25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ: ಧೀಮತಿ ಜೈನ ಮಹಿಳಾ ಸಮಾಜದ ಮಾಸಿಕ ಸಭೆ

ಉಜಿರೆ: ಜೈನ ಧರ್ಮ ಕೇವಲ ಒಂದು ಮತ ಅಷ್ಟೇ ಅಲ್ಲ ಅದೊಂದು ಸರಳವಾದ ಜೀವನ ಶೈಲಿ. ಅದೊಂದು ವೈಚಾರಿಕತೆ, ನಾರಕ ತೀರ್ಯಂಚ ಗತಿಗಳಿಂದ ಮುಕ್ತಿ ಪಡೆದು ಮೋಕ್ಷ ಸಾಧನೆಗೆ ಜೈನ ಧರ್ಮ ದಾರಿ ತೋರುತ್ತದೆ ಎಂದು ಧೀಮತಿ ಜೈನ ಮಹಿಳಾ ಸಮಾಜದ ಮಾಸಿಕ ಸಭೆಯಲ್ಲಿ ,’ಆಧುನಿಕ ಜೀವನ ಶೈಲಿಯಲ್ಲಿ ಜೈನ ಧರ್ಮದ ಆಚರಣೆಯ ಪ್ರಸ್ತುತತೆ’ ಎಂಬ ವಿಷಯದ ಕುರಿತು ಕ್ಷೇಮವನ ಬೆಂಗಳೂರು ಇದರ ನಿರ್ದೇಶಕರಾದ ಶ್ರದ್ದಾ ಅಮಿತ್ ಅಭಿಪ್ರಾಯ ವ್ಯಕ್ತಪಡಿಸಿದರು.

ಯಾವುದೇ ಧರ್ಮದ ತತ್ವಗಳನ್ನು ವೈಜ್ಞಾನಿಕ ಚಿಂತನೆಗೆ ಒಳಪಡಿಸಿ ಸಮಾಜದ ಒಳಿತಿಗಾಗಿ ಸಕಾರಾತ್ಮಕವಾಗಿ ಅಳವಡಿಸಿಕೊಳ್ಳುವುದು ಇಂದಿನ ಅಗತ್ಯತೆಗಳಲ್ಲಿ ಒಂದು ಎಂದರು.


ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಡಾ.ರಜತ ಪಿ.ಶೆಟ್ಟಿ ಮಾತನಾಡಿ ಜೈನ ಧರ್ಮದ ನೈಜ ತಿರುಳನ್ನು ಅರ್ಥೈಸಿಕೊಂಡು ಪಾಲಿಸುವುದು ನೆಮ್ಮದಿಯ ಜೀವನಕ್ಕೆ ರಹದಾರಿ. ಜೈನ ಧರ್ಮದ ಮೂಲ ತತ್ವಗಳಾದ ಅಹಿಂಸೆ, ತ್ಯಾಗ ಅಸ್ಥೇಯ ಅಪರಿಗ್ರಹ ಹಾಗೂ ಅನೇಕಾಂತವಾದಗಳಲ್ಲಿ ಆಳವಾದ ಜೀವನದ ಸತ್ಯ ಅಡಗಿದೆ ಅದನ್ನು ಅರಿತಾಗ ಜೀವನ ಸಾರ್ಥಕವಾಗುವುದು ಎಂದರು. ಇದೇ ಸಂದರ್ಭದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳದ ಯೋಜನೆಗಳಲ್ಲಿ ವಿಶೇಷವಾಗಿ ತೊಡಗಿಸಿಕೊಂಡು ಮಹಿಳಾ ಸಬಲೀಕರಣಕ್ಕೆ ಕೊಡುಗೆ ನೀಡುತ್ತಿರುವ ಶ್ರದ್ಧಾ ಅಮಿತ್ ಅವರನ್ನು ದೀಮತಿ ಜೈನ ಮಹಿಳಾ ಸಮಾಜದ ವತಿಯಿಂದ ಅಭಿನಂದಿಸಿ ಗೌರವಿಸಲಾಯಿತು.


ಕಾರ್ಯಕ್ರಮದ ಆರಂಭದಲ್ಲಿ ಪೇಹಲ್ಗಾಮ್ ದಾಳಿಯಲ್ಲಿ ಮಡಿದ ನಾಗರಿಕರು ಹಾಗೂ ಪ್ರತಿದಾಳಿಯಲ್ಲಿ ಹುತಾತ್ಮರಾದ ಸೈನಿಕರಿಗೆ ಶ್ರದ್ಧಾಂಜಲಿ ಅರ್ಪಿಸಲಾಯಿತು.
ಸ್ಮೃತಿ ಜೈನ್ ಪ್ರಾರ್ಥಿಸಿ, ಸ್ಮಿತಾ ಜೈನ್ ಸ್ವಾಗತಿಸಿದರು. ಅಕ್ಷತಾ ಜೈನ್ ಅತಿಥಿಗಳನ್ನು ಪರಿಚಯಿಸಿದರು. ಪುನೀತ ಜೈನ್ ವಂದಿಸಿ, ದಿವ್ಯಾ ಕುಮಾರಿ ಕಾರ್ಯಕ್ರಮ ನಿರೂಪಿಸಿದರು.ಅಶ್ವಿನಿ ಪ್ರವೀಣ್ ಇಂದ್ರ ಹಾಗೂ ಉಲ್ಲಾಸಿನಿ ಕಂಬಳಿ ಸಹಕರಿಸಿದರು.

Related posts

ಅಂತಾರಾಷ್ಟ್ರೀಯ ಮಟ್ಟದ ಗುಣಮಟ್ಟ ಮತ್ತು ಸುರಕ್ಷತೆಯ ತಂತ್ರಜ್ಞಾನವನ್ನು ಹೊಂದಿರುವ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಗೆ ISO 27001 ಪ್ರಶಸ್ತಿ ಪ್ರದಾನ

Suddi Udaya

ಬೆಳ್ತಂಗಡಿ ತಾಲೂಕಿನ ಗ್ರಾಮ ಪಂಚಾಯಿತಿಗಳ ಎರಡನೇ ಅವಧಿಗೆ ಅಧ್ಯಕ್ಷ-ಉಪಾಧ್ಯಕ್ಷರ ಮೀಸಲಾತಿ ನಿಗದಿ ಕಾರ್ಯಕ್ರಮ

Suddi Udaya

ಭಾಜಪ ಬೆಳ್ತಂಗಡಿ ಮಂಡಲದ ವಿಶೇಷ ಕಾರ್ಯಕಾರಿಣಿ ಸಭೆ

Suddi Udaya

ಲಾಯಿಲ: ಗುರಿಂಗಾನ ಸೇತುವೆ ಹಾನಿಗೊಳಗಾಗಿದ್ದು ಸ್ಥಳಕ್ಕೆ ವಿ.ಪ. ಶಾಸಕ ಪ್ರತಾಪ್ ಸಿಂಹ ನಾಯಕ್ ಭೇಟಿ

Suddi Udaya

ಬಳಂಜ: ಗ್ರಾಮ ಸಭೆ

Suddi Udaya

ಬಳಂಜ ಗ್ರಾಮ ಪಂಚಾಯತ್ ವಿಶೇಷ ಚೇತನರ ಸಮನ್ವಯ ಗ್ರಾಮ ಸಭೆ

Suddi Udaya
error: Content is protected !!