July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ: ಧೀಮತಿ ಜೈನ ಮಹಿಳಾ ಸಮಾಜದ ಮಾಸಿಕ ಸಭೆ

ಉಜಿರೆ: ಜೈನ ಧರ್ಮ ಕೇವಲ ಒಂದು ಮತ ಅಷ್ಟೇ ಅಲ್ಲ ಅದೊಂದು ಸರಳವಾದ ಜೀವನ ಶೈಲಿ. ಅದೊಂದು ವೈಚಾರಿಕತೆ, ನಾರಕ ತೀರ್ಯಂಚ ಗತಿಗಳಿಂದ ಮುಕ್ತಿ ಪಡೆದು ಮೋಕ್ಷ ಸಾಧನೆಗೆ ಜೈನ ಧರ್ಮ ದಾರಿ ತೋರುತ್ತದೆ ಎಂದು ಧೀಮತಿ ಜೈನ ಮಹಿಳಾ ಸಮಾಜದ ಮಾಸಿಕ ಸಭೆಯಲ್ಲಿ ,’ಆಧುನಿಕ ಜೀವನ ಶೈಲಿಯಲ್ಲಿ ಜೈನ ಧರ್ಮದ ಆಚರಣೆಯ ಪ್ರಸ್ತುತತೆ’ ಎಂಬ ವಿಷಯದ ಕುರಿತು ಕ್ಷೇಮವನ ಬೆಂಗಳೂರು ಇದರ ನಿರ್ದೇಶಕರಾದ ಶ್ರದ್ದಾ ಅಮಿತ್ ಅಭಿಪ್ರಾಯ ವ್ಯಕ್ತಪಡಿಸಿದರು.

ಯಾವುದೇ ಧರ್ಮದ ತತ್ವಗಳನ್ನು ವೈಜ್ಞಾನಿಕ ಚಿಂತನೆಗೆ ಒಳಪಡಿಸಿ ಸಮಾಜದ ಒಳಿತಿಗಾಗಿ ಸಕಾರಾತ್ಮಕವಾಗಿ ಅಳವಡಿಸಿಕೊಳ್ಳುವುದು ಇಂದಿನ ಅಗತ್ಯತೆಗಳಲ್ಲಿ ಒಂದು ಎಂದರು.


ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಡಾ.ರಜತ ಪಿ.ಶೆಟ್ಟಿ ಮಾತನಾಡಿ ಜೈನ ಧರ್ಮದ ನೈಜ ತಿರುಳನ್ನು ಅರ್ಥೈಸಿಕೊಂಡು ಪಾಲಿಸುವುದು ನೆಮ್ಮದಿಯ ಜೀವನಕ್ಕೆ ರಹದಾರಿ. ಜೈನ ಧರ್ಮದ ಮೂಲ ತತ್ವಗಳಾದ ಅಹಿಂಸೆ, ತ್ಯಾಗ ಅಸ್ಥೇಯ ಅಪರಿಗ್ರಹ ಹಾಗೂ ಅನೇಕಾಂತವಾದಗಳಲ್ಲಿ ಆಳವಾದ ಜೀವನದ ಸತ್ಯ ಅಡಗಿದೆ ಅದನ್ನು ಅರಿತಾಗ ಜೀವನ ಸಾರ್ಥಕವಾಗುವುದು ಎಂದರು. ಇದೇ ಸಂದರ್ಭದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳದ ಯೋಜನೆಗಳಲ್ಲಿ ವಿಶೇಷವಾಗಿ ತೊಡಗಿಸಿಕೊಂಡು ಮಹಿಳಾ ಸಬಲೀಕರಣಕ್ಕೆ ಕೊಡುಗೆ ನೀಡುತ್ತಿರುವ ಶ್ರದ್ಧಾ ಅಮಿತ್ ಅವರನ್ನು ದೀಮತಿ ಜೈನ ಮಹಿಳಾ ಸಮಾಜದ ವತಿಯಿಂದ ಅಭಿನಂದಿಸಿ ಗೌರವಿಸಲಾಯಿತು.


ಕಾರ್ಯಕ್ರಮದ ಆರಂಭದಲ್ಲಿ ಪೇಹಲ್ಗಾಮ್ ದಾಳಿಯಲ್ಲಿ ಮಡಿದ ನಾಗರಿಕರು ಹಾಗೂ ಪ್ರತಿದಾಳಿಯಲ್ಲಿ ಹುತಾತ್ಮರಾದ ಸೈನಿಕರಿಗೆ ಶ್ರದ್ಧಾಂಜಲಿ ಅರ್ಪಿಸಲಾಯಿತು.
ಸ್ಮೃತಿ ಜೈನ್ ಪ್ರಾರ್ಥಿಸಿ, ಸ್ಮಿತಾ ಜೈನ್ ಸ್ವಾಗತಿಸಿದರು. ಅಕ್ಷತಾ ಜೈನ್ ಅತಿಥಿಗಳನ್ನು ಪರಿಚಯಿಸಿದರು. ಪುನೀತ ಜೈನ್ ವಂದಿಸಿ, ದಿವ್ಯಾ ಕುಮಾರಿ ಕಾರ್ಯಕ್ರಮ ನಿರೂಪಿಸಿದರು.ಅಶ್ವಿನಿ ಪ್ರವೀಣ್ ಇಂದ್ರ ಹಾಗೂ ಉಲ್ಲಾಸಿನಿ ಕಂಬಳಿ ಸಹಕರಿಸಿದರು.

Related posts

ವಸಂತ ಬಂಗೇರ ಅವರ ನಿಧನಕ್ಕೆ ಬಿಜೆಪಿ ಅಭ್ಯರ್ಥಿ ಕ್ಯಾ| ಬ್ರಿಜೇಶ್ ಚೌಟರಿಂದ ಸಂತಾಪ

Suddi Udaya

ಬದ್ಯಾರು ಜಂಕ್ಷನ್ ರಸ್ತೆಯಲ್ಲಿ ಸರಣಿ ಅಪಘಾತ, ನುಜ್ಜು ಗುಜ್ಜಾದ ವಾಹನಗಳು,ರಿಕ್ಷಾ ಡ್ರೈವರ್ ಗೆ ಗಾಯ

Suddi Udaya

10 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸಿದ ವೇಣೂರು ಪೊಲೀಸರು

Suddi Udaya

ಬಾರ್ಯ: ಬನ್ನೆoಗಳ ಸೇತುವೆ ಮೇಲೆ ಪ್ರಾಣಿ ತ್ಯಾಜ್ಯ ಎಸೆದು ವಿಕೃತಿ ಮೆರೆದ ಕಿಡಿಗೇಡಿಗಳು

Suddi Udaya

ಧರ್ಮಸ್ಥಳದಲ್ಲಿ ಮಂಜುನಾಥ ಸ್ವಾಮಿ ದರ್ಶನ ಪಡೆದ ಎಂ. ವೀರಪ್ಪ ಮೊಯ್ಲಿ

Suddi Udaya

ಕೊಡಗು ವಿವಿ ಸಿಂಡಿಕೇಟ್ ಸೆನೆಟ್ ಸದಸ್ಯರಾಗಿ ಕೆ.ಎನ್.ಜನಾರ್ಧನರವರ ನೇಮಕ: ಸಿರಿ ಸಂಸ್ಥೆಯಲ್ಲಿ ವಿಶೇಷ ಅಭಿನಂದನಾ ಕಾರ್ಯಕ್ರಮ

Suddi Udaya
error: Content is protected !!