ಗೆಟ್ ಬಾಲ್ ಫೆಡರೇಶನ್ ಕಪ್ ಪಂದ್ಯಾಟ: ರಾಷ್ಟ್ರಮಟ್ಟಕ್ಕೆ ಸೇಕ್ರೆಡ್ ಹಾರ್ಟ್ ಪ.ಪೂ ಕಾಲೇಜಿನ ವಿದ್ಯಾರ್ಥಿ ಸಿದ್ದಾರ್ಥ್ ಎಂ. ಸಿ ಆಯ್ಕೆ

Suddi Udaya

ವೇಣೂರು: ನಿವೃತ್ತ ಶಿಕ್ಷಕರಿಗೆ ವಿವಿಧ ಸಂಘ ಸಂಸ್ಥೆಗಳಿಂದ ಗೌರವಾರ್ಪಣೆ

Suddi Udaya

ಅ.4: ಕೊಕ್ಕಡ ಜೇಸಿಐಗೆ ಜೇಸಿ ವಲಯಾಧ್ಯಕ್ಷರ ಭೇಟಿ

Suddi Udaya

ಮಾಚಾರು ಗೋಪಾಲ ನಾಯ್ಕ ಅವರ ನಿಧನಕ್ಕೆ ದ.ಕ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಡಾ. ಎಂ.ಪಿ. ಶ್ರೀನಾಥ ರವರಿಂದ ಸಂತಾಪ

Suddi Udaya
error: Content is protected !!