September 6, 2026
ಗ್ರಾಮಾಂತರ ಸುದ್ದಿ

ಬೆಳ್ತಂಗಡಿ : ಕೆಇಬಿ ರಸ್ತೆ -ರೆಂಕೆದಗುತ್ತು-ಮಲ್ಲೊಟ್ಟು ಸಂಪರ್ಕ ರಸ್ತೆಗೆ ಅನುದಾನ ಒದಗಿಸುವಂತೆ ಡಾ. ಡಿ ವೀರೇಂದ್ರ ಹೆಗ್ಗಡೆಯವರಿಗೆ ಮನವಿ

ಬೆಳ್ತಂಗಡಿ: ಬೆಳ್ತಂಗಡಿ ನಗರದಿಂದ ಕೆಇಬಿ ರಸ್ತೆ ರೆಂಕೆದಗುತ್ತುವಾಗಿ – ಮಲ್ಲೊಟ್ಟು ಸಂಪರ್ಕಿಸುವ ರಸ್ತೆಯು ತೀರಾ ಹದಗೆಟ್ಟಿದ್ದು ರಸ್ತೆಯನ್ನು ಅಗಲೀಕರಣಗೊಳಿಸಿ, ಒಳಚರಂಡಿಗಳನ್ನು ನಿರ್ಮಿಸಿ ಅಭಿವೃದ್ಧಿಗೊಳಿಸುವುದು ಅನಿವಾರ್ಯವಾಗಿರುವ ಹಿನ್ನೆಲೆಯಲ್ಲಿ ರಸ್ತೆ ಕಾಮಗಾರಿಯನ್ನು ಕೈಗೊಳ್ಳಲು ಧರ್ಮಸ್ಥಳದ ಡಾ| ಡಿ. ವೀರೇಂದ್ರ ಹೆಗ್ಗಡೆಯವರಿಗೆ ರಾಜ್ಯಸಭಾ ಸದಸ್ಯರ ನಿಧಿಯಿಂದ ಅಗತ್ಯವಿರುವ ಅಂದಾಜು ರೂ. 2.೦೦ ಕೋಟಿ ಅನುದಾನವನ್ನು ಒದಗಿಸಿಕೊಡುವಂತೆ ಬೆಳ್ತಂಗಡಿ ನಗರ ಪಂಚಾಯತ್ ಆಡಳಿತ ಮಂಡಳಿ ವತಿಯಿಂದ ಮನವಿ ಸಲ್ಲಿಸಲಾಯಿತು.


ಬೆಳ್ತಂಗಡಿ ಕೆಇಬಿ ರಸ್ತೆ ರೆಂಕೆದಗುತ್ತುವಾಗಿ- ಮಲ್ಲೊಟ್ಟು ಸಂಪರ್ಕಿಸುವ ರಸ್ತೆಯು ತೀರಾ ಹದಗೆಟ್ಟಿದ್ದು ಸಾರ್ವಜನಿಕರ/ವಿದ್ಯಾರ್ಥಿಗಳ ಹಾಗೂ ಉದ್ಯಮಿಗಳ ಸಂಚಾರಕ್ಕೆ ತೊಂದರೆಯಾಗುತ್ತಿದೆ. ಈ ರಸ್ತೆಯು ಹಾದು ಹೋಗುವ ಪ್ರದೇಶದಲ್ಲಿ ಸರಕಾರದ ಮೂರು ವಿದ್ಯಾರ್ಥಿ ನಿಲಯಗಳು, ಒಂದು ವಸತಿ ಶಾಲೆ, ಅಂಗನವಾಡಿಗಳು, ಪ್ರಾಥಮಿಕ ಶಾಲೆಗಳು, ಹಾಲಿನ ಡೈರಿ, ೧೦೦೦ಕ್ಕೂ ಅಧಿಕ ಕುಟುಂಬಗಳು ವಾಸಿಸುವ ಜನ ಪ್ರದೇಶವಾಗಿರುತ್ತದೆ. ಅದಲ್ಲದೇ “ಸಿರಿ” ಗ್ರಾಮೋದ್ಯೋಗ ಸಂಸ್ಥೆಯ ನೂತನ ಉತ್ಪಾದನಾ ಘಟಕವು ಸಂಪರ್ಕ ರಸ್ತೆಯ ಬದಿಯಲ್ಲೇ ನೂತನವಾಗಿ ಪ್ರಾರಂಭಗೊAಡಿದ್ದು ಈ ಪ್ರದೇಶದ ನಗರೀಕರಣಕ್ಕೆ ಹೊಸ ಮೆರುಗನ್ನು ನೀಡಿದೆ. ಪ್ರಸ್ತುತ ಈ ಸಂಪರ್ಕ ರಸ್ತೆಯನ್ನು ಬೆಳ್ತಂಗಡಿ – ಉಪ್ಪಿನಂಗಡಿ ಮುಖಾಂತರ ಪುತ್ತೂರನ್ನು ಸಂಪರ್ಕ ಕಲ್ಪಿಸುವ ಬೈಪಾಸ್ ರಸ್ತೆಯನ್ನಾಗಿ ಉಪಯೋಗಿಸುತ್ತಿದ್ದು, ಸದರಿ ರಸ್ತೆಯನ್ನು ಅಭಿವೃದ್ಧಿ ಪಡಿಸುವುದು ಸೂಕ್ತವೆಂದು ಬೆಳ್ತಂಗಡಿ ನಗರ ಪಂಚಾಯತ್ ಆಡಳಿತ ಮಂಡಳಿಯು ತೀರ್ಮಾನಿಸಿದೆ.
ಈ ಸಂದರ್ಭದಲ್ಲಿ ಪಟ್ಟಣ ಪಂಚಾಯತ್ ಅಧ್ಯಕ್ಷ ಜಯಾನಂದ ಗೌಡ, ಸ್ಥಾಯಿ ಸಮಿತಿ ಅಧ್ಯಕ್ಷ ಶರತ್ ಕುಮಾರ್ ಶೆಟ್ಟಿ, ಪ.ಪಂ. ಮುಖ್ಯ ಅಧಿಕಾರಿ ರಾಜೇಶ್, ಇಂಜಿನಿಯರ್ ಮಹಾವೀರ ಅರಿಗ, ಸದಸ್ಯರಾದ ಲೋಕೇಶ್, ಅಂಬರೀಶ್, ಪ್ರಮುಖರಾದ ರಾಜೇಶ್ ನಾಯಕ್, ಕರುಣಾಕರ, ಭುಜಂಗ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.

Related posts

ಮುಂಡಾಜೆ: ಚಾಲಕನ ನಿಯಂತ್ರಣ ತಪ್ಪಿ ಉರುಳಿ ಬಿದ್ದ ಟೆಂಪೋ

Suddi Udaya

ಕುವೆಟ್ಟು ಸ.ಉ. ಹಿ.ಪ್ರಾ. ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಭರತನಾಟ್ಯ ವಿದ್ವತ್ ಪರೀಕ್ಷೆಯಲ್ಲಿ ಉಜಿರೆಯ ಸುಶ್ಮಿತಾ ರಾವ್ ಉನ್ನತ ಶ್ರೇಣಿ

Suddi Udaya

ಧರ್ಮಸ್ಥಳದ ಹೇಮಾವತಿ ವಿ ಹೆಗ್ಗಡೆಯವರಿಂದ ಹತ್ಯಡ್ಕದಲ್ಲಿ ವಾತ್ಸಲ್ಯ ಮನೆ ಹಸ್ತಾಂತರ

Suddi Udaya

ಲೂಮೋಸ್ – ಟೆಸರಾಕ್ಟ್ ಫಿಲ್ಮ್ ಸೊಸೈಟಿ ವಾರ್ಷಿಕ ಸಮಾರೋಪ ; ನಮ್ಮ ಕಲ್ಪನೆಯೇ ನಮ್ಮ ಮಿತಿ: ಡಾ. ರಾಘವೇಂದ್ರ

Suddi Udaya

ಗೇರುಕಟ್ಟೆ : ಶ್ರೀನಿಧಿ ಮೆಡಿಕಲ್ ಶುಭಾರಂಭ

Suddi Udaya
error: Content is protected !!